AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಮ್ಮೆ ಲಾಕ್​ಡೌನ್​ ಹೇರುವ ದಿನ ಸಮೀಪಿಸುತ್ತಿದೆ, ಅಂತಿಮ ನಿರ್ಧಾರ ಮುಖ್ಯಮಂತ್ರಿಯದು; ಮಹಾರಾಷ್ಟ್ರ ಸಚಿವ

ಮಹಾರಾಷ್ಟ್ರದಲ್ಲಿ ಕಳೆದ 11 ದಿನಗಳಿಂದಲೂ ಕೊವಿಡ್​ 19 ಸೋಂಕಿತರ ಸಂಖ್ಯೆ ಏರುತ್ತಿದೆ. ದಿನದಲ್ಲಿ ದಾಖಲಾಗುವ ಕೇಸ್​ಗಳು ಹೆಚ್ಚುತ್ತಿವೆ. ಕೆಲವೇ ದಿನಗಳ ಹಿಂದೆ ಸರ್ಕಾರ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ಮತ್ತೊಮ್ಮೆ ಲಾಕ್​ಡೌನ್​ ಹೇರುವ ದಿನ ಸಮೀಪಿಸುತ್ತಿದೆ, ಅಂತಿಮ ನಿರ್ಧಾರ ಮುಖ್ಯಮಂತ್ರಿಯದು; ಮಹಾರಾಷ್ಟ್ರ ಸಚಿವ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 01, 2022 | 9:10 AM

Share

ಒಂದೊಂದೇ ರಾಜ್ಯವಾಗಿ ಮತ್ತೆ ಕೊರೊನಾ ಕೇಸ್(Corona Cases)​ಗಳು ಹೆಚ್ಚುತ್ತಿವೆ. ಜತೆಗೆ ಒಮಿಕ್ರಾನ್​  ಭೀತಿಯೂ ಕಾಡುತ್ತಿದೆ. ಅದರಲ್ಲೂ ಮಹಾರಾಷ್ಟ್ರ, ದೆಹಲಿಗಳಲ್ಲಿ ಕೊರೊನಾ ಪ್ರಮಾಣದಲ್ಲಿ ಗಣನೀಯ ಏರಿಕೆಯಾಗುತ್ತಿದ್ದು, ಮತ್ತೆ ಮೊದಲಿನಂತೆ ನಿರ್ಬಂಧ ವಿಧಿಸಲಾಗುತ್ತಿದೆ. ಈ ಮಧ್ಯೆ ಮಹಾರಾಷ್ಟ್ರ (Maharashtra) ಸಚಿವರೊಬ್ಬರು ಮತ್ತೊಮ್ಮೆ ಲಾಕ್​ಡೌನ್(Lockdown)​ ಸೂಚನೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ವಿಜಯ್ ವಡೆತ್ತಿವಾರ್, ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಮಿತಿಮೀರುತ್ತಿದೆ. ಮತ್ತೆ ಲಾಕ್​ಡೌನ್​ ಹೇರುವ ಕಾಲ ಸಮೀಪಿಸುತ್ತಿದೆ. ಆದರೆ ಈ ಬಗ್ಗೆ ಅಂತಿಮವಾಗಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರೇ ನಿರ್ಣಯ ಮಾಡಲಿದ್ದಾರೆ ಎಂದು ಹೇಳಿದ್ದಾರೆ.   

ಮಹಾರಾಷ್ಟ್ರದಲ್ಲಿ ಕಳೆದ 11 ದಿನಗಳಿಂದಲೂ ಕೊವಿಡ್​ 19 ಸೋಂಕಿತರ ಸಂಖ್ಯೆ ಏರುತ್ತಿದೆ. ದಿನದಲ್ಲಿ ದಾಖಲಾಗುವ ಕೇಸ್​ಗಳು ಹೆಚ್ಚುತ್ತಿವೆ. ಕೆಲವೇ ದಿನಗಳ ಹಿಂದೆ ಸರ್ಕಾರ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಮುಂಬೈನಲ್ಲಿ ಜನವರಿ 7ರವರೆಗೂ ಸೆಕ್ಷನ್​ 144 ಜಾರಿಯಲ್ಲಿದೆ.  ಇನ್ನು ಮಹಾರಾಷ್ಟ್ರದಾದ್ಯಂತ ಯಾವುದೇ ಸಾಮಾಜಿಕ, ರಾಜಕೀಯ, ಧಾರ್ಮಿಕ ಸಮಾರಂಭ ನಡೆಸಿದರೂ 50 ಜನ ಮಾತ್ರ ಸೇರಬಹುದು. ಅಂತ್ಯಸಂಸ್ಕಾರದಲ್ಲಿ ಗರಿಷ್ಠ 20 ಜನ ಪಾಲ್ಗೊಳ್ಳಬಹುದು ಎಂದು ನಿರ್ಬಂಧ ವಿಧಿಸಲಾಗಿದೆ.

ಹೊಸವರ್ಷದ ಮುನ್ನಾದಿನವೇ ಮುಂಬೈ ಪೊಲೀಸ್ ಆಯುಕ್ತರು ಸೆಕ್ಷನ್​ 144 ಹೇರಿದ್ದಾರೆ. ಕಡಲತೀರಗಳು, ತೆರೆದ ಮೈದಾನಗಳು, ಉದ್ಯಾನಗಳು ಮತ್ತು ಅಂಥ ಯಾವುದೇ ಸಾರ್ವಜನಿಕ ಸ್ಥಳಗಳಿಗೆ ಜನರು ಮುಂಜಾನೆ 5ರಿಂದ ಸಂಜೆ 5ರವರೆಗೆ ಭೇಟಿ ನೀಡುವುದನ್ನು ನಿರ್ಬಂಧಿಸಿದ್ದಾರೆ. ಈ ಆದೇಶ ಜನವರಿ 15ರವರೆಗೂ ಇರಲಿದೆ. ಮಹಾರಾಷ್ಟ್ರದಲ್ಲಿ ಶುಕ್ರವಾರ ಒಂದೇ ದಿನ 8067 ಕೊರೊನಾ ಕೇಸ್​ಗಳು ದಾಖಲಾಗಿವೆ. ಗುರುವಾರ 2699 ಪ್ರಕರಣಗಳು ದಾಖಲಾಗಿದ್ದವು. ಒಂದೇ ದಿನದಲ್ಲಿ 600ರಷ್ಟು ಹೆಚ್ಚಳಗೊಂಡಿದ್ದು ಸಹಜವಾಗಿಯೇ ಆತಂಕ ಮೂಡಿಸಿದೆ.  ಶುಕ್ರವಾರದ 8067ಕೇಸ್​​ಗಳಲ್ಲಿ ಮುಂಬೈ ಒಂದರಲ್ಲೇ 5428 ಕೇಸ್​ಗಳು ದಾಖಲಾಗಿವೆ. ಹಾಗೇ, ನಿನ್ನೆ 4 ಒಮಿಕ್ರಾನ್​ ಕೇಸ್​ಗಳೂ ಪತ್ತೆಯಾಗಿವೆ. ಮಹಾರಾಷ್ಟ್ರದಲ್ಲಿ ಸದ್ಯ 454 ಒಮಿಕ್ರಾನ್​ ಸೋಂಕಿತರು ಇದ್ದು, 157 ಮಂದಿ ಚೇತರಿಸಿಕೊಂಡು ಡಿಸ್​ಚಾರ್ಜ್​ ಆಗಿದ್ದಾರೆ. 26 ಜನ ಈ ರಾಜ್ಯದವರು ಅಲ್ಲ ಎಂದು ಹೇಳಲಾಗಿದೆ.

ಇದನ್ನೂ ಓದಿ: ಒಟ್ಟೊಟ್ಟಿಗೆ ಮೂರು ಸಿನಿಮಾಗಳನ್ನು ಒಪ್ಪಿಕೊಂಡ್ರಾ ಅನುಷ್ಕಾ ಶರ್ಮಾ? ಕಂಬ್ಯಾಕ್​ ಮಾಡಿದ ಕೊಹ್ಲಿ ಪತ್ನಿ

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು