AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖನಿಜ ಗಣಿಗಾರಿಕೆ ಪ್ರವೇಶಿಸುವ ಸ್ಟಾರ್ಟ್ ಅಪ್ ಗಳು ಭವಿಷ್ಯದ ಆಶಾಕಿರಣ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಭಿಮತ

Pralhad Joshi: ಮಹಾರಾಷ್ಟ್ರದ ಮುಂಬೈನಲ್ಲಿರುವ IITಯಲ್ಲಿಂದು ಪ್ರಪ್ರಥಮ ಮೈನಿಂಗ್ ಸ್ಟಾರ್ಟ್ಅಪ್ ಶೃಂಗಸಭೆಯನ್ನುದ್ದೇಶಿಸಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಮಾತನಾಡಿದರು.

ಖನಿಜ ಗಣಿಗಾರಿಕೆ ಪ್ರವೇಶಿಸುವ ಸ್ಟಾರ್ಟ್ ಅಪ್ ಗಳು ಭವಿಷ್ಯದ ಆಶಾಕಿರಣ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಭಿಮತ
ಖನಿಜ ಗಣಿಗಾರಿಕೆ ಪ್ರವೇಶಿಸುವ ಸ್ಟಾರ್ಟ್ ಅಪ್ ಗಳು ಭವಿಷ್ಯದ ಆಶಾಕಿರಣ
ಸಾಧು ಶ್ರೀನಾಥ್​
|

Updated on:May 29, 2023 | 5:26 PM

Share

ಮುಂಬೈ: ಮಹಾರಾಷ್ಟ್ರದ ಮುಂಬೈನಲ್ಲಿರುವ IITಯಲ್ಲಿಂದು ಪ್ರಪ್ರಥಮ ಮೈನಿಂಗ್ ಸ್ಟಾರ್ಟ್ಅಪ್ ಶೃಂಗಸಭೆಯನ್ನುದ್ದೇಶಿಸಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು (Pralhad Joshi) ಮಾತನಾಡಿದರು. ಪರಿಶೋಧನೆ, ಆಟೊಮೇಷನ್, ಡ್ರೋನ್ ತಂತ್ರಜ್ಞಾನ, ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಸೇರಿದಂತೆ ಪ್ರಮುಖ ತ‌ಂತ್ರಜ್ಞಾನದ ಕಂಪನಿಗಳು ಈ ಮೈನಿಂಗ್ (mineral mining) ಸ್ಟಾರ್ಟ್ಅಪ್ (Startups) ಶೃಂಗಸಭೆಯಲ್ಲಿ ಭಾಗವಹಿಸಿದ್ದರಿಂದಾಗಿ ಈ ಪ್ರಥಮ ಶೃಂಗಸಭೆಯ ಉದ್ದೇಶ ಸಾರ್ಥಕವಾದಂತಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ವಿಶ್ವದ ಬ್ಯಾಂಕ್ ನಿಂದ ಹಿಡಿದು ವಿಶ್ವದ ಕಾರ್ಖಾನೆಯಾಗುವವರೆಗೆ, ಪ್ರಧಾನಿ ನರೇಂದ್ರ ಮೋದಿಯವರ ‌ನೇತೃತ್ವದಲ್ಲಿ ಭಾರತ ಸಾಕಷ್ಟು ಪ್ರಗತಿ ಸಾಧಿಸುತ್ತಿದೆ ಎಂದ ಅವರು, ಈ ಶೃಂಗಸಭೆಯಲ್ಲಿ, ಖನಿಜ ಗಣಿಗಾರಿಕೆ ಕ್ಷೇತ್ರವನ್ನು ಪ್ರವೇಶಿಸುವ ಸ್ಟಾರ್ಟ್‌ಅಪ್‌ಗಳು ಯಾವ ರೀತಿ ಎಲ್ಲರಿಗೂ ಉಪಯುಕ್ತ ಎಂಬುದರ ಬಗ್ಗೆಯೂ ಬೆಳಕು ಚೆಲ್ಲಿದರು.

Also Read: ರಾಜ್ಯಕ್ಕೆ ಬರುವ ಕೇಂದ್ರದ ಹಣ ಕಡಿಮೆ ಎಂಬ ಆರೋಪಕ್ಕೆ ಅಂಕಿ-ಸಂಖ್ಯೆಯೊಂದಿಗೆ ತಿರುಗೇಟು ಕೊಟ್ಟ ಸಚಿವ ಜೋಶಿ

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರದಿಂದ ನಾವು ನಿರಂತರವಾಗಿ ಭೂವಿಜ್ಞಾನ ಪರಿಶೋಧನೆಯ ವ್ಯಾಪ್ತಿಯನ್ನು ವಿಸ್ತರಿಸುತ್ತಿದ್ದೇವೆ ಎಂದ ಅವರು, ಹೀಗೆ ಪರಿಶೋಧನೆಯಲ್ಲಿರುವ ಪ್ರದೇಶದ ವಿಸ್ತೀರ್ಣವೀಗ ಸುಮಾರು 2 ಲಕ್ಷ ಚದರ ಮೀಟರ್‌ಗೆ ತಲುಪಿದೆ. ಇದರಿಂದಾಗಿ ಶೇಕಡಾ 40% ಕ್ಕಿಂತ ಹೆಚ್ಚು ಅನ್ವೇಷಣೆಯನ್ನು ಈವರೆಗೆ ಸಾಧಿಸಲಾಗಿದೆ ಎಂದರು.

ಈ ಪ್ರಪ್ರಥಮ ಶೃಂಗಸಭೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರ ಜೊತೆ ಮಹಾರಾಷ್ಟ್ರದ ಸಚಿವ ದಾದಾಜಿ ಭೂಸೆಯವರು ಉಪಸ್ಥಿತರಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:22 pm, Mon, 29 May 23

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್