AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking ಪಶ್ಚಿಮ ಬಂಗಾಳದ ಸಚಿವ ಸಂಪುಟದಿಂದ ಪಾರ್ಥ ಚಟರ್ಜಿ ವಜಾ

Partha Chatterjee ಎಸ್ಎಸ್​​ಸಿ ಹಗರಣದ ಆರೋಪಿ  ಬಂಗಾಳ ಸಚಿವ ಸಂಪುಟದಲ್ಲಿ ವಿವಿಧ ಖಾತೆಗಳನ್ನು ಹೊಂದಿರುವ ಪಾರ್ಥ ಚಟರ್ಜಿಯನ್ನು ಜುಲೈ 28ರಿಂದ ಎಲ್ಲಾ ಸ್ಥಾನ, ಜವಾಬ್ದಾರಿಗಳಿಂದ ತೆರವು ಮಾಡಲಾಗಿದೆ ಎಂದು ಪಶ್ಚಿಮ ಬಂಗಾಳ  ಸರ್ಕಾರ ಹೇಳಿದೆ. 

Breaking ಪಶ್ಚಿಮ ಬಂಗಾಳದ ಸಚಿವ ಸಂಪುಟದಿಂದ ಪಾರ್ಥ ಚಟರ್ಜಿ ವಜಾ
ಪಾರ್ಥ ಚಟರ್ಜಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jul 28, 2022 | 5:06 PM

Share

ಶಿಕ್ಷಕರ ನೇಮಕಾತಿಯಲ್ಲಿ ಹಗರಣ ನಡೆಸಿ ಬಂಧಿತರಾಗಿರುವ ಪಶ್ಚಿಮ  ಬಂಗಾಳದ ಸಚಿವ ಪಾರ್ಥ ಚಟರ್ಜಿಯನ್ನು (Partha Chatterjee)  ಗುರುವಾರ ಸಚಿವ  ಸಂಪುಟದಿಂದ ವಜಾ ಮಾಡಲಾಗಿದೆ. ಎಸ್ಎಸ್​​ಸಿ ಹಗರಣದ ಆರೋಪಿ  ಬಂಗಾಳ ಸಚಿವ ಸಂಪುಟದಲ್ಲಿ ವಿವಿಧ ಖಾತೆಗಳನ್ನು ಹೊಂದಿರುವ ಪಾರ್ಥ ಚಟರ್ಜಿಯನ್ನು ಜುಲೈ 28ರಿಂದ ಎಲ್ಲಾ ಸ್ಥಾನ, ಜವಾಬ್ದಾರಿಗಳಿಂದ ತೆರವು ಮಾಡಲಾಗಿದೆ ಎಂದು ಪಶ್ಚಿಮ ಬಂಗಾಳ  ಸರ್ಕಾರ ಹೇಳಿದೆ. ಬಂಗಾಳ ಎಸ್ಎಸ್​ಸಿ ನೇಮಕಾತಿ (SSC Scam) ಹಗರಣದಲ್ಲಿ ಆರೋಪಿಯಾಗಿರುವ ಪಾರ್ಥ ಚಟರ್ಜಿಯನ್ನು ರಾಜ್ಯ ಸಚಿವ ಸಂಪುಟದಿಂದ ತೆಗೆದು ಹಾಕಲಾಗಿದೆ ಎಂದು ಮಮತಾ ಬ್ಯಾನರ್ಜಿ ಸರ್ಕಾರದ ಅಧಿಕೃತ ಪ್ರಕಟಣೆಯಲ್ಲಿ ಹೇಳಿದೆ. ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ಸೇರಿದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ. ಚಟರ್ಜಿಯನ್ನು ಪಕ್ಷ ಮತ್ತು ಸಚಿವ ಸ್ಥಾನದಿಂದ ತೆಗೆದು ಹಾಕಬೇಕು ಎಂದು ಟಿಎಂಸಿಯಲ್ಲೇ ಒತ್ತಾಯ ಕೇಳಿ ಬಂದ ಹಿನ್ನಲೆಯಲ್ಲಿ ಸಚಿವ ಸಂಪುಟ ಸಭೆ ಕರೆಯಲಾಗಿತ್ತು. ಕಾಮರ್ಸ್ ಮತ್ತು ಇಂಡಸ್ಟ್ರಿ , ಸಂಸದೀಯ ವ್ಯವಹಾರ, ಮಾಹಿತಿ ತಂತ್ರಜ್ಞಾನ ಮತ್ತು ಎಲೆಕ್ಟ್ರಾನಿಕ್ಸ್, ಪಬ್ಲಿಕ್ ಎಂಟರ್ ಪ್ರೈಸಸ್ ಆಂಡ್ ಇಂಡಸ್ಟ್ರಿಯಲ್ ರೀಕನ್ ಸ್ಟ್ರಕ್ಷನ್ ಖಾತೆಗಳನ್ನು ಚಟರ್ಜಿ ಹೊಂದಿದ್ದರು.

ಪಾರ್ಥ ಚಟರ್ಜಿ ಮತ್ತು ಅವರ ಆಪ್ತೆ ಅರ್ಪಿತಾ ಮುಖರ್ಜಿ ಅವರ ಅವರು ಜಾರಿ ನಿರ್ದೇಶನಾಲಯ ಜುಲೈ 23ರಂದು ಬಂಧಿಸಿತ್ತು. ಇವರ ಮನೆಯಿಂದ 21 ಕೋಟಿ ನಗದು ವಶಪಡಿಸಿಕೊಂಡ ನಂತರ ಇಡಿ ಇವರನ್ನು ಬಂಧಿಸಿತ್ತು ಅರ್ಪಿತಾ ಅವರ ಇನ್ನೊಂದು ಫ್ಲಾಟ್​​ನಿಂದ 29 ಕೋಟಿ ನಗದು ಮತ್ತು5 ಕೆಜಿ ಚಿನ್ನವನ್ನು ಇಡಿ ವಶ ವಡಿಸಿಕೊಂಡ ಕೆಲವೇ ಗಂಟೆಗಳಲ್ಲಿ ಸಚಿವರನ್ನು ವಜಾ ಮಾಡಲಾಗಿದೆ.

Published On - 4:22 pm, Thu, 28 July 22

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​