AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕೆಯದ್ದು SSLC, ಈತನದ್ದು ಡಿಗ್ರಿ.. ಪ್ರೀತ್ಸೆ ಅಂತಾ ಟಾರ್ಚರ್ ಕೊಟ್ಟು ಬಾಲಕಿಯನ್ನೇ ಬಲಿಪಡೆದ ಕಿರಾತಕ

ಆಕೆ ಇನ್ನೂ ಶಾಲಾ ಬಾಲಕಿ, ಆದ್ರೆ ಅದ್ಯಾವ ಮಾಯೆಯಲ್ಲಿ ಆಕೆ ಮೇಲೆ ಅದೊಬ್ಬ ಕಿರಾತಕನ ಕಣ್ಣು ಬಿತ್ತೊ ಗೊತ್ತಿಲ್ಲ. ಬಾಲಕಿಯ ಜೀವನದಲ್ಲಿ ನೆಮ್ಮದಿ ಅನ್ನೋದೆ ಹಾಳಾಗಿ ಹೋಗಿತ್ತು. ಅದು ಬಿಡಿ ಜೀವ ಉಳಿಸಿಕೊಳ್ಳುವುದೇ ಕಷ್ಟವಾಗಿ ಹೋಗಿತ್ತು. ಕಡೆಗೆ ಕಿರಾತಕನ ಬೆದರಿಕೆಗೆ ಬೆದರಿದ ಪುಟ್ಟ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಆಕೆಯದ್ದು SSLC, ಈತನದ್ದು ಡಿಗ್ರಿ.. ಪ್ರೀತ್ಸೆ ಅಂತಾ ಟಾರ್ಚರ್ ಕೊಟ್ಟು ಬಾಲಕಿಯನ್ನೇ ಬಲಿಪಡೆದ ಕಿರಾತಕ
ಆಯೇಷಾ ಬಾನು
|

Updated on:Dec 21, 2020 | 6:54 AM

Share

ಹೈದರಾಬಾದ್: ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಗ್ರಾಮವೊಂದರಲ್ಲಿ ಕರುಣಾಜನಕ ಘಟನೆ ನಡೆದಿದೆ. ಒಂದೇ ಗ್ರಾಮದವರಾಗಿದ್ದ ಬಾಲಕಿ ಹಾಗೂ ಆರೋಪಿ ಯುವಕ ಈಗಿನ್ನೂ ಓದುತ್ತಾ ಇದ್ರು. ಬಾಲಕಿ 10ನೇ ತರಗತಿ ಓದುತ್ತಾ ಇದ್ರೆ, ಆರೋಪಿ ಯುವಕ ಡಿಗ್ರಿ ಮಾಡ್ತಿದ್ದ. ಆದ್ರೆ ಅವನ ತಲೇಲಿ ಅದೇನು ಖತರ್ನಾಕ್ ಐಡಿಯಾ ಇತ್ತೋ ಗೊತ್ತಿಲ್ಲ.

ಬಾಲಕಿಯ ಹಿಂದೆ ಬಿದ್ದು, ಪ್ರೀತ್ಸೆ ಪ್ರೀತ್ಸೆ ಅಂತಾ ಪ್ರಾಣ ಹಿಂಡುತ್ತಿದ್ದ. ಅದನ್ನೂ ಮೀರಿ, ನೀನು ನನ್ನ ಪ್ರೀತಿ ಮಾಡದೇ ಇದ್ರೆ ಹಾಗೆ ಮಾಡ್ತೀನಿ, ಹೀಗೆ ಮಾಡ್ತೀನಿ ಅಂತಾ ಬೆದರಿಕೆ ಕೂಡ ಹಾಕಿದ್ದನಂತೆ. ಇದೇ ಕಾರಣಕ್ಕೆ ಬೆಚ್ಚಿದ ಬಾಲಕಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಆದರೆ ಚಿಕಿತ್ಸೆ ಫಲಿಸದೆ ಬಾಲಕಿ ಮೃತಪಟ್ಟಿದ್ದು, ಆರೋಪಿ ಯುವಕನನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇನ್ನು ಬಾಲಕಿ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ತೆಗೆದ ಸೆಲ್ಫಿ ವಿಡಿಯೋದಲ್ಲಿ ಯುವಕನ ವಿರುದ್ಧ ಹಲವಾರು ಆರೋಪಗಳನ್ನ ಮಾಡಿದ್ದಳು. ಇದೇ ವಿಡಿಯೋ ಆಧರಿಸಿ ಪೊಲೀಸರು ಆರೋಪಿ ಯುವಕನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸ್ತ್ತಿದ್ದಾರೆ. ಪೋಕ್ಸೋ ಕಾಯ್ದೆ ಅಡಿ ಕೇಸ್ ದಾಖಲಾಗಿದ್ದು, ಆರೋಪಿಗೆ ಸರಿಯಾಗಿ ಗ್ರಿಲ್ ಮಾಡ್ತಿದ್ದಾರೆ.

ಒಟ್ನಲ್ಲಿ ಓದಿ ಬದುಕು ಕಟ್ಟಿಕೊಳ್ಳಬೇಕಾದ ವಯಸ್ಸಲ್ಲಿ ಹುಡುಗಾಟ ಮಾಡುತ್ತಾ, ಬಾಲಕಿಗೆ ಕಿರುಕುಳ ಕೊಟ್ಟಿದ್ದ ಕಿರಾತಕ ಕಂಬಿ ಹಿಂದೆಬಿದ್ದಿದ್ದಾನೆ. ಇನ್ನೊಂದೆಡೆ ತಾನು ಮಾಡದ ತಪ್ಪಿಗೆ ಜೀವವನ್ನೇ ಬಿಟ್ಟಿರುವ ಬಾಲಕಿಯನ್ನ ನೆನೆದು ಆಕೆಯ ಕುಟುಂಬ ಕಣ್ಣೀರಲ್ಲಿ ಕೈತೊಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ಮದುವೆಗೆ ಹೊರಟ್ಟಿದ್ದ ಮಿನಿ ಬಸ್ ಪಲ್ಟಿ: ಪ್ರಯಾಣಿಕ ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ

Published On - 6:52 am, Mon, 21 December 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ