AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀನಿವಾಸ್​, ಗೌತಮ್​ ಗಂಭೀರ್​ ಮತ್ತಿತರರು ಜನರನ್ನು ವಂಚಿಸುತ್ತಿಲ್ಲ.. ಸಹಾಯ ಮಾಡುತ್ತಿದ್ದಾರೆ: ದೆಹಲಿ ಪೊಲೀಸ್​

ಕೊವಿಡ್​ 19 ಔಷಧ, ಆಕ್ಸಿಜನ್, ಪ್ಲಾಸ್ಮಾ, ಆಸ್ಪತ್ರೆಗಳಲ್ಲಿ ಬೆಡ್​ ಅಗತ್ಯ ಇರುವವರಿಗೆ ಯಾವುದೇ ತಾರತಮ್ಯ ಇಲ್ಲದೆ ಸಹಾಯ ಮಾಡುತ್ತಿದ್ದಾರೆ ಎಂದು ದೆಹಲಿ ಪೊಲೀಸರು ಹೈಕೋರ್ಟ್​ಗೆ ತಿಳಿಸಿದ್ದಾರೆ.

ಶ್ರೀನಿವಾಸ್​, ಗೌತಮ್​ ಗಂಭೀರ್​ ಮತ್ತಿತರರು ಜನರನ್ನು ವಂಚಿಸುತ್ತಿಲ್ಲ.. ಸಹಾಯ ಮಾಡುತ್ತಿದ್ದಾರೆ: ದೆಹಲಿ ಪೊಲೀಸ್​
ಗೌತಮ್​ ಗಂಭೀರ್​
Lakshmi Hegde
|

Updated on: May 17, 2021 | 2:10 PM

Share

ಆಲ್​ ಇಂಡಿಯಾ ಯೂತ್​ ಕಾಂಗ್ರೆಸ್​ನ ಅಧ್ಯಕ್ಷ ಶ್ರೀನಿವಾಸ್​ ಬಿ.ವಿ., ಬಿಜೆಪಿ ಎಂಪಿ ಗೌತಮ್​ ಗಂಭೀರ್​, ಆಪ್​ ಶಾಸಕ ದಿಲೀಪ್​ ಪಾಂಡೆ ಮತ್ತಿತರರ ವಿರುದ್ಧ, ಬ್ಲ್ಯಾಕ್​ ಮಾರ್ಕೆಟ್​ (ಕಾಳಸಂತೆ)ನಲ್ಲಿ ಕೊವಿಡ್ 19 ಔಷಧಗಳನ್ನು ಮಾರುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಸದ್ಯ ಈ ಪ್ರಕರಣದ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ನಡೆಸುತ್ತಿದೆ. ಆದರೆ ಇಂದು ದೆಹಲಿ ಪೊಲೀಸರು ಈ ರಾಜಕಾರಣಿಗಳ ಪರ ಕೋರ್ಟ್​ಗೆ ವರದಿ ನೀಡಿದ್ದು, ಇವರೆಲ್ಲ ಕಾಳಸಂತೆಯಲ್ಲಿ ಔಷಧ ಮಾರಾಟ ಮಾಡುತ್ತಿದ್ದಾರೆ ಎಂಬುದಕ್ಕೆ ಸಾಕ್ಷಿಗಳಿಲ್ಲ ಎಂದು ತಿಳಿಸಿದ್ದಾರೆ.

ಇವರೆಲ್ಲ ಬ್ಲ್ಯಾಕ್​ ಮಾರ್ಕೆಟ್​​ನಲ್ಲಿ ಕೊವಿಡ್​ ಔಷಧಗಳ ಮಾರಾಟ ದಂಧೆ ನಡೆಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದ್ದರಿಂದ ವಿಚಾರಣೆಗೆ ಒಳಪಡಿಸಲಾಗಿತ್ತು. ನಮಗೆ ಯಾವುದೇ ವಂಚನೆ ಕಂಡುಬಂದಿಲ್ಲ. ಎಲ್ಲರೂ ಸ್ವಯಂಪ್ರೇರಿತರಾಗಿ ಕೊವಿಡ್ 19 ರೋಗಿಗಳಿಗೆ ಮತ್ತು ಅವರ ಕುಟುಂಬಗಳಿಗೆ ಸಹಾಯ ಮಾಡುತ್ತಿದ್ದಾರೆ. ಕೊವಿಡ್​ 19 ಔಷಧ, ಆಕ್ಸಿಜನ್, ಪ್ಲಾಸ್ಮಾ, ಆಸ್ಪತ್ರೆಗಳಲ್ಲಿ ಬೆಡ್​ ಅಗತ್ಯ ಇರುವವರಿಗೆ ಯಾವುದೇ ತಾರತಮ್ಯ ಇಲ್ಲದೆ ಸಹಾಯ ಮಾಡುತ್ತಿದ್ದಾರೆ. ಹಾಗೆ ಮಾಡಿದ ಸಹಾಯಕ್ಕೆ ಪ್ರತಿಯಾಗಿ ಹಣವನ್ನೂ ಪಡೆದಿಲ್ಲ ಎಂಬುದು ಗೊತ್ತಾಗಿದೆ ಎಂದು ದೆಹಲಿ ಪೊಲೀಸ್​ ಅಪರಾಧ ವಿಭಾಗ ಹೈಕೋರ್ಟ್​​ಗೆ ಮಾಹಿತಿ ನೀಡಿದ್ದಾರೆ.

ಆಲ್​ ಇಂಡಿಯಾ ಯುತ್​ ಕಾಂಗ್ರೆಸ್​ನ ಅಧ್ಯಕ್ಷ ಶ್ರೀನಿವಾಸ್ ಸೇರಿ ಹಲವು ರಾಜಕಾರಣಿಗಳು ಮೆಡಿಕಲ್ ಮಾಫಿಯಾ ನಡೆಸುತ್ತಿದ್ದಾರೆ. ಇದಕ್ಕೆ ಸಂಬಂಧಪಟ್ಟಂತೆ ಸಿಬಿಐ ತನಿಖೆಗೆ ಆದೇಶ ನೀಡಬೇಕು ಎಂದು ಡಾ. ದೀಪಕ್ ಸಿಂಗ್ ಎಂಬುವರು ದೆಹಲಿ ಹೈಕೋರ್ಟ್​​ಗೆ ಮನವಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್​ ಒಮ್ಮೆಲೇ ಅದನ್ನು ಸಿಬಿಐ ತನಿಖೆಗೆ ನೀಡಲು ನಿರಾಕರಿಸಿತ್ತು. ಬದಲಿಗೆ ದೆಹಲಿ ಪೊಲೀಸರಿಗೆ ದೂರು ನೀಡುವಂತೆ ಹೇಳಿತ್ತು. ಈ ದೂರಿನ ಅನ್ವಯ ದೆಹಲಿ ಪೊಲೀಸ್ ವಿಭಾಗದ ಕ್ರೈಂ ಬ್ರ್ಯಾಂಚ್​ ಶ್ರೀನಿವಾಸ್, ಗಂಭೀರ್​ ಸೇರಿ ಹಲವರನ್ನು ವಿಚಾರಣೆಗೆ ಒಳಪಡಿಸಿತ್ತು. ಇದೀಗ ಹೈಕೋರ್ಟ್​​ಗೆ ವರದಿ ಸಲ್ಲಿಸಿ, ಈ ರಾಜಕಾರಣಿಗಳು ಮೆಡಿಕಲ್​ ಮಾಫಿಯಾ ನಡೆಸುತ್ತಿರುವ ಬಗ್ಗೆ ಯಾವುದೇ ಸಾಕ್ಷಿಯೂ ಇಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ವಿರುದ್ಧ ಹೊಸ ಅಸ್ತ್ರ: ಡಿಆರ್​ಡಿಓ ಅಭಿವೃದ್ಧಿಪಡಿಸಿದ 2ಡಿಜಿ ಔಷಧ ಬಿಡುಗಡೆ

‘ನಮ್ಮ ಜನ ಸಾಯ್ತಿದ್ದಾರೆ’; ಮಿಸ್​ ಯೂನಿವರ್ಸ್​ ಸ್ಪರ್ಧೆಯಲ್ಲಿ ದೇಶಕ್ಕಾಗಿ ಧ್ವನಿ ಎತ್ತಿದ ಮ್ಯಾನ್ಮಾರ್​ ಸುಂದರಿ

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ