AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ದಾಳಿಯ ನಂತರ ಶ್ರೀನಗರದಲ್ಲಿ ಡ್ರೋನ್‌, ಮಾನವರಹಿತ ವಾಹನಗಳಿಗ ನಿಷೇಧ

"ಕೃಷಿ, ಪರಿಸರ ಸಂರಕ್ಷಣೆ ಮತ್ತು ವಿಪತ್ತು ತಗ್ಗಿಸುವಿಕೆ" ಕ್ಷೇತ್ರಗಳಲ್ಲಿ ಮ್ಯಾಪಿಂಗ್, ಸಮೀಕ್ಷೆಗಳು ಮತ್ತು ಕಣ್ಗಾವಲುಗಾಗಿ ಡ್ರೋನ್‌ಗಳನ್ನು ಬಳಸುವ ಸರ್ಕಾರಿ ಇಲಾಖೆಗಳು ಸಾರ್ವಜನಿಕ ಹಿತದೃಷ್ಟಿಯಿಂದ ಇಂತಹ ಯಾವುದೇ ಚಟುವಟಿಕೆಯನ್ನು ಕೈಗೊಳ್ಳುವ ಮೊದಲು ಸ್ಥಳೀಯ ಪೊಲೀಸರಿಗೆ ತಿಳಿಸಬೇಕಾಗುತ್ತದೆ ಎಂದು ಆದೇಶದಲ್ಲಿ ಹೇಳಲಾಗಿದೆ.

ಜಮ್ಮು ದಾಳಿಯ ನಂತರ ಶ್ರೀನಗರದಲ್ಲಿ ಡ್ರೋನ್‌, ಮಾನವರಹಿತ ವಾಹನಗಳಿಗ ನಿಷೇಧ
ಜಮ್ಮುವಿನಲ್ಲಿ ಭದ್ರತಾ ಪಡೆ ಸಿಬ್ಬಂದಿ ಹೈ ಅಲರ್ಟ್​​
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jul 04, 2021 | 5:00 PM

ಶ್ರೀನಗರ: ಜಮ್ಮು ವಾಯುಪಡೆ ನೆಲೆ ಮೇಲೆ ಡ್ರೋನ್‌ಗಳನ್ನು ಬಳಸಿ ದಾಳಿ ನಡೆಸಿದ ಕೆಲ ದಿನಗಳ ನಂತರ ಶ್ರೀನಗರ ಜಿಲ್ಲಾಡಳಿತವು ಡ್ರೋನ್‌ಗಳು ಮತ್ತು ಅಂತಹುದೇ ಮಾನವರಹಿತ ವೈಮಾನಿಕ ವಾಹನಗಳ ಮೇಲೆ ನಿರ್ಬಂಧ ಹೇರಿದೆ. ಶ್ರೀನಗರದ ಜಿಲ್ಲಾಧಿಕಾರಿ ಮೊಹಮ್ಮದ್ ಅಜಾಜ್ ಅವರು ಶನಿವಾರ ” ಶ್ರೀನಗರ ಜಿಲ್ಲಾ ಪ್ರಾದೇಶಿಕ ವ್ಯಾಪ್ತಿಯಲ್ಲಿ ಡ್ರೋನ್‌ಗಳು ಮತ್ತು ಅಂತಹುದೇ ಮಾನವರಹಿತ ವೈಮಾನಿಕ ವಾಹನಗಳನ್ನು ಸಂಗ್ರಹಿಸುವುದು, ಮಾರಾಟ ಮಾಡುವುದು, ಸ್ವಾಧೀನಪಡಿಸಿಕೊಳ್ಳುವುದು, ಬಳಸುವುದು ಮತ್ತು ಸಾಗಿಸುವುದನ್ನು” ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. “ಈಗಾಗಲೇ ಡ್ರೋನ್ ಕ್ಯಾಮೆರಾಗಳು / ಅಂತಹುದೇ ಮಾನವರಹಿತ ವೈಮಾನಿಕ ವಾಹನಗಳನ್ನು ಹೊಂದಿರುವ ವ್ಯಕ್ತಿಗಳು ಸರಿಯಾದ ರಶೀದಿಯಡಿಯಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ಹಾಜರುಪಡಿಸಬೇಕೆಂದು ಆದೇಶಿಸಲಾಗಿದೆ” ಎಂದು ಅಜಾಜ್ ಆದೇಶದಲ್ಲಿ ತಿಳಿಸಿದ್ದಾರೆ.

“ಕೃಷಿ, ಪರಿಸರ ಸಂರಕ್ಷಣೆ ಮತ್ತು ವಿಪತ್ತು ತಗ್ಗಿಸುವಿಕೆ” ಕ್ಷೇತ್ರಗಳಲ್ಲಿ ಮ್ಯಾಪಿಂಗ್, ಸಮೀಕ್ಷೆಗಳು ಮತ್ತು ಕಣ್ಗಾವಲುಗಾಗಿ ಡ್ರೋನ್‌ಗಳನ್ನು ಬಳಸುವ ಸರ್ಕಾರಿ ಇಲಾಖೆಗಳು ಸಾರ್ವಜನಿಕ ಹಿತದೃಷ್ಟಿಯಿಂದ ಇಂತಹ ಯಾವುದೇ ಚಟುವಟಿಕೆಯನ್ನು ಕೈಗೊಳ್ಳುವ ಮೊದಲು ಸ್ಥಳೀಯ ಪೊಲೀಸರಿಗೆ ತಿಳಿಸಬೇಕಾಗುತ್ತದೆ ಎಂದು ಅದು ಹೇಳಿದೆ. “ಈ ಆದೇಶದ ಯಾವುದೇ ಉಲ್ಲಂಘನೆಯು ಸಂಬಂಧಿತ ಕಾನೂನುಗಳ ಪ್ರಕಾರ ಶಿಕ್ಷಾರ್ಹ ಕ್ರಮವನ್ನು ಎದುರಿಸಬೇಕಾಗುತ್ತದೆ” ಎಂದು ಅವರು ಹೇಳಿದರು.

ಈ ವಾರದ ಆರಂಭದಲ್ಲಿ ಗಡಿ ಜಿಲ್ಲೆಯಾದ ರಾಜೌರಿ ಮತ್ತು ಕಥುವಾ ಕೂಡಾ ಇದೇ ರೀತಿಯ ಆದೇಶಗಳನ್ನು ಹೊರಡಿಸಿದವು.ತಮ್ಮ ಪ್ರದೇಶಗಳಲ್ಲಿ ಡ್ರೋನ್‌ಗಳು ಮತ್ತು ಕಡಿಮೆ ಹಾರುವ ವಸ್ತುಗಳ ಕಾರ್ಯಾಚರಣೆಯನ್ನು ನಿಷೇಧಿಸಿದವು.

ಭಾನುವಾರ, ಜಮ್ಮುವಿನ ಭಾರತೀಯ ವಾಯುಪಡೆಯ ನೆಲೆಯಲ್ಲಿ ಎರಡು ಸ್ಫೋಟಗಳು ವರದಿಯಾಗಿದ್ದು, ಇಬ್ಬರು ಭದ್ರತಾ ಸಿಬ್ಬಂದಿಗಳು ಗಾಯಗೊಂಡು ಕಟ್ಟಡಕ್ಕೆ ಹಾನಿಯಾಗಿದೆ. ಜಮ್ಮುವಿನ ಕಲುಚಕ್ ಮಿಲಿಟರಿ ನೆಲೆಯ ಮೇಲೆ ಸುಳಿದಾಡುತ್ತಿರುವ ಅಪರಿಚಿತ ಡ್ರೋನ್‌ಗಳ ಮೇಲೆ ಗುಂಡು ಹಾರಿಸಿದ್ದರಿಂದ ಭದ್ರತಾ ಪಡೆಗಳು 24 ಗಂಟೆಗಳ ಒಳಗೆ ಇದೇ ರೀತಿಯ ದಾಳಿಯನ್ನು ತಡೆದವು. ಈ ಪ್ರದೇಶದ ಮಿಲಿಟರಿ ನೆಲೆಗಳ ಮೇಲೆ ಇಂತಹ ಹಲವಾರು ವೀಕ್ಷಣೆಗಳು ವರದಿಯಾಗಿವೆ.

ಭಾನುವಾರದ ದಾಳಿಯ ಪ್ರಾಥಮಿಕ ತನಿಖೆಗಳು ಜಮ್ಮು ವಾಯುಪಡೆಯ ನಿಲ್ದಾಣದಲ್ಲಿ ಡ್ರೋನ್ ದಾಳಿಯಲ್ಲಿ ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ (ಎಲ್‌ಇಟಿ) ಕೈವಾಡವನ್ನು ಸೂಚಿಸಿವೆ. ತಜ್ಞರ ಪ್ರಕಾರ, ದೇಶದ ಪ್ರಮುಖ ರಕ್ಷಣಾ ಸ್ಥಾಪನೆಯ ಮೇಲಿನ ದಾಳಿಯಲ್ಲಿ ಡ್ರೋನ್‌ಗಳನ್ನು ಬಳಸುತ್ತಿರುವುದು ಇದೇ ಮೊದಲು.

ಗುರುವಾರ, ಭಾರತೀಯ ಸೇನೆಯ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರು ಡ್ರೋನ್‌ಗಳ ಸುಲಭ ಲಭ್ಯತೆಯು ರಾಜ್ಯ ಮತ್ತು ರಾಜ್ಯೇತರ ಜನರಿಗೆ ಅವುಗಳನ್ನು ಬಳಸಲು ಅವಕಾಶ ಮಾಡಿಕೊಟ್ಟಿದೆ ಮತ್ತು ಅವುಗಳನ್ನು ನಿರ್ಮಿಸುವುದು “ಮನೆಯಲ್ಲಿ ನಿಭಾಯಿಸಬಹುದಾದ DIY ಯೋಜನೆಗೆ” ಹೋಲುತ್ತದೆ ಎಂದು ಹೇಳಿದರು.

ಇದನ್ನೂ ಓದಿ: ಇಸ್ಲಾಮಾಬಾದ್‌ನಲ್ಲಿ ಭಾರತೀಯ ಹೈಕಮಿಷನ್ ಮೇಲೆ ಡ್ರೋನ್ ಹಾರಾಟ; ಪ್ರತಿಭಟಿಸಿದ ಭಾರತ

ಇದನ್ನೂ ಓದಿ:  ಜಮ್ಮುವಿನ ಮೂರು ಪ್ರತ್ಯೇಕ ಸ್ಥಳಗಳಲ್ಲಿ ಇಂದು ಮುಂಜಾನೆ ಮತ್ತೆ 3 ಡ್ರೋನ್​​ಗಳ ಹಾರಾಟ; ಭದ್ರತಾ ಪಡೆಗಳು ಹೈ ಅಲರ್ಟ್​

(Srinagar district administration imposed restrictions on drones and similar unmanned aerial vehicles )

Published On - 4:59 pm, Sun, 4 July 21

ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ
Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ
ಬೆಂಗಳೂರು ಕಾಲ್ತುಳಿತ: ಘೋರ ದುರಂತವನ್ನು ಕನ್ನಡಿಗರು ಯಾವತ್ತೂ ಮರೆಯಲಾರರು
ಬೆಂಗಳೂರು ಕಾಲ್ತುಳಿತ: ಘೋರ ದುರಂತವನ್ನು ಕನ್ನಡಿಗರು ಯಾವತ್ತೂ ಮರೆಯಲಾರರು
ನನಗೂ ಉಸಿರುಗಟ್ಟಿತ್ತ; ಸ್ಟೇಡಿಯಂ ಕರಾಳ ಅನುಭವ ಬಿಚ್ಚಿಟ್ಟ ಚಂದನ್ ಶೆಟ್ಟಿ
ನನಗೂ ಉಸಿರುಗಟ್ಟಿತ್ತ; ಸ್ಟೇಡಿಯಂ ಕರಾಳ ಅನುಭವ ಬಿಚ್ಚಿಟ್ಟ ಚಂದನ್ ಶೆಟ್ಟಿ
ಸ್ಮಶಾನವಾದ ಚಿನ್ನಸ್ವಾಮಿ ಸ್ಟೇಡಿಯಂ, ದುರಂತಕ್ಕೆ ಸಾಕ್ಷಿಯಾದ ರಾಶಿ ಚಪ್ಪಲಿ
ಸ್ಮಶಾನವಾದ ಚಿನ್ನಸ್ವಾಮಿ ಸ್ಟೇಡಿಯಂ, ದುರಂತಕ್ಕೆ ಸಾಕ್ಷಿಯಾದ ರಾಶಿ ಚಪ್ಪಲಿ