AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖನಿಜ ಗಣಿಗಾರಿಕೆ ಪ್ರವೇಶಿಸುವ ಸ್ಟಾರ್ಟ್ ಅಪ್ ಗಳು ಭವಿಷ್ಯದ ಆಶಾಕಿರಣ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಭಿಮತ

Pralhad Joshi: ಮಹಾರಾಷ್ಟ್ರದ ಮುಂಬೈನಲ್ಲಿರುವ IITಯಲ್ಲಿಂದು ಪ್ರಪ್ರಥಮ ಮೈನಿಂಗ್ ಸ್ಟಾರ್ಟ್ಅಪ್ ಶೃಂಗಸಭೆಯನ್ನುದ್ದೇಶಿಸಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಮಾತನಾಡಿದರು.

ಖನಿಜ ಗಣಿಗಾರಿಕೆ ಪ್ರವೇಶಿಸುವ ಸ್ಟಾರ್ಟ್ ಅಪ್ ಗಳು ಭವಿಷ್ಯದ ಆಶಾಕಿರಣ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಭಿಮತ
ಖನಿಜ ಗಣಿಗಾರಿಕೆ ಪ್ರವೇಶಿಸುವ ಸ್ಟಾರ್ಟ್ ಅಪ್ ಗಳು ಭವಿಷ್ಯದ ಆಶಾಕಿರಣ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 29, 2023 | 5:26 PM

Share

ಮುಂಬೈ: ಮಹಾರಾಷ್ಟ್ರದ ಮುಂಬೈನಲ್ಲಿರುವ IITಯಲ್ಲಿಂದು ಪ್ರಪ್ರಥಮ ಮೈನಿಂಗ್ ಸ್ಟಾರ್ಟ್ಅಪ್ ಶೃಂಗಸಭೆಯನ್ನುದ್ದೇಶಿಸಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು (Pralhad Joshi) ಮಾತನಾಡಿದರು. ಪರಿಶೋಧನೆ, ಆಟೊಮೇಷನ್, ಡ್ರೋನ್ ತಂತ್ರಜ್ಞಾನ, ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಸೇರಿದಂತೆ ಪ್ರಮುಖ ತ‌ಂತ್ರಜ್ಞಾನದ ಕಂಪನಿಗಳು ಈ ಮೈನಿಂಗ್ (mineral mining) ಸ್ಟಾರ್ಟ್ಅಪ್ (Startups) ಶೃಂಗಸಭೆಯಲ್ಲಿ ಭಾಗವಹಿಸಿದ್ದರಿಂದಾಗಿ ಈ ಪ್ರಥಮ ಶೃಂಗಸಭೆಯ ಉದ್ದೇಶ ಸಾರ್ಥಕವಾದಂತಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ವಿಶ್ವದ ಬ್ಯಾಂಕ್ ನಿಂದ ಹಿಡಿದು ವಿಶ್ವದ ಕಾರ್ಖಾನೆಯಾಗುವವರೆಗೆ, ಪ್ರಧಾನಿ ನರೇಂದ್ರ ಮೋದಿಯವರ ‌ನೇತೃತ್ವದಲ್ಲಿ ಭಾರತ ಸಾಕಷ್ಟು ಪ್ರಗತಿ ಸಾಧಿಸುತ್ತಿದೆ ಎಂದ ಅವರು, ಈ ಶೃಂಗಸಭೆಯಲ್ಲಿ, ಖನಿಜ ಗಣಿಗಾರಿಕೆ ಕ್ಷೇತ್ರವನ್ನು ಪ್ರವೇಶಿಸುವ ಸ್ಟಾರ್ಟ್‌ಅಪ್‌ಗಳು ಯಾವ ರೀತಿ ಎಲ್ಲರಿಗೂ ಉಪಯುಕ್ತ ಎಂಬುದರ ಬಗ್ಗೆಯೂ ಬೆಳಕು ಚೆಲ್ಲಿದರು.

Also Read: ರಾಜ್ಯಕ್ಕೆ ಬರುವ ಕೇಂದ್ರದ ಹಣ ಕಡಿಮೆ ಎಂಬ ಆರೋಪಕ್ಕೆ ಅಂಕಿ-ಸಂಖ್ಯೆಯೊಂದಿಗೆ ತಿರುಗೇಟು ಕೊಟ್ಟ ಸಚಿವ ಜೋಶಿ

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರದಿಂದ ನಾವು ನಿರಂತರವಾಗಿ ಭೂವಿಜ್ಞಾನ ಪರಿಶೋಧನೆಯ ವ್ಯಾಪ್ತಿಯನ್ನು ವಿಸ್ತರಿಸುತ್ತಿದ್ದೇವೆ ಎಂದ ಅವರು, ಹೀಗೆ ಪರಿಶೋಧನೆಯಲ್ಲಿರುವ ಪ್ರದೇಶದ ವಿಸ್ತೀರ್ಣವೀಗ ಸುಮಾರು 2 ಲಕ್ಷ ಚದರ ಮೀಟರ್‌ಗೆ ತಲುಪಿದೆ. ಇದರಿಂದಾಗಿ ಶೇಕಡಾ 40% ಕ್ಕಿಂತ ಹೆಚ್ಚು ಅನ್ವೇಷಣೆಯನ್ನು ಈವರೆಗೆ ಸಾಧಿಸಲಾಗಿದೆ ಎಂದರು.

ಈ ಪ್ರಪ್ರಥಮ ಶೃಂಗಸಭೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರ ಜೊತೆ ಮಹಾರಾಷ್ಟ್ರದ ಸಚಿವ ದಾದಾಜಿ ಭೂಸೆಯವರು ಉಪಸ್ಥಿತರಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:22 pm, Mon, 29 May 23

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ