AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಮ್ಮೆ ಲಾಕ್​ಡೌನ್​ ಹೇರುವ ದಿನ ಸಮೀಪಿಸುತ್ತಿದೆ, ಅಂತಿಮ ನಿರ್ಧಾರ ಮುಖ್ಯಮಂತ್ರಿಯದು; ಮಹಾರಾಷ್ಟ್ರ ಸಚಿವ

ಮಹಾರಾಷ್ಟ್ರದಲ್ಲಿ ಕಳೆದ 11 ದಿನಗಳಿಂದಲೂ ಕೊವಿಡ್​ 19 ಸೋಂಕಿತರ ಸಂಖ್ಯೆ ಏರುತ್ತಿದೆ. ದಿನದಲ್ಲಿ ದಾಖಲಾಗುವ ಕೇಸ್​ಗಳು ಹೆಚ್ಚುತ್ತಿವೆ. ಕೆಲವೇ ದಿನಗಳ ಹಿಂದೆ ಸರ್ಕಾರ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ಮತ್ತೊಮ್ಮೆ ಲಾಕ್​ಡೌನ್​ ಹೇರುವ ದಿನ ಸಮೀಪಿಸುತ್ತಿದೆ, ಅಂತಿಮ ನಿರ್ಧಾರ ಮುಖ್ಯಮಂತ್ರಿಯದು; ಮಹಾರಾಷ್ಟ್ರ ಸಚಿವ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 01, 2022 | 9:10 AM

Share

ಒಂದೊಂದೇ ರಾಜ್ಯವಾಗಿ ಮತ್ತೆ ಕೊರೊನಾ ಕೇಸ್(Corona Cases)​ಗಳು ಹೆಚ್ಚುತ್ತಿವೆ. ಜತೆಗೆ ಒಮಿಕ್ರಾನ್​  ಭೀತಿಯೂ ಕಾಡುತ್ತಿದೆ. ಅದರಲ್ಲೂ ಮಹಾರಾಷ್ಟ್ರ, ದೆಹಲಿಗಳಲ್ಲಿ ಕೊರೊನಾ ಪ್ರಮಾಣದಲ್ಲಿ ಗಣನೀಯ ಏರಿಕೆಯಾಗುತ್ತಿದ್ದು, ಮತ್ತೆ ಮೊದಲಿನಂತೆ ನಿರ್ಬಂಧ ವಿಧಿಸಲಾಗುತ್ತಿದೆ. ಈ ಮಧ್ಯೆ ಮಹಾರಾಷ್ಟ್ರ (Maharashtra) ಸಚಿವರೊಬ್ಬರು ಮತ್ತೊಮ್ಮೆ ಲಾಕ್​ಡೌನ್(Lockdown)​ ಸೂಚನೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ವಿಜಯ್ ವಡೆತ್ತಿವಾರ್, ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಮಿತಿಮೀರುತ್ತಿದೆ. ಮತ್ತೆ ಲಾಕ್​ಡೌನ್​ ಹೇರುವ ಕಾಲ ಸಮೀಪಿಸುತ್ತಿದೆ. ಆದರೆ ಈ ಬಗ್ಗೆ ಅಂತಿಮವಾಗಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರೇ ನಿರ್ಣಯ ಮಾಡಲಿದ್ದಾರೆ ಎಂದು ಹೇಳಿದ್ದಾರೆ.   

ಮಹಾರಾಷ್ಟ್ರದಲ್ಲಿ ಕಳೆದ 11 ದಿನಗಳಿಂದಲೂ ಕೊವಿಡ್​ 19 ಸೋಂಕಿತರ ಸಂಖ್ಯೆ ಏರುತ್ತಿದೆ. ದಿನದಲ್ಲಿ ದಾಖಲಾಗುವ ಕೇಸ್​ಗಳು ಹೆಚ್ಚುತ್ತಿವೆ. ಕೆಲವೇ ದಿನಗಳ ಹಿಂದೆ ಸರ್ಕಾರ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಮುಂಬೈನಲ್ಲಿ ಜನವರಿ 7ರವರೆಗೂ ಸೆಕ್ಷನ್​ 144 ಜಾರಿಯಲ್ಲಿದೆ.  ಇನ್ನು ಮಹಾರಾಷ್ಟ್ರದಾದ್ಯಂತ ಯಾವುದೇ ಸಾಮಾಜಿಕ, ರಾಜಕೀಯ, ಧಾರ್ಮಿಕ ಸಮಾರಂಭ ನಡೆಸಿದರೂ 50 ಜನ ಮಾತ್ರ ಸೇರಬಹುದು. ಅಂತ್ಯಸಂಸ್ಕಾರದಲ್ಲಿ ಗರಿಷ್ಠ 20 ಜನ ಪಾಲ್ಗೊಳ್ಳಬಹುದು ಎಂದು ನಿರ್ಬಂಧ ವಿಧಿಸಲಾಗಿದೆ.

ಹೊಸವರ್ಷದ ಮುನ್ನಾದಿನವೇ ಮುಂಬೈ ಪೊಲೀಸ್ ಆಯುಕ್ತರು ಸೆಕ್ಷನ್​ 144 ಹೇರಿದ್ದಾರೆ. ಕಡಲತೀರಗಳು, ತೆರೆದ ಮೈದಾನಗಳು, ಉದ್ಯಾನಗಳು ಮತ್ತು ಅಂಥ ಯಾವುದೇ ಸಾರ್ವಜನಿಕ ಸ್ಥಳಗಳಿಗೆ ಜನರು ಮುಂಜಾನೆ 5ರಿಂದ ಸಂಜೆ 5ರವರೆಗೆ ಭೇಟಿ ನೀಡುವುದನ್ನು ನಿರ್ಬಂಧಿಸಿದ್ದಾರೆ. ಈ ಆದೇಶ ಜನವರಿ 15ರವರೆಗೂ ಇರಲಿದೆ. ಮಹಾರಾಷ್ಟ್ರದಲ್ಲಿ ಶುಕ್ರವಾರ ಒಂದೇ ದಿನ 8067 ಕೊರೊನಾ ಕೇಸ್​ಗಳು ದಾಖಲಾಗಿವೆ. ಗುರುವಾರ 2699 ಪ್ರಕರಣಗಳು ದಾಖಲಾಗಿದ್ದವು. ಒಂದೇ ದಿನದಲ್ಲಿ 600ರಷ್ಟು ಹೆಚ್ಚಳಗೊಂಡಿದ್ದು ಸಹಜವಾಗಿಯೇ ಆತಂಕ ಮೂಡಿಸಿದೆ.  ಶುಕ್ರವಾರದ 8067ಕೇಸ್​​ಗಳಲ್ಲಿ ಮುಂಬೈ ಒಂದರಲ್ಲೇ 5428 ಕೇಸ್​ಗಳು ದಾಖಲಾಗಿವೆ. ಹಾಗೇ, ನಿನ್ನೆ 4 ಒಮಿಕ್ರಾನ್​ ಕೇಸ್​ಗಳೂ ಪತ್ತೆಯಾಗಿವೆ. ಮಹಾರಾಷ್ಟ್ರದಲ್ಲಿ ಸದ್ಯ 454 ಒಮಿಕ್ರಾನ್​ ಸೋಂಕಿತರು ಇದ್ದು, 157 ಮಂದಿ ಚೇತರಿಸಿಕೊಂಡು ಡಿಸ್​ಚಾರ್ಜ್​ ಆಗಿದ್ದಾರೆ. 26 ಜನ ಈ ರಾಜ್ಯದವರು ಅಲ್ಲ ಎಂದು ಹೇಳಲಾಗಿದೆ.

ಇದನ್ನೂ ಓದಿ: ಒಟ್ಟೊಟ್ಟಿಗೆ ಮೂರು ಸಿನಿಮಾಗಳನ್ನು ಒಪ್ಪಿಕೊಂಡ್ರಾ ಅನುಷ್ಕಾ ಶರ್ಮಾ? ಕಂಬ್ಯಾಕ್​ ಮಾಡಿದ ಕೊಹ್ಲಿ ಪತ್ನಿ

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ