AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಮ್ಮೆ ಲಾಕ್​ಡೌನ್​ ಹೇರುವ ದಿನ ಸಮೀಪಿಸುತ್ತಿದೆ, ಅಂತಿಮ ನಿರ್ಧಾರ ಮುಖ್ಯಮಂತ್ರಿಯದು; ಮಹಾರಾಷ್ಟ್ರ ಸಚಿವ

ಮಹಾರಾಷ್ಟ್ರದಲ್ಲಿ ಕಳೆದ 11 ದಿನಗಳಿಂದಲೂ ಕೊವಿಡ್​ 19 ಸೋಂಕಿತರ ಸಂಖ್ಯೆ ಏರುತ್ತಿದೆ. ದಿನದಲ್ಲಿ ದಾಖಲಾಗುವ ಕೇಸ್​ಗಳು ಹೆಚ್ಚುತ್ತಿವೆ. ಕೆಲವೇ ದಿನಗಳ ಹಿಂದೆ ಸರ್ಕಾರ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ಮತ್ತೊಮ್ಮೆ ಲಾಕ್​ಡೌನ್​ ಹೇರುವ ದಿನ ಸಮೀಪಿಸುತ್ತಿದೆ, ಅಂತಿಮ ನಿರ್ಧಾರ ಮುಖ್ಯಮಂತ್ರಿಯದು; ಮಹಾರಾಷ್ಟ್ರ ಸಚಿವ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 01, 2022 | 9:10 AM

Share

ಒಂದೊಂದೇ ರಾಜ್ಯವಾಗಿ ಮತ್ತೆ ಕೊರೊನಾ ಕೇಸ್(Corona Cases)​ಗಳು ಹೆಚ್ಚುತ್ತಿವೆ. ಜತೆಗೆ ಒಮಿಕ್ರಾನ್​  ಭೀತಿಯೂ ಕಾಡುತ್ತಿದೆ. ಅದರಲ್ಲೂ ಮಹಾರಾಷ್ಟ್ರ, ದೆಹಲಿಗಳಲ್ಲಿ ಕೊರೊನಾ ಪ್ರಮಾಣದಲ್ಲಿ ಗಣನೀಯ ಏರಿಕೆಯಾಗುತ್ತಿದ್ದು, ಮತ್ತೆ ಮೊದಲಿನಂತೆ ನಿರ್ಬಂಧ ವಿಧಿಸಲಾಗುತ್ತಿದೆ. ಈ ಮಧ್ಯೆ ಮಹಾರಾಷ್ಟ್ರ (Maharashtra) ಸಚಿವರೊಬ್ಬರು ಮತ್ತೊಮ್ಮೆ ಲಾಕ್​ಡೌನ್(Lockdown)​ ಸೂಚನೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ವಿಜಯ್ ವಡೆತ್ತಿವಾರ್, ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಮಿತಿಮೀರುತ್ತಿದೆ. ಮತ್ತೆ ಲಾಕ್​ಡೌನ್​ ಹೇರುವ ಕಾಲ ಸಮೀಪಿಸುತ್ತಿದೆ. ಆದರೆ ಈ ಬಗ್ಗೆ ಅಂತಿಮವಾಗಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರೇ ನಿರ್ಣಯ ಮಾಡಲಿದ್ದಾರೆ ಎಂದು ಹೇಳಿದ್ದಾರೆ.   

ಮಹಾರಾಷ್ಟ್ರದಲ್ಲಿ ಕಳೆದ 11 ದಿನಗಳಿಂದಲೂ ಕೊವಿಡ್​ 19 ಸೋಂಕಿತರ ಸಂಖ್ಯೆ ಏರುತ್ತಿದೆ. ದಿನದಲ್ಲಿ ದಾಖಲಾಗುವ ಕೇಸ್​ಗಳು ಹೆಚ್ಚುತ್ತಿವೆ. ಕೆಲವೇ ದಿನಗಳ ಹಿಂದೆ ಸರ್ಕಾರ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಮುಂಬೈನಲ್ಲಿ ಜನವರಿ 7ರವರೆಗೂ ಸೆಕ್ಷನ್​ 144 ಜಾರಿಯಲ್ಲಿದೆ.  ಇನ್ನು ಮಹಾರಾಷ್ಟ್ರದಾದ್ಯಂತ ಯಾವುದೇ ಸಾಮಾಜಿಕ, ರಾಜಕೀಯ, ಧಾರ್ಮಿಕ ಸಮಾರಂಭ ನಡೆಸಿದರೂ 50 ಜನ ಮಾತ್ರ ಸೇರಬಹುದು. ಅಂತ್ಯಸಂಸ್ಕಾರದಲ್ಲಿ ಗರಿಷ್ಠ 20 ಜನ ಪಾಲ್ಗೊಳ್ಳಬಹುದು ಎಂದು ನಿರ್ಬಂಧ ವಿಧಿಸಲಾಗಿದೆ.

ಹೊಸವರ್ಷದ ಮುನ್ನಾದಿನವೇ ಮುಂಬೈ ಪೊಲೀಸ್ ಆಯುಕ್ತರು ಸೆಕ್ಷನ್​ 144 ಹೇರಿದ್ದಾರೆ. ಕಡಲತೀರಗಳು, ತೆರೆದ ಮೈದಾನಗಳು, ಉದ್ಯಾನಗಳು ಮತ್ತು ಅಂಥ ಯಾವುದೇ ಸಾರ್ವಜನಿಕ ಸ್ಥಳಗಳಿಗೆ ಜನರು ಮುಂಜಾನೆ 5ರಿಂದ ಸಂಜೆ 5ರವರೆಗೆ ಭೇಟಿ ನೀಡುವುದನ್ನು ನಿರ್ಬಂಧಿಸಿದ್ದಾರೆ. ಈ ಆದೇಶ ಜನವರಿ 15ರವರೆಗೂ ಇರಲಿದೆ. ಮಹಾರಾಷ್ಟ್ರದಲ್ಲಿ ಶುಕ್ರವಾರ ಒಂದೇ ದಿನ 8067 ಕೊರೊನಾ ಕೇಸ್​ಗಳು ದಾಖಲಾಗಿವೆ. ಗುರುವಾರ 2699 ಪ್ರಕರಣಗಳು ದಾಖಲಾಗಿದ್ದವು. ಒಂದೇ ದಿನದಲ್ಲಿ 600ರಷ್ಟು ಹೆಚ್ಚಳಗೊಂಡಿದ್ದು ಸಹಜವಾಗಿಯೇ ಆತಂಕ ಮೂಡಿಸಿದೆ.  ಶುಕ್ರವಾರದ 8067ಕೇಸ್​​ಗಳಲ್ಲಿ ಮುಂಬೈ ಒಂದರಲ್ಲೇ 5428 ಕೇಸ್​ಗಳು ದಾಖಲಾಗಿವೆ. ಹಾಗೇ, ನಿನ್ನೆ 4 ಒಮಿಕ್ರಾನ್​ ಕೇಸ್​ಗಳೂ ಪತ್ತೆಯಾಗಿವೆ. ಮಹಾರಾಷ್ಟ್ರದಲ್ಲಿ ಸದ್ಯ 454 ಒಮಿಕ್ರಾನ್​ ಸೋಂಕಿತರು ಇದ್ದು, 157 ಮಂದಿ ಚೇತರಿಸಿಕೊಂಡು ಡಿಸ್​ಚಾರ್ಜ್​ ಆಗಿದ್ದಾರೆ. 26 ಜನ ಈ ರಾಜ್ಯದವರು ಅಲ್ಲ ಎಂದು ಹೇಳಲಾಗಿದೆ.

ಇದನ್ನೂ ಓದಿ: ಒಟ್ಟೊಟ್ಟಿಗೆ ಮೂರು ಸಿನಿಮಾಗಳನ್ನು ಒಪ್ಪಿಕೊಂಡ್ರಾ ಅನುಷ್ಕಾ ಶರ್ಮಾ? ಕಂಬ್ಯಾಕ್​ ಮಾಡಿದ ಕೊಹ್ಲಿ ಪತ್ನಿ

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ