ರವಿಶಂಕರ್​ ಗುರೂಜಿಗೆ ಫಿಜಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಲಭ್ಯ

ಫಿಜಿ ದೇಶವು ತನ್ನ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ಜಾಗತಿಕ ಆಧ್ಯಾತ್ಮಿಕ ಗುರು ಶ್ರೀಶ್ರೀ ರವಿಶಂಕರ್ ಅವರಿಗೆ ಪ್ರದಾನ ಮಾಡಿದೆ. ಶಾಂತಿ, ಸಾಮರಸ್ಯ, ಮತ್ತು ಮಾನವೀಯ ಸೇವೆಗಳಿಗಾಗಿ ಈ ಗೌರವ ಸಂದಿದೆ. ಅವರ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಮೂಲಕ ಮಾನಸಿಕ ಆರೋಗ್ಯ, ಶಿಕ್ಷಣ ಮತ್ತು ಸಮುದಾಯ ಅಭಿವೃದ್ಧಿಗೆ ಕೊಡುಗೆ ನೀಡುತ್ತಿದೆ.

ರವಿಶಂಕರ್​ ಗುರೂಜಿಗೆ ಫಿಜಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಲಭ್ಯ
ರವಿಶಂಕರ್​ ಗುರೂಜಿಗೆ ಫಿಜಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಲಭ್ಯ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Oct 27, 2024 | 7:11 PM

ಬೆಂಗಳೂರು, ಅಕ್ಟೋಬರ್ 27: ಜಾಗತಿಕ ಆಧ್ಯಾತ್ಮಿಕ ಗುರು, ಮಾನವತಾವಾದಿ ನಾಯಕ ಗುರುದೇವ್ ಶ್ರೀ ಶ್ರೀ ರವಿಶಂಕರ್​ ಗುರೂಜಿಗೆ (Ravi Shankar) ದಕ್ಷಿಣ ಪೆಸಿಫಿಕ್ ರಾಷ್ಟ್ರವಾದ ಫಿಜಿ ತನ್ನ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಮಾನವ ಸ್ಫೂರ್ತಿಯನ್ನು ನಿರಂತರವಾಗಿ ಎತ್ತಿ ಹಿಡಿಯುವ ನಿಟ್ಟಿನಲ್ಲಿ ಅವರು ಮಾಡುತ್ತಿರುವ ವಿವಿಧ ಸಮುದಾಯಗಳನ್ನು ಶಾಂತಿ ಮತ್ತು ಸಾಮರಸ್ಯದ ಮೂಲಕ ಒಂದಾಗಿಸುವ ಅವರ ಕಾರ್ಯಕ್ಕಾಗಿ ಈ ಪ್ರಶಸ್ತಿಯನ್ನು ನೀಡಲಾಗಿದೆ.

ರವಿಶಂಕರ್​ ಗುರೂಜಿಗೆ “ಹಾನರರಿ ಆಫಿಸರ್ ಆಫ್ ದಿ ಆರ್ಡರ್ ಆಫ್ ಫೀಜಿ” ಬಿರುದನ್ನು ಫಿಜಿ ರೀಪಬ್ಲಿಕ್​ನ ಅಧ್ಯಕ್ಷ ಹೆಚ್.ಇ ರಟು ವಿಲ್ಲಿಯಮೆ ಎಂ. ಕಟೋನಿವೆರಿ ಅವರು ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಆ ಮೂಲಕ ರವಿಶಂಕರ್​ ಗುರೂಜಿಗೆ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ನೀಡುವತ್ತಿರುವ ಆರನೇ ದೇಶವಾಗಿ ಫಿಜಿ ಹೊರಹೊಮ್ಮದೆ.

ಆರ್ಟ್ ಆಫ್ ಲಿವಿಂಗ್​ ಮೂಲಕ ರವಿಶಂಕರ್​ ಗುರೂಜಿ ಕಳೆದ 43 ವರ್ಷಗಳಿಂದ ಜನ ಸಮೂಹಕ್ಕೆ ಸಂತೋಷ ಮತ್ತು ಸಾಮರಸ್ಯವನ್ನು ಹರಡುತ್ತಿದ್ದಾರೆ. ಇದರೊಂದಿಗೆ ಅವರು ಮಾನಸಿಕ ಆರೋಗ್ಯ, ಶಿಕ್ಷಣ, ಪರಿಸರ, ಮಹಿಳಾ ಹಾಗೂ ಯುವಕ ಸಬಲೀಕರಣ, ಒತ್ತಡ ನಿವಾರಣೆ, ಧ್ಯಾನ ಹೀಗೆ ಅನೇಕಾನೇಕ ಕ್ಷೇತ್ರಗಳಲ್ಲಿ ಅವರು ನಿರ್ವಹಿಸುತ್ತಿರುವ ಕಾರ್ಯಗಳಿಗಾಗಿ ಈ ಪ್ರಶಸ್ತಿ ನೀಡಲಾಗಿದೆ.

ಇನ್ನು ಫಿಜಿ ಭೇಟಿ ವೇಳೆ ಉಪಪ್ರಧಾನಿ ವಿಲಿಯಮೆ ಗಾವೋಕ ಮತ್ತು ಫಿಜಿಯ ಸಂಯುಕ್ತ ರಾಷ್ಟ್ರಗಳ ವಸತಿ ಸಂಯೋಜಕ ಡಿರ್ಕ್ ವಾಗೆನರ್ ಸೇರಿದಂತೆ ಅನೇಕ ಗಣ್ಯರೊಡನೆ ರವಿಶಂಕರ್​ ಗುರೂಜಿ ಸಂವಾದವನ್ನು ಮಾಡಿದ್ದಾರೆ.

ಆರ್ಟ್ ಆಫ್ ಲಿವಿಂಗ್ ಸಂಸ್ಥೆಯು ಈ ದ್ವೀಪ ರಾಷ್ಟ್ರದಲ್ಲಿ ಯುವಕ ಸಬಲೀಕರಣ, ಸ್ಥಳೀಯ ಸಮುದಾಯಗಳ ಮಾನಸಿಕ ಆರೋಗ್ಯದ ಸುಧಾರಣೆ, ಕಾಲಾತೀತ ಜ್ಞಾನವಾದ ಆಯುರ್ವೇದದ ಜ್ಞಾನದ ಪರಿಚಯದ ಮೂಲಕ ಸಮಗ್ರ ಬೆಳವಣಿಗೆಗೆ ಆರ್ಟ್ ಆಫ್ ಲಿವಿಂಗ್ ಹೇಗೆ ಕಾಣಿಕೆ ನೀಡಬಹುದೆಂದು ಚರ್ಚಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಹಾಸನಾಂಬೆ ದರ್ಶನ ಪಡೆದ ಬಳಿಕ ಡಿ ಬಾಸ್ ಬಗ್ಗೆ ಮಾತಾಡಿದ ಗೆಳೆಯ ತರುಣ್ ಸುಧೀರ್
ಹಾಸನಾಂಬೆ ದರ್ಶನ ಪಡೆದ ಬಳಿಕ ಡಿ ಬಾಸ್ ಬಗ್ಗೆ ಮಾತಾಡಿದ ಗೆಳೆಯ ತರುಣ್ ಸುಧೀರ್
ಪ್ರಾರ್ಥನೆ ವೇಳೆ ಬಿತ್ತು ಹೂವು: ಕುಮಾರಸ್ವಾಮಿಗೆ ಶುಭ ಸೂಚನೆನಾ?
ಪ್ರಾರ್ಥನೆ ವೇಳೆ ಬಿತ್ತು ಹೂವು: ಕುಮಾರಸ್ವಾಮಿಗೆ ಶುಭ ಸೂಚನೆನಾ?
ಪ್ರಥಮ ಬಾರಿಗೆ ಚಾಮರಾಜನಗರಕ್ಕೆ ರಸಗೊಬ್ಬರ ಹೊತ್ತು ತಂದ ರೈಲು!
ಪ್ರಥಮ ಬಾರಿಗೆ ಚಾಮರಾಜನಗರಕ್ಕೆ ರಸಗೊಬ್ಬರ ಹೊತ್ತು ತಂದ ರೈಲು!
ಬಿಗ್​ಬಾಸ್ ಮನೆಯಲ್ಲಿ ಮಾನಸ ಹೇಗಿರಬೇಕು? ಸಲಹೆ ಕೊಟ್ಟ ಹನುಮಂತು
ಬಿಗ್​ಬಾಸ್ ಮನೆಯಲ್ಲಿ ಮಾನಸ ಹೇಗಿರಬೇಕು? ಸಲಹೆ ಕೊಟ್ಟ ಹನುಮಂತು
ಮಾಧುರಿ ಜೊತೆ ನೃತ್ಯ ಮಾಡುವಾಗ ವೇದಿಕೆ ಮೇಲೆ ಬಿದ್ದ ನಟಿ ವಿದ್ಯಾ ಬಾಲನ್
ಮಾಧುರಿ ಜೊತೆ ನೃತ್ಯ ಮಾಡುವಾಗ ವೇದಿಕೆ ಮೇಲೆ ಬಿದ್ದ ನಟಿ ವಿದ್ಯಾ ಬಾಲನ್
ವಕ್ಫ್​ ಮಂಡಳಿಯವರು ದೇವಸ್ಥಾನಕ್ಕೂ ನೋಟಿಸ್ ನೀಡುತ್ತಿದ್ದಾರೆ: ಯತ್ನಾಳ್​
ವಕ್ಫ್​ ಮಂಡಳಿಯವರು ದೇವಸ್ಥಾನಕ್ಕೂ ನೋಟಿಸ್ ನೀಡುತ್ತಿದ್ದಾರೆ: ಯತ್ನಾಳ್​
ಹಾಸನಾಂಬೆ ದರ್ಶನ ಪಡೆದ ಕುಮಾರಸ್ವಾಮಿ, ಪುತ್ರನ ಗೆಲುವಿಗಾಗಿ ವಿಶೇಷ ಪೂಜೆ
ಹಾಸನಾಂಬೆ ದರ್ಶನ ಪಡೆದ ಕುಮಾರಸ್ವಾಮಿ, ಪುತ್ರನ ಗೆಲುವಿಗಾಗಿ ವಿಶೇಷ ಪೂಜೆ
30 ಗ್ರಾಂ ಚಿನ್ನ, 100 ಗ್ರಾಂ ಬೆಳ್ಳಿ ಇದ್ದ ಬ್ಯಾಗ್ ವಾಪಸ್ ನೀಡಿದ ಕಂಡಕ್ಟರ್
30 ಗ್ರಾಂ ಚಿನ್ನ, 100 ಗ್ರಾಂ ಬೆಳ್ಳಿ ಇದ್ದ ಬ್ಯಾಗ್ ವಾಪಸ್ ನೀಡಿದ ಕಂಡಕ್ಟರ್
ಹೊನವಾಡ ಗ್ರಾಮದ 11 ಎಕರೆ ಜಮೀನು ಮಾತ್ರ ವಕ್ಫ್​ಗೆ ಸೇರಿದ್ದು; ಎಂ ಬಿ ಪಾಟೀಲ್
ಹೊನವಾಡ ಗ್ರಾಮದ 11 ಎಕರೆ ಜಮೀನು ಮಾತ್ರ ವಕ್ಫ್​ಗೆ ಸೇರಿದ್ದು; ಎಂ ಬಿ ಪಾಟೀಲ್
ವೀಕೆಂಡ್‌ನಲ್ಲಿ ಹಾಸನಾಂಬೆ ದರ್ಶನಕ್ಕೆ ಭಕ್ತಸಾಗರ
ವೀಕೆಂಡ್‌ನಲ್ಲಿ ಹಾಸನಾಂಬೆ ದರ್ಶನಕ್ಕೆ ಭಕ್ತಸಾಗರ