AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್ ಸರ್ಕಾರ ರಚಿಸಲಿ, ಜನಾದೇಶಕ್ಕೆ ಗೌರವ ಕೊಡೋಣ, ರಾಜಕೀಯ ಮುತ್ಸದ್ದಿತನ ಮೆರೆದ ಎಂ.ಕೆ. ಸ್ಟಾಲಿನ್

ತಮಿಳುನಾಡಿನಲ್ಲಿ ಬಹುಮತದ ಕೊರತೆಯಿಂದ ಸರ್ಕಾರ ರಚಿಸಲು ಪರದಾಡುತ್ತಿದ್ದ ನಟ ವಿಜಯ್ ಅವರ ಟಿವಿಕೆ ಪಕ್ಷಕ್ಕೆ ಎಂ.ಕೆ. ಸ್ಟಾಲಿನ್ ಬೆಂಬಲ ಸೂಚಿಸಿದ್ದಾರೆ. ಈ ದಿಟ್ಟ ನಿರ್ಧಾರದಿಂದ ರಾಜ್ಯದಲ್ಲಿ ಸಾಂವಿಧಾನಿಕ ಬಿಕ್ಕಟ್ಟು ತಪ್ಪಿದೆ. ಜನಾದೇಶವನ್ನು ಗೌರವಿಸಿ ವಿಜಯ್ ಸರ್ಕಾರ ರಚಿಸಲಿ ಎಂದಿರುವ ಸ್ಟಾಲಿನ್, ತಮ್ಮ ಜನಪ್ರಿಯ ಯೋಜನೆಗಳನ್ನು ಮುಂದುವರಿಸಲು ಸಲಹೆ ನೀಡಿದ್ದಾರೆ. ಇದು ತಮಿಳುನಾಡು ರಾಜಕೀಯದಲ್ಲಿ ಅವರ ಮುತ್ಸದ್ದಿತನಕ್ಕೆ ಸಾಕ್ಷಿಯಾಗಿದೆ.

ವಿಜಯ್ ಸರ್ಕಾರ ರಚಿಸಲಿ, ಜನಾದೇಶಕ್ಕೆ ಗೌರವ ಕೊಡೋಣ, ರಾಜಕೀಯ ಮುತ್ಸದ್ದಿತನ ಮೆರೆದ ಎಂ.ಕೆ. ಸ್ಟಾಲಿನ್
ಎಂಕೆ ಸ್ಟಾಲಿನ್Image Credit source: The News Minute
ನಯನಾ ರಾಜೀವ್
|

Updated on: May 07, 2026 | 10:56 AM

Share

ಚೆನ್ನೈ, ಮೇ 07: ತಮಿಳುನಾಡು ರಾಜಕೀಯದ ದೈತ್ಯ ಶಕ್ತಿ ಎಂ.ಕೆ. ಸ್ಟಾಲಿನ್(MK Stalin) ಅವರು ತೆಗೆದುಕೊಂಡಿರುವ ಒಂದು ದಿಟ್ಟ ನಿರ್ಧಾರ, ರಾಜ್ಯದಲ್ಲಿ ಎದುರಾಗಿದ್ದ ಸಾಂವಿಧಾನಿಕ ಬಿಕ್ಕಟ್ಟನ್ನು ಕ್ಷಣಾರ್ಧದಲ್ಲಿ ತಿಳಿಗೊಳಿಸಿದೆ. ಬಹುಮತದ ಕೊರತೆಯಿಂದ ಸರ್ಕಾರ ರಚಿಸಲು ಪರದಾಡುತ್ತಿದ್ದ ನಟ ವಿಜಯ್ ಅವರ ‘ತಮಿಳುಗ ವೆಟ್ರಿ ಕಳಗಂ’ (TVK) ಗೆ ಸ್ಟಾಲಿನ್ ಅಭಯ ನೀಡಿದ್ದು, ವಿಜಯ್ ಸರ್ಕಾರ ರಚಿಸಲಿ ಎಂದು ಹೇಳುವ ಮೂಲಕ ಎಲ್ಲರನ್ನೂ ಆಶ್ಚರ್ಯಚಕಿತಗೊಳಿಸಿದ್ದಾರೆ.

ಬಹುಮತಕ್ಕೆ 11 ಸ್ಥಾನಗಳ ಕೊರತೆಯಿದ್ದರೂ, ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆಗೆ ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಸಾಂವಿಧಾನಿಕ ಬಿಕ್ಕಟ್ಟು ಉಂಟಾಗುವುದು ನಮಗೆ ಇಷ್ಟವಿಲ್ಲ. ಜನರ ತೀರ್ಪನ್ನು ಗೌರವಿಸಿ ವಿಜಯ್ ಅವರು ಸರ್ಕಾರ ರಚಿಸಲಿ ಎಂದು ಸ್ಪಷ್ಟಪಡಿಸಿದರು.

ಬುಧವಾರ ರಾತ್ರಿಯವರೆಗೆ ಡಿಎಂಕೆ ಮತ್ತು ಎಐಎಡಿಎಂಕೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಬಹುದು ಎಂಬ ಲೆಕ್ಕಾಚಾರಗಳಿದ್ದವು. ಆದರೆ ಸ್ಟಾಲಿನ್ ಅವರ ಈ ನಡೆಯು ಆ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದೆ.

ಮತ್ತಷ್ಟು ಓದಿ: ರಾಹುಲ್​​ ಮಾತು ಕೇಳದೆ ತಮಿಳುನಾಡಲ್ಲಿ ಕೆಟ್ಟಿತಾ ಕಾಂಗ್ರೆಸ್​​? ಅಸಲಿಗೆ ಆಗಿದ್ದೇನು?

ವಿಜಯ್ ಸರ್ಕಾರಕ್ಕೆ ಸ್ಟಾಲಿನ್ ಕಿವಿಮಾತು ಅಧಿಕಾರ ಬಿಟ್ಟುಕೊಡಲು ಸಮ್ಮತಿಸಿರುವ ಸ್ಟಾಲಿನ್, ತಮ್ಮ ಆಡಳಿತ ಅವಧಿಯಲ್ಲಿ ಜಾರಿಗೆ ತಂದಿದ್ದ ಜನಪ್ರಿಯ ಯೋಜನೆಗಳನ್ನು ಹೊಸ ಸರ್ಕಾರವು ಮುಂದುವರಿಸಬೇಕೆಂದು ಆಶಿಸಿದ್ದಾರೆ: ಶಾಲಾ ಮಕ್ಕಳ ಹಸಿವು ನೀಗಿಸುವ ಈ ಯೋಜನೆ ನಿಲ್ಲಬಾರದು, ಮಹಿಳೆಯರಿಗೆ ನೀಡಲಾಗುತ್ತಿರುವ 1,000 ರೂ. ಮಾಸಿಕ ಆರ್ಥಿಕ ನೆರವಿನ ಯೋಜನೆಯನ್ನು ಉಳಿಸಿಕೊಳ್ಳಬೇಕು.

ವಿಜಯ್ ಅವರು ತಮ್ಮ ಪ್ರಣಾಳಿಕೆಯಲ್ಲಿ ಮಹಿಳೆಯರಿಗೆ 2,500 ರೂ. ನೀಡುವುದಾಗಿ ಭರವಸೆ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಸ್ಟಾಲಿನ್, ಇಷ್ಟು ದೊಡ್ಡ ಮೊತ್ತವನ್ನು ನೀಡುವುದು ಆರ್ಥಿಕವಾಗಿ ಸವಾಲಿನ ಕೆಲಸ. ಆದರೆ ಕನಿಷ್ಠ ಈಗಿರುವ 1,000 ರೂ. ಯೋಜನೆಯನ್ನಾದರೂ ಹೊಸ ಸರ್ಕಾರ ಮುಂದುವರಿಸಲಿ ಎಂದು ಸಲಹೆ ನೀಡಿದರು.

ಸ್ಟಾಲಿನ್ ಅವರ ಈ ಬಹಿರಂಗ ಬೆಂಬಲದ ನಂತರ, ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರಿಗೆ ವಿಜಯ್ ಅವರ ಸಂಖ್ಯಾಬಲದ ಬಗ್ಗೆ ಇದ್ದ ಆತಂಕ ದೂರವಾದಂತಾಗಿದೆ. ಡಿಎಂಕೆ ಬೆಂಬಲ ಸೂಚಿಸಿರುವುದರಿಂದ, ವಿಜಯ್ ಅವರು ಶೀಘ್ರದಲ್ಲೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ರಾಜಭವನದಿಂದ ಅಧಿಕೃತ ಆಮಂತ್ರಣ ಬರುವ ಸಾಧ್ಯತೆ ದಟ್ಟವಾಗಿದೆ.

ತಮಿಳುನಾಡಿನ ಇತಿಹಾಸದಲ್ಲಿ ಬದ್ಧ ರಾಜಕೀಯ ವೈರಿಗಳ ನಡುವೆ ಇಂತಹದೊಂದು ‘ಸಾಂವಿಧಾನಿಕ ಸೌಹಾರ್ದತೆ’ ಕಂಡುಬಂದಿರುವುದು ರಾಜಕೀಯ ಮುತ್ಸದ್ದಿತನಕ್ಕೆ ಸಾಕ್ಷಿಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಮೆಟ್ಟಿಲುಗಳಿಗೆ ಕೈ ಮುಗಿದು ವಿಧಾನಸೌಧಕ್ಕೆ ಸಮರ್ಥ್​ ಎಂಟ್ರಿ
ಮೆಟ್ಟಿಲುಗಳಿಗೆ ಕೈ ಮುಗಿದು ವಿಧಾನಸೌಧಕ್ಕೆ ಸಮರ್ಥ್​ ಎಂಟ್ರಿ
ಉಡುಪಿಯಲ್ಲಿ ಅಬ್ಬರಿಸಿದ ವರುಣ: ರಸ್ತೆಯಲ್ಲೇ ನೀರು ನಿಂತು ಸವಾರರ ಪರದಾಟ
ಉಡುಪಿಯಲ್ಲಿ ಅಬ್ಬರಿಸಿದ ವರುಣ: ರಸ್ತೆಯಲ್ಲೇ ನೀರು ನಿಂತು ಸವಾರರ ಪರದಾಟ
ಸ್ಟ್ರಾಂಗ್‌ ರೂಮ್‌ವೊಂದರ ಬೀಗ ಕಳೆದಿರೋದನ್ನು ನಾವು ಎಂದೂ ಕೇಳಿರಲಿಲ್ಲ
ಸ್ಟ್ರಾಂಗ್‌ ರೂಮ್‌ವೊಂದರ ಬೀಗ ಕಳೆದಿರೋದನ್ನು ನಾವು ಎಂದೂ ಕೇಳಿರಲಿಲ್ಲ