AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖನಿಜ ಗಣಿಗಾರಿಕೆ ಪ್ರವೇಶಿಸುವ ಸ್ಟಾರ್ಟ್ ಅಪ್ ಗಳು ಭವಿಷ್ಯದ ಆಶಾಕಿರಣ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಭಿಮತ

Pralhad Joshi: ಮಹಾರಾಷ್ಟ್ರದ ಮುಂಬೈನಲ್ಲಿರುವ IITಯಲ್ಲಿಂದು ಪ್ರಪ್ರಥಮ ಮೈನಿಂಗ್ ಸ್ಟಾರ್ಟ್ಅಪ್ ಶೃಂಗಸಭೆಯನ್ನುದ್ದೇಶಿಸಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಮಾತನಾಡಿದರು.

ಖನಿಜ ಗಣಿಗಾರಿಕೆ ಪ್ರವೇಶಿಸುವ ಸ್ಟಾರ್ಟ್ ಅಪ್ ಗಳು ಭವಿಷ್ಯದ ಆಶಾಕಿರಣ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಭಿಮತ
ಖನಿಜ ಗಣಿಗಾರಿಕೆ ಪ್ರವೇಶಿಸುವ ಸ್ಟಾರ್ಟ್ ಅಪ್ ಗಳು ಭವಿಷ್ಯದ ಆಶಾಕಿರಣ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 29, 2023 | 5:26 PM

Share

ಮುಂಬೈ: ಮಹಾರಾಷ್ಟ್ರದ ಮುಂಬೈನಲ್ಲಿರುವ IITಯಲ್ಲಿಂದು ಪ್ರಪ್ರಥಮ ಮೈನಿಂಗ್ ಸ್ಟಾರ್ಟ್ಅಪ್ ಶೃಂಗಸಭೆಯನ್ನುದ್ದೇಶಿಸಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು (Pralhad Joshi) ಮಾತನಾಡಿದರು. ಪರಿಶೋಧನೆ, ಆಟೊಮೇಷನ್, ಡ್ರೋನ್ ತಂತ್ರಜ್ಞಾನ, ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಸೇರಿದಂತೆ ಪ್ರಮುಖ ತ‌ಂತ್ರಜ್ಞಾನದ ಕಂಪನಿಗಳು ಈ ಮೈನಿಂಗ್ (mineral mining) ಸ್ಟಾರ್ಟ್ಅಪ್ (Startups) ಶೃಂಗಸಭೆಯಲ್ಲಿ ಭಾಗವಹಿಸಿದ್ದರಿಂದಾಗಿ ಈ ಪ್ರಥಮ ಶೃಂಗಸಭೆಯ ಉದ್ದೇಶ ಸಾರ್ಥಕವಾದಂತಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ವಿಶ್ವದ ಬ್ಯಾಂಕ್ ನಿಂದ ಹಿಡಿದು ವಿಶ್ವದ ಕಾರ್ಖಾನೆಯಾಗುವವರೆಗೆ, ಪ್ರಧಾನಿ ನರೇಂದ್ರ ಮೋದಿಯವರ ‌ನೇತೃತ್ವದಲ್ಲಿ ಭಾರತ ಸಾಕಷ್ಟು ಪ್ರಗತಿ ಸಾಧಿಸುತ್ತಿದೆ ಎಂದ ಅವರು, ಈ ಶೃಂಗಸಭೆಯಲ್ಲಿ, ಖನಿಜ ಗಣಿಗಾರಿಕೆ ಕ್ಷೇತ್ರವನ್ನು ಪ್ರವೇಶಿಸುವ ಸ್ಟಾರ್ಟ್‌ಅಪ್‌ಗಳು ಯಾವ ರೀತಿ ಎಲ್ಲರಿಗೂ ಉಪಯುಕ್ತ ಎಂಬುದರ ಬಗ್ಗೆಯೂ ಬೆಳಕು ಚೆಲ್ಲಿದರು.

Also Read: ರಾಜ್ಯಕ್ಕೆ ಬರುವ ಕೇಂದ್ರದ ಹಣ ಕಡಿಮೆ ಎಂಬ ಆರೋಪಕ್ಕೆ ಅಂಕಿ-ಸಂಖ್ಯೆಯೊಂದಿಗೆ ತಿರುಗೇಟು ಕೊಟ್ಟ ಸಚಿವ ಜೋಶಿ

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರದಿಂದ ನಾವು ನಿರಂತರವಾಗಿ ಭೂವಿಜ್ಞಾನ ಪರಿಶೋಧನೆಯ ವ್ಯಾಪ್ತಿಯನ್ನು ವಿಸ್ತರಿಸುತ್ತಿದ್ದೇವೆ ಎಂದ ಅವರು, ಹೀಗೆ ಪರಿಶೋಧನೆಯಲ್ಲಿರುವ ಪ್ರದೇಶದ ವಿಸ್ತೀರ್ಣವೀಗ ಸುಮಾರು 2 ಲಕ್ಷ ಚದರ ಮೀಟರ್‌ಗೆ ತಲುಪಿದೆ. ಇದರಿಂದಾಗಿ ಶೇಕಡಾ 40% ಕ್ಕಿಂತ ಹೆಚ್ಚು ಅನ್ವೇಷಣೆಯನ್ನು ಈವರೆಗೆ ಸಾಧಿಸಲಾಗಿದೆ ಎಂದರು.

ಈ ಪ್ರಪ್ರಥಮ ಶೃಂಗಸಭೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರ ಜೊತೆ ಮಹಾರಾಷ್ಟ್ರದ ಸಚಿವ ದಾದಾಜಿ ಭೂಸೆಯವರು ಉಪಸ್ಥಿತರಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:22 pm, Mon, 29 May 23

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ