AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕೆಯದ್ದು SSLC, ಈತನದ್ದು ಡಿಗ್ರಿ.. ಪ್ರೀತ್ಸೆ ಅಂತಾ ಟಾರ್ಚರ್ ಕೊಟ್ಟು ಬಾಲಕಿಯನ್ನೇ ಬಲಿಪಡೆದ ಕಿರಾತಕ

ಆಕೆ ಇನ್ನೂ ಶಾಲಾ ಬಾಲಕಿ, ಆದ್ರೆ ಅದ್ಯಾವ ಮಾಯೆಯಲ್ಲಿ ಆಕೆ ಮೇಲೆ ಅದೊಬ್ಬ ಕಿರಾತಕನ ಕಣ್ಣು ಬಿತ್ತೊ ಗೊತ್ತಿಲ್ಲ. ಬಾಲಕಿಯ ಜೀವನದಲ್ಲಿ ನೆಮ್ಮದಿ ಅನ್ನೋದೆ ಹಾಳಾಗಿ ಹೋಗಿತ್ತು. ಅದು ಬಿಡಿ ಜೀವ ಉಳಿಸಿಕೊಳ್ಳುವುದೇ ಕಷ್ಟವಾಗಿ ಹೋಗಿತ್ತು. ಕಡೆಗೆ ಕಿರಾತಕನ ಬೆದರಿಕೆಗೆ ಬೆದರಿದ ಪುಟ್ಟ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಆಕೆಯದ್ದು SSLC, ಈತನದ್ದು ಡಿಗ್ರಿ.. ಪ್ರೀತ್ಸೆ ಅಂತಾ ಟಾರ್ಚರ್ ಕೊಟ್ಟು ಬಾಲಕಿಯನ್ನೇ ಬಲಿಪಡೆದ ಕಿರಾತಕ
ಆಯೇಷಾ ಬಾನು
ಆಯೇಷಾ ಬಾನು|

Updated on:Dec 21, 2020 | 6:54 AM

Share

ಹೈದರಾಬಾದ್: ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಗ್ರಾಮವೊಂದರಲ್ಲಿ ಕರುಣಾಜನಕ ಘಟನೆ ನಡೆದಿದೆ. ಒಂದೇ ಗ್ರಾಮದವರಾಗಿದ್ದ ಬಾಲಕಿ ಹಾಗೂ ಆರೋಪಿ ಯುವಕ ಈಗಿನ್ನೂ ಓದುತ್ತಾ ಇದ್ರು. ಬಾಲಕಿ 10ನೇ ತರಗತಿ ಓದುತ್ತಾ ಇದ್ರೆ, ಆರೋಪಿ ಯುವಕ ಡಿಗ್ರಿ ಮಾಡ್ತಿದ್ದ. ಆದ್ರೆ ಅವನ ತಲೇಲಿ ಅದೇನು ಖತರ್ನಾಕ್ ಐಡಿಯಾ ಇತ್ತೋ ಗೊತ್ತಿಲ್ಲ.

ಬಾಲಕಿಯ ಹಿಂದೆ ಬಿದ್ದು, ಪ್ರೀತ್ಸೆ ಪ್ರೀತ್ಸೆ ಅಂತಾ ಪ್ರಾಣ ಹಿಂಡುತ್ತಿದ್ದ. ಅದನ್ನೂ ಮೀರಿ, ನೀನು ನನ್ನ ಪ್ರೀತಿ ಮಾಡದೇ ಇದ್ರೆ ಹಾಗೆ ಮಾಡ್ತೀನಿ, ಹೀಗೆ ಮಾಡ್ತೀನಿ ಅಂತಾ ಬೆದರಿಕೆ ಕೂಡ ಹಾಕಿದ್ದನಂತೆ. ಇದೇ ಕಾರಣಕ್ಕೆ ಬೆಚ್ಚಿದ ಬಾಲಕಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಆದರೆ ಚಿಕಿತ್ಸೆ ಫಲಿಸದೆ ಬಾಲಕಿ ಮೃತಪಟ್ಟಿದ್ದು, ಆರೋಪಿ ಯುವಕನನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇನ್ನು ಬಾಲಕಿ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ತೆಗೆದ ಸೆಲ್ಫಿ ವಿಡಿಯೋದಲ್ಲಿ ಯುವಕನ ವಿರುದ್ಧ ಹಲವಾರು ಆರೋಪಗಳನ್ನ ಮಾಡಿದ್ದಳು. ಇದೇ ವಿಡಿಯೋ ಆಧರಿಸಿ ಪೊಲೀಸರು ಆರೋಪಿ ಯುವಕನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸ್ತ್ತಿದ್ದಾರೆ. ಪೋಕ್ಸೋ ಕಾಯ್ದೆ ಅಡಿ ಕೇಸ್ ದಾಖಲಾಗಿದ್ದು, ಆರೋಪಿಗೆ ಸರಿಯಾಗಿ ಗ್ರಿಲ್ ಮಾಡ್ತಿದ್ದಾರೆ.

ಒಟ್ನಲ್ಲಿ ಓದಿ ಬದುಕು ಕಟ್ಟಿಕೊಳ್ಳಬೇಕಾದ ವಯಸ್ಸಲ್ಲಿ ಹುಡುಗಾಟ ಮಾಡುತ್ತಾ, ಬಾಲಕಿಗೆ ಕಿರುಕುಳ ಕೊಟ್ಟಿದ್ದ ಕಿರಾತಕ ಕಂಬಿ ಹಿಂದೆಬಿದ್ದಿದ್ದಾನೆ. ಇನ್ನೊಂದೆಡೆ ತಾನು ಮಾಡದ ತಪ್ಪಿಗೆ ಜೀವವನ್ನೇ ಬಿಟ್ಟಿರುವ ಬಾಲಕಿಯನ್ನ ನೆನೆದು ಆಕೆಯ ಕುಟುಂಬ ಕಣ್ಣೀರಲ್ಲಿ ಕೈತೊಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ಮದುವೆಗೆ ಹೊರಟ್ಟಿದ್ದ ಮಿನಿ ಬಸ್ ಪಲ್ಟಿ: ಪ್ರಯಾಣಿಕ ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ

Published On - 6:52 am, Mon, 21 December 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ