AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀನಿವಾಸ್​, ಗೌತಮ್​ ಗಂಭೀರ್​ ಮತ್ತಿತರರು ಜನರನ್ನು ವಂಚಿಸುತ್ತಿಲ್ಲ.. ಸಹಾಯ ಮಾಡುತ್ತಿದ್ದಾರೆ: ದೆಹಲಿ ಪೊಲೀಸ್​

ಕೊವಿಡ್​ 19 ಔಷಧ, ಆಕ್ಸಿಜನ್, ಪ್ಲಾಸ್ಮಾ, ಆಸ್ಪತ್ರೆಗಳಲ್ಲಿ ಬೆಡ್​ ಅಗತ್ಯ ಇರುವವರಿಗೆ ಯಾವುದೇ ತಾರತಮ್ಯ ಇಲ್ಲದೆ ಸಹಾಯ ಮಾಡುತ್ತಿದ್ದಾರೆ ಎಂದು ದೆಹಲಿ ಪೊಲೀಸರು ಹೈಕೋರ್ಟ್​ಗೆ ತಿಳಿಸಿದ್ದಾರೆ.

ಶ್ರೀನಿವಾಸ್​, ಗೌತಮ್​ ಗಂಭೀರ್​ ಮತ್ತಿತರರು ಜನರನ್ನು ವಂಚಿಸುತ್ತಿಲ್ಲ.. ಸಹಾಯ ಮಾಡುತ್ತಿದ್ದಾರೆ: ದೆಹಲಿ ಪೊಲೀಸ್​
ಗೌತಮ್​ ಗಂಭೀರ್​
Lakshmi Hegde
|

Updated on: May 17, 2021 | 2:10 PM

Share

ಆಲ್​ ಇಂಡಿಯಾ ಯೂತ್​ ಕಾಂಗ್ರೆಸ್​ನ ಅಧ್ಯಕ್ಷ ಶ್ರೀನಿವಾಸ್​ ಬಿ.ವಿ., ಬಿಜೆಪಿ ಎಂಪಿ ಗೌತಮ್​ ಗಂಭೀರ್​, ಆಪ್​ ಶಾಸಕ ದಿಲೀಪ್​ ಪಾಂಡೆ ಮತ್ತಿತರರ ವಿರುದ್ಧ, ಬ್ಲ್ಯಾಕ್​ ಮಾರ್ಕೆಟ್​ (ಕಾಳಸಂತೆ)ನಲ್ಲಿ ಕೊವಿಡ್ 19 ಔಷಧಗಳನ್ನು ಮಾರುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಸದ್ಯ ಈ ಪ್ರಕರಣದ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ನಡೆಸುತ್ತಿದೆ. ಆದರೆ ಇಂದು ದೆಹಲಿ ಪೊಲೀಸರು ಈ ರಾಜಕಾರಣಿಗಳ ಪರ ಕೋರ್ಟ್​ಗೆ ವರದಿ ನೀಡಿದ್ದು, ಇವರೆಲ್ಲ ಕಾಳಸಂತೆಯಲ್ಲಿ ಔಷಧ ಮಾರಾಟ ಮಾಡುತ್ತಿದ್ದಾರೆ ಎಂಬುದಕ್ಕೆ ಸಾಕ್ಷಿಗಳಿಲ್ಲ ಎಂದು ತಿಳಿಸಿದ್ದಾರೆ.

ಇವರೆಲ್ಲ ಬ್ಲ್ಯಾಕ್​ ಮಾರ್ಕೆಟ್​​ನಲ್ಲಿ ಕೊವಿಡ್​ ಔಷಧಗಳ ಮಾರಾಟ ದಂಧೆ ನಡೆಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದ್ದರಿಂದ ವಿಚಾರಣೆಗೆ ಒಳಪಡಿಸಲಾಗಿತ್ತು. ನಮಗೆ ಯಾವುದೇ ವಂಚನೆ ಕಂಡುಬಂದಿಲ್ಲ. ಎಲ್ಲರೂ ಸ್ವಯಂಪ್ರೇರಿತರಾಗಿ ಕೊವಿಡ್ 19 ರೋಗಿಗಳಿಗೆ ಮತ್ತು ಅವರ ಕುಟುಂಬಗಳಿಗೆ ಸಹಾಯ ಮಾಡುತ್ತಿದ್ದಾರೆ. ಕೊವಿಡ್​ 19 ಔಷಧ, ಆಕ್ಸಿಜನ್, ಪ್ಲಾಸ್ಮಾ, ಆಸ್ಪತ್ರೆಗಳಲ್ಲಿ ಬೆಡ್​ ಅಗತ್ಯ ಇರುವವರಿಗೆ ಯಾವುದೇ ತಾರತಮ್ಯ ಇಲ್ಲದೆ ಸಹಾಯ ಮಾಡುತ್ತಿದ್ದಾರೆ. ಹಾಗೆ ಮಾಡಿದ ಸಹಾಯಕ್ಕೆ ಪ್ರತಿಯಾಗಿ ಹಣವನ್ನೂ ಪಡೆದಿಲ್ಲ ಎಂಬುದು ಗೊತ್ತಾಗಿದೆ ಎಂದು ದೆಹಲಿ ಪೊಲೀಸ್​ ಅಪರಾಧ ವಿಭಾಗ ಹೈಕೋರ್ಟ್​​ಗೆ ಮಾಹಿತಿ ನೀಡಿದ್ದಾರೆ.

ಆಲ್​ ಇಂಡಿಯಾ ಯುತ್​ ಕಾಂಗ್ರೆಸ್​ನ ಅಧ್ಯಕ್ಷ ಶ್ರೀನಿವಾಸ್ ಸೇರಿ ಹಲವು ರಾಜಕಾರಣಿಗಳು ಮೆಡಿಕಲ್ ಮಾಫಿಯಾ ನಡೆಸುತ್ತಿದ್ದಾರೆ. ಇದಕ್ಕೆ ಸಂಬಂಧಪಟ್ಟಂತೆ ಸಿಬಿಐ ತನಿಖೆಗೆ ಆದೇಶ ನೀಡಬೇಕು ಎಂದು ಡಾ. ದೀಪಕ್ ಸಿಂಗ್ ಎಂಬುವರು ದೆಹಲಿ ಹೈಕೋರ್ಟ್​​ಗೆ ಮನವಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್​ ಒಮ್ಮೆಲೇ ಅದನ್ನು ಸಿಬಿಐ ತನಿಖೆಗೆ ನೀಡಲು ನಿರಾಕರಿಸಿತ್ತು. ಬದಲಿಗೆ ದೆಹಲಿ ಪೊಲೀಸರಿಗೆ ದೂರು ನೀಡುವಂತೆ ಹೇಳಿತ್ತು. ಈ ದೂರಿನ ಅನ್ವಯ ದೆಹಲಿ ಪೊಲೀಸ್ ವಿಭಾಗದ ಕ್ರೈಂ ಬ್ರ್ಯಾಂಚ್​ ಶ್ರೀನಿವಾಸ್, ಗಂಭೀರ್​ ಸೇರಿ ಹಲವರನ್ನು ವಿಚಾರಣೆಗೆ ಒಳಪಡಿಸಿತ್ತು. ಇದೀಗ ಹೈಕೋರ್ಟ್​​ಗೆ ವರದಿ ಸಲ್ಲಿಸಿ, ಈ ರಾಜಕಾರಣಿಗಳು ಮೆಡಿಕಲ್​ ಮಾಫಿಯಾ ನಡೆಸುತ್ತಿರುವ ಬಗ್ಗೆ ಯಾವುದೇ ಸಾಕ್ಷಿಯೂ ಇಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ವಿರುದ್ಧ ಹೊಸ ಅಸ್ತ್ರ: ಡಿಆರ್​ಡಿಓ ಅಭಿವೃದ್ಧಿಪಡಿಸಿದ 2ಡಿಜಿ ಔಷಧ ಬಿಡುಗಡೆ

‘ನಮ್ಮ ಜನ ಸಾಯ್ತಿದ್ದಾರೆ’; ಮಿಸ್​ ಯೂನಿವರ್ಸ್​ ಸ್ಪರ್ಧೆಯಲ್ಲಿ ದೇಶಕ್ಕಾಗಿ ಧ್ವನಿ ಎತ್ತಿದ ಮ್ಯಾನ್ಮಾರ್​ ಸುಂದರಿ

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ