AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನಲ್ಲೂ SSLC ಪರೀಕ್ಷೆ ರದ್ದಾಯ್ತು! ರಾಜ್ಯದಲ್ಲಿ ಸುರೇಶ್ ಕುಮಾರ್ ನಿರ್ಧಾರ ಏನು?

ಉಡುಪಿ: ಮಹಾಮಾರಿ ಕೊರೊನಾ ವೈರಸ್​ನಿಂದ ತೆಲಂಗಾಣದಲ್ಲಿ SSLC ಪರೀಕ್ಷೆಯನ್ನು ರದ್ದುಗೊಳಿಸಲಾಯ್ತು. ಇದೀಗ ತಮಿಳುನಾಡಿನಲ್ಲೂ ಎಸ್ಎಸ್ಎಲ್​ಸಿ ಪರೀಕ್ಷೆ ರದ್ದುಗೊಳಿಸಲಾಗಿದೆ. ಅಲ್ಲದೆ ಪರೀಕ್ಷೆ ಬರೆಯದೆ ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್ ಮಾಡಲು ನಿರ್ಧರಿಸಲಾಗಿದೆ. ದಿನೇ ದಿನೆ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಕಾರಣ ಎಕ್ಸಾಂ ರದ್ದುಗೊಳಿಸಿ ತಮಿಳುನಾಡು ಸಿಎಂ ಎಡಪ್ಪಾಡಿ ಪಳನಿಸ್ವಾಮಿ ಆದೇಶಿಸಿದ್ದಾರೆ. ರಾಜ್ಯದಲ್ಲಿ ನಿಗದಿಯಂತೆ SSLC ಪರೀಕ್ಷೆ ನಡೆಯಲಿದೆ: ಆದ್ರೆ ರಾಜ್ಯದಲ್ಲಿ ನಿಗದಿಯಂತೆ SSLC ಪರೀಕ್ಷೆ ನಡೆಯಲಿದೆ. SSLC ಪರೀಕ್ಷೆ ವೇಳೆ ಸಮಸ್ಯೆಯಾದ್ರೆ ಪರ‍್ಯಾಯ ವ್ಯವಸ್ಥೆ ಮಾಡಲಾಗುತ್ತೆ. ಹೀಗಾಗಿ ನಿಗದಿಯಂತೆ ಪರೀಕ್ಷೆ ನಡೆಸಲು […]

ತಮಿಳುನಾಡಿನಲ್ಲೂ SSLC ಪರೀಕ್ಷೆ ರದ್ದಾಯ್ತು! ರಾಜ್ಯದಲ್ಲಿ ಸುರೇಶ್ ಕುಮಾರ್ ನಿರ್ಧಾರ ಏನು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jun 09, 2020 | 1:16 PM

Share

ಉಡುಪಿ: ಮಹಾಮಾರಿ ಕೊರೊನಾ ವೈರಸ್​ನಿಂದ ತೆಲಂಗಾಣದಲ್ಲಿ SSLC ಪರೀಕ್ಷೆಯನ್ನು ರದ್ದುಗೊಳಿಸಲಾಯ್ತು. ಇದೀಗ ತಮಿಳುನಾಡಿನಲ್ಲೂ ಎಸ್ಎಸ್ಎಲ್​ಸಿ ಪರೀಕ್ಷೆ ರದ್ದುಗೊಳಿಸಲಾಗಿದೆ. ಅಲ್ಲದೆ ಪರೀಕ್ಷೆ ಬರೆಯದೆ ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್ ಮಾಡಲು ನಿರ್ಧರಿಸಲಾಗಿದೆ. ದಿನೇ ದಿನೆ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಕಾರಣ ಎಕ್ಸಾಂ ರದ್ದುಗೊಳಿಸಿ ತಮಿಳುನಾಡು ಸಿಎಂ ಎಡಪ್ಪಾಡಿ ಪಳನಿಸ್ವಾಮಿ ಆದೇಶಿಸಿದ್ದಾರೆ.

ರಾಜ್ಯದಲ್ಲಿ ನಿಗದಿಯಂತೆ SSLC ಪರೀಕ್ಷೆ ನಡೆಯಲಿದೆ: ಆದ್ರೆ ರಾಜ್ಯದಲ್ಲಿ ನಿಗದಿಯಂತೆ SSLC ಪರೀಕ್ಷೆ ನಡೆಯಲಿದೆ. SSLC ಪರೀಕ್ಷೆ ವೇಳೆ ಸಮಸ್ಯೆಯಾದ್ರೆ ಪರ‍್ಯಾಯ ವ್ಯವಸ್ಥೆ ಮಾಡಲಾಗುತ್ತೆ. ಹೀಗಾಗಿ ನಿಗದಿಯಂತೆ ಪರೀಕ್ಷೆ ನಡೆಸಲು ಸಿದ್ಧತೆ ನಡೆಯುತ್ತಿದೆ ಎಂದು ಉಡುಪಿಯಲ್ಲಿ ಶಿಕ್ಷಣ ಸಚಿವ ಸುರೇಶ್ ‌ಕುಮಾರ್ ಹೇಳಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣ ಹೆಚ್ಚಳವಾಗಿಲ್ಲ. ಹೊರ ರಾಜ್ಯದಿಂದ ಬಂದವರಿಗೆ ಕೊರೊನಾ ಸೋಂಕು ಇದೆ. ಹೀಗಾಗಿ ಯಾರೂ ಆತಂಕಪಡಬೇಕಾದ ಅಗತ್ಯವಿಲ್ಲ. ಶಾಲೆಯನ್ನೂ ಆರಂಭಿಸುವ ಉದ್ದೇಶವೂ ಸದ್ಯಕ್ಕೆ ಇಲ್ಲ. ಸರ್ಕಾರದ ಮುಂದೆ ಇಂತಹ ಉದ್ದೇಶ ಇಲ್ಲ. ಪೋಷಕರ ಜತೆ ಚರ್ಚೆಯ ಬಳಿಕ ನಿರ್ಧಾರ ಮಾಡುತ್ತೇವೆ. ರಾಜ್ಯದಲ್ಲಿ ಖಾಸಗಿ ಶಾಲೆಗಳನ್ನೂ ತೆರೆಯುವಂತಿಲ್ಲ. ಆದೇಶ ಮೀರಿ ಖಾಸಗಿ ಶಾಲೆಗಳನ್ನು ಆರಂಭ ಮಾಡಿದರೆ ಅಂತಹ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಸುರೇಶ್ ‌ಕುಮಾರ್ ಎಚ್ಚರಿಕೆ ನೀಡಿದರು.

Published On - 1:06 pm, Tue, 9 June 20

Follow Us
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ