AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಶಕಗಳ ನಂತರ ಜಮ್ಮು-ಕಾಶ್ಮೀರದಲ್ಲಿ ಚಲನಚಿತ್ರ ಪ್ರದರ್ಶನ ಆರಂಭ; ಸೆ. 20 ರಂದು ಮಲ್ಟಿಪ್ಲೆಕ್ಸ್ ಓಪನ್​

ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದ ಸೋನ್​ವಾರದಲ್ಲಿ ಮಂಗಳವಾರ (ಸೆ.20) ಮಲ್ಟಿಪ್ಲೆಕ್ಸ್​​ವೊಂದನ್ನು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಉದ್ಘಾಟಿಸಲಿದ್ದಾರೆ ಎಂದು ಖಾಸಗಿ ಸುದ್ದಿ ಸಂಸ್ಥೆ ಇಂಡಿಯಾ ಡಾಟ್​ ಕಾಮ್​ ವರದಿ ಮಾಡಿದೆ.

ದಶಕಗಳ ನಂತರ ಜಮ್ಮು-ಕಾಶ್ಮೀರದಲ್ಲಿ ಚಲನಚಿತ್ರ ಪ್ರದರ್ಶನ ಆರಂಭ; ಸೆ. 20 ರಂದು ಮಲ್ಟಿಪ್ಲೆಕ್ಸ್ ಓಪನ್​
ರವಿವಾರ ಉದ್ಘಾಟನೆಯಾದ ಮಲ್ಟಿಫ್ಲೆಕ್ಸ್​​
TV9 Web
| Edited By: ವಿವೇಕ ಬಿರಾದಾರ|

Updated on:Sep 18, 2022 | 10:22 PM

Share

ಶ್ರೀನಗರ: ದಶಕಗಳ ನಂತರ ಜಮ್ಮು ಮತ್ತು ಕಾಶ್ಮೀರದ (Jammu and Kashmir) ಜನರಿಗೆ ಮತ್ತೆ ಮಲ್ಟಿಪ್ಲೆಕ್ಸ್​ಗಳಲ್ಲಿ ಚಲನಚಿತ್ರ (Cinema) ನೋಡುವ ಭಾಗ್ಯ ದೊರೆತಿದೆ. ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದ (Srinagar) ಸೋನ್​ವಾರದಲ್ಲಿ ಮಂಗಳವಾರ (ಸೆ.20) ಮಲ್ಟಿಪ್ಲೆಕ್ಸ್​​ವೊಂದನ್ನು (Multiplex) ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಉದ್ಘಾಟಿಸಲಿದ್ದಾರೆ ಎಂದು ಖಾಸಗಿ ಸುದ್ದಿ ಸಂಸ್ಥೆ ಇಂಡಿಯಾ ಡಾಟ್​ ಕಾಮ್​ ವರದಿ ಮಾಡಿದೆ.

ವರದಿಯ ಪ್ರಕಾರ, ಮಲ್ಟಿಪ್ಲೆಕ್ಸ್​ನಲ್ಲಿ, ಅಮೀರ್ ಖಾನ್ ಮತ್ತು ಕರೀನಾ ಕಪೂರ್ ಖಾನ್ ಅಭಿನಯದ ಲಾಲ್ ಸಿಂಗ್ ಚಡ್ಡಾ ಚಿತ್ರವನ್ನು ಪ್ರದರ್ಶಿಸಲಾಗುತ್ತದೆ. ಈ INOX ಮಲ್ಟಿಪ್ಲೆಕ್ಸ್ ಒಟ್ಟು 520 ಆಸನಗಳ ಸಾಮರ್ಥ್ಯದ ಮೂರು ಚಿತ್ರಮಂದಿರಗಳನ್ನು ಹೊಂದಿರುತ್ತದೆ.

ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಇಂದು ಭಾನುವಾರ ದಕ್ಷಿಣ ಕಾಶ್ಮೀರದ ಜಿಲ್ಲೆಗಳಾದ ಪುಲ್ವಾಮಾ ಮತ್ತು ಶೋಪಿಯಾನ್‌ನಲ್ಲಿ ಸಿನಿಮಾ ಹಾಲ್‌ಗಳನ್ನು ಉದ್ಘಾಟಿಸಿದರು. ಅನಂತನಾಗ್, ಶ್ರೀನಗರ, ಬಂಡಿಪೋರಾ, ಗಂದರ್‌ಬಾಲ್, ದೋಡಾ, ರಾಜೌರಿ, ಪೂಂಚ್, ಕಿಶ್ತ್ವಾರ್ ಮತ್ತು ರಿಯಾಸಿಗಳಲ್ಲಿ ಕೂಡ ಚಿತ್ರಮಂದಿರಗಳು ಶೀಘ್ರದಲ್ಲೇ ಉದ್ಘಾಟನೆಗೊಳ್ಳಲಿವೆ ಎಂದು ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು “ನಾವು ಶೀಘ್ರದಲ್ಲೇ ಜಮ್ಮು ಮತ್ತು ಕಾಶ್ಮೀರದ ಪ್ರತಿಯೊಂದು ಜಿಲ್ಲೆಗಳಲ್ಲಿ ಇಂತಹ ಬಹುಪಯೋಗಿ ಚಿತ್ರಮಂದಿರಗಳನ್ನು ನಿರ್ಮಿಸುತ್ತೇವೆ. ಇಂದು ಉದ್ಘಾಟಿಸಲಾದ ಚಿತ್ರಮಂದಿರಗಳನ್ನು ಪುಲ್ವಾಮಾ ಮತ್ತು ಶೋಪಿಯಾನ್‌ನ ಯುವಕರಿಗೆ ಅರ್ಪಿಸುತ್ತೇನೆ” ಎಂದು ತಿಳಿಸಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:22 pm, Sun, 18 September 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!