AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನಲ್ಲಿ ವಿಜಯ್ ರ್ಯಾಲಿ ವೇಳೆ ಕಾಲ್ತುಳಿತ; 31 ಜನ ಸಾವು

ತಮಿಳುನಾಡಿನಲ್ಲಿ ನಟ ಹಾಗೂ ಟಿವಿಕೆ ಮುಖ್ಯಸ್ಥ ವಿಜಯ್ ದಳಪತಿ ಅವರ ರ್ಯಾಲಿಯಲ್ಲಿ ಕಾಲ್ತುಳಿತ ಉಂಟಾಗಿದೆ. ಈ ವೇಳೆ ಹಲವರು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಈ ಘಟನೆಯಲ್ಲಿ 31 ಜನ ಮೃತಪಟ್ಟಿದ್ದಾರೆ. ಈ ರ್ಯಾಲಿ ವೇಳೆ ವಿಜಯ್ ಭಾಷಣವನ್ನು ಕೇಳಲು ರಸ್ತೆಯ ಉದ್ದಗಲಕ್ಕೂ ಹತ್ತಾರು ಸಾವಿರ ಜನರು ಸೇರಿದ್ದರು. ಇದರಿಂದ ನೂಕುನುಗ್ಗಲಾಗಿ ಕಾಲ್ತುಳಿತ ಉಂಟಾಗಿದೆ. ತಕ್ಷಣ ಆ್ಯಂಬುಲೆನ್ಸ್​ ತರಿಸಿ ಮೂರ್ಛೆ ತಪ್ಪಿದವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.

ತಮಿಳುನಾಡಿನಲ್ಲಿ ವಿಜಯ್ ರ್ಯಾಲಿ ವೇಳೆ ಕಾಲ್ತುಳಿತ; 31 ಜನ ಸಾವು
Vijay Rally
ಸುಷ್ಮಾ ಚಕ್ರೆ
|

Updated on:Sep 27, 2025 | 10:18 PM

Share

ಚೆನ್ನೈ, ಸೆಪ್ಟೆಂಬರ್ 27: ತಮಿಳುನಾಡಿನ ಕರೂರಿನಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ನಟ ವಿಜಯ್ (Vijay) ನೇತೃತ್ವದ ಬೃಹತ್ ರ್ಯಾಲಿಯಲ್ಲಿ ಹತ್ತಾರು ಸಾವಿರ ಜನರು ಪಾಲ್ಗೊಂಡಿದ್ದರು. ಈ ವೇಳೆ ನೂಕುನುಗ್ಗಲು ಉಂಟಾಗಿ 31 ಜನರು ಮೃತಪಟ್ಟಿದ್ದಾರೆ. ಜನರು  ಮೂರ್ಛೆ ತಪ್ಪಿದ ವಿಷಯ ಗಮನಕ್ಕೆ ಬರುತ್ತಿದ್ದಂತೆ ವಿಜಯ್ ಅವರು ತಕ್ಷಣ ಆ್ಯಂಬುಲೆನ್ಸ್ ಅನ್ನು ಕರೆಸಿ ಅವರನ್ನು ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆ ಮಾಡಿದ್ದರು. ಕಾಲ್ತುಳಿತದ ನಂತರ ವಿಜಯ್ ಅರ್ಧಕ್ಕೇ ತಮ್ಮ ಭಾಷಣವನ್ನು ಮುಗಿಸಿದ್ದಾರೆ.

ಪೊಲೀಸರು ಇನ್ನೂ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ. ರಸ್ತೆಯ ತುಂಬ ಸಾವಿರಾರು ಜನ ಸೇರಿದ್ದರಿಂದ ನೂಕುನುಗ್ಗಲು ಉಂಟಾಗಿದೆ. ಕರೂರಿನಲ್ಲಿ ನಡೆದ ತಮ್ಮ ರ್ಯಾಲಿಯಲ್ಲಿ ಜನರು ಪ್ರಜ್ಞೆ ತಪ್ಪಿದಾಗ “ಪೊಲೀಸರೇ, ದಯವಿಟ್ಟು ಸಹಾಯ ಮಾಡಿ” ಎಂದು ವಿಜಯ್ ಹೇಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. “ಯಾರೂ ಗಾಬರಿಯಾಗಬೇಡಿ, ಈಗ ಆ್ಯಂಬುಲೆನ್ಸ್ ಬರುತ್ತದೆ” ಎಂದು ಅವರು ಮೈಕ್​ನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ‘ರ‍್ಯಾಲಿಗೆ ಬಂದವರೆಲ್ಲ ನಿಮಗೆ ವೋಟ್ ಮಾಡಲ್ಲ’; ದಳಪತಿ ವಿಜಯ್​ಗೆ ಕಮಲ್ ಹಾಸನ್ ಕಿವಿಮಾತು

ಈ ವೇಳೆ ಅರ್ಧಕ್ಕೆ ತಮ್ಮ ಭಾಷಣವನ್ನು ನಿಲ್ಲಿಸಿದ ವಿಜಯ್, ಉಸಿರಾಟದ ತೊಂದರೆ ಅನುಭವಿಸುತ್ತಿರುವ ಜನರಿಗೆ ನೀರು ವಿತರಿಸಲು ಮತ್ತು ಆಂಬ್ಯುಲೆನ್ಸ್ ಸೇವೆಗಳನ್ನು ಸಂಘಟಿಸಲು ಮುಂದಾದರು. ಅಗತ್ಯವಿರುವವರನ್ನು ತಲುಪಲು ತುರ್ತು ಆಂಬ್ಯುಲೆನ್ಸ್‌ಗಳಿಗೆ ದಾರಿ ಮಾಡಿಕೊಡುವಂತೆ ತಮ್ಮ ಬೆಂಬಲಿಗರನ್ನು ಅವರು ಒತ್ತಾಯಿಸಿದರು.

ಅಸ್ವಸ್ಥರಾಗಿರುವವರಿಗೆ ಸಹಾಯ ಮಾಡಲು ನೀರಿನ ಬಾಟಲಿಗಳನ್ನು ವಿತರಿಸಲಾಯಿತು ಮತ್ತು ವೈದ್ಯಕೀಯ ತಂಡಗಳನ್ನು ತಕ್ಷಣವೇ ನಿಯೋಜಿಸಲಾಯಿತು. ಪ್ರಜ್ಞೆ ತಪ್ಪಿದ ಹಲವಾರು ವ್ಯಕ್ತಿಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಲಾಯಿತು.

ಈ ರ್ಯಾಲಿಯು 2026ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ರಾಜ್ಯಾದ್ಯಂತ ನಡೆಯುತ್ತಿರುವ ವಿಜಯ್ ಅವರ ಪ್ರಚಾರದ ಭಾಗವಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 9:04 pm, Sat, 27 September 25

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ