Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಶಕಗಳ ನಂತರ ಜಮ್ಮು-ಕಾಶ್ಮೀರದಲ್ಲಿ ಚಲನಚಿತ್ರ ಪ್ರದರ್ಶನ ಆರಂಭ; ಸೆ. 20 ರಂದು ಮಲ್ಟಿಪ್ಲೆಕ್ಸ್ ಓಪನ್​

ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದ ಸೋನ್​ವಾರದಲ್ಲಿ ಮಂಗಳವಾರ (ಸೆ.20) ಮಲ್ಟಿಪ್ಲೆಕ್ಸ್​​ವೊಂದನ್ನು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಉದ್ಘಾಟಿಸಲಿದ್ದಾರೆ ಎಂದು ಖಾಸಗಿ ಸುದ್ದಿ ಸಂಸ್ಥೆ ಇಂಡಿಯಾ ಡಾಟ್​ ಕಾಮ್​ ವರದಿ ಮಾಡಿದೆ.

ದಶಕಗಳ ನಂತರ ಜಮ್ಮು-ಕಾಶ್ಮೀರದಲ್ಲಿ ಚಲನಚಿತ್ರ ಪ್ರದರ್ಶನ ಆರಂಭ; ಸೆ. 20 ರಂದು ಮಲ್ಟಿಪ್ಲೆಕ್ಸ್ ಓಪನ್​
ರವಿವಾರ ಉದ್ಘಾಟನೆಯಾದ ಮಲ್ಟಿಫ್ಲೆಕ್ಸ್​​
Follow us
TV9 Web
| Updated By: ವಿವೇಕ ಬಿರಾದಾರ

Updated on:Sep 18, 2022 | 10:22 PM

ಶ್ರೀನಗರ: ದಶಕಗಳ ನಂತರ ಜಮ್ಮು ಮತ್ತು ಕಾಶ್ಮೀರದ (Jammu and Kashmir) ಜನರಿಗೆ ಮತ್ತೆ ಮಲ್ಟಿಪ್ಲೆಕ್ಸ್​ಗಳಲ್ಲಿ ಚಲನಚಿತ್ರ (Cinema) ನೋಡುವ ಭಾಗ್ಯ ದೊರೆತಿದೆ. ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದ (Srinagar) ಸೋನ್​ವಾರದಲ್ಲಿ ಮಂಗಳವಾರ (ಸೆ.20) ಮಲ್ಟಿಪ್ಲೆಕ್ಸ್​​ವೊಂದನ್ನು (Multiplex) ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಉದ್ಘಾಟಿಸಲಿದ್ದಾರೆ ಎಂದು ಖಾಸಗಿ ಸುದ್ದಿ ಸಂಸ್ಥೆ ಇಂಡಿಯಾ ಡಾಟ್​ ಕಾಮ್​ ವರದಿ ಮಾಡಿದೆ.

ವರದಿಯ ಪ್ರಕಾರ, ಮಲ್ಟಿಪ್ಲೆಕ್ಸ್​ನಲ್ಲಿ, ಅಮೀರ್ ಖಾನ್ ಮತ್ತು ಕರೀನಾ ಕಪೂರ್ ಖಾನ್ ಅಭಿನಯದ ಲಾಲ್ ಸಿಂಗ್ ಚಡ್ಡಾ ಚಿತ್ರವನ್ನು ಪ್ರದರ್ಶಿಸಲಾಗುತ್ತದೆ. ಈ INOX ಮಲ್ಟಿಪ್ಲೆಕ್ಸ್ ಒಟ್ಟು 520 ಆಸನಗಳ ಸಾಮರ್ಥ್ಯದ ಮೂರು ಚಿತ್ರಮಂದಿರಗಳನ್ನು ಹೊಂದಿರುತ್ತದೆ.

ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಇಂದು ಭಾನುವಾರ ದಕ್ಷಿಣ ಕಾಶ್ಮೀರದ ಜಿಲ್ಲೆಗಳಾದ ಪುಲ್ವಾಮಾ ಮತ್ತು ಶೋಪಿಯಾನ್‌ನಲ್ಲಿ ಸಿನಿಮಾ ಹಾಲ್‌ಗಳನ್ನು ಉದ್ಘಾಟಿಸಿದರು. ಅನಂತನಾಗ್, ಶ್ರೀನಗರ, ಬಂಡಿಪೋರಾ, ಗಂದರ್‌ಬಾಲ್, ದೋಡಾ, ರಾಜೌರಿ, ಪೂಂಚ್, ಕಿಶ್ತ್ವಾರ್ ಮತ್ತು ರಿಯಾಸಿಗಳಲ್ಲಿ ಕೂಡ ಚಿತ್ರಮಂದಿರಗಳು ಶೀಘ್ರದಲ್ಲೇ ಉದ್ಘಾಟನೆಗೊಳ್ಳಲಿವೆ ಎಂದು ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು “ನಾವು ಶೀಘ್ರದಲ್ಲೇ ಜಮ್ಮು ಮತ್ತು ಕಾಶ್ಮೀರದ ಪ್ರತಿಯೊಂದು ಜಿಲ್ಲೆಗಳಲ್ಲಿ ಇಂತಹ ಬಹುಪಯೋಗಿ ಚಿತ್ರಮಂದಿರಗಳನ್ನು ನಿರ್ಮಿಸುತ್ತೇವೆ. ಇಂದು ಉದ್ಘಾಟಿಸಲಾದ ಚಿತ್ರಮಂದಿರಗಳನ್ನು ಪುಲ್ವಾಮಾ ಮತ್ತು ಶೋಪಿಯಾನ್‌ನ ಯುವಕರಿಗೆ ಅರ್ಪಿಸುತ್ತೇನೆ” ಎಂದು ತಿಳಿಸಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:22 pm, Sun, 18 September 22

ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
VIDEO: ಮೊದಲು ಕಿತ್ತಾಟ... ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ
VIDEO: ಮೊದಲು ಕಿತ್ತಾಟ... ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ
ಹುಲಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ: ಅಪರೂಪದ ವಿಡಿಯೋ ವೈರಲ್​
ಹುಲಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ: ಅಪರೂಪದ ವಿಡಿಯೋ ವೈರಲ್​