AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಎ ಅನುಷ್ಠಾನವನ್ನು ನಿರಾಕರಿಸುವ ಹಕ್ಕು ರಾಜ್ಯಗಳಿಗೆ ಇಲ್ಲ: ಅಮಿತ್​​ ಶಾ

ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳ ಕೆಲವು ಮುಖ್ಯಮಂತ್ರಿಗಳು ಪೌರತ್ವ ತಿದ್ದುಪಡಿ ಕಾಯ್ದೆಯ ಅನುಷ್ಠಾನವನ್ನು ವಿರೋಧಿಸುತ್ತಿರುವಾಗ, ಈ ನಾಯಕರಿಗೆ ಅಂತಹ ಹಕ್ಕಿದೆಯೇ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕೇಳಿದ್ದಾರೆ, ಸಿಎಎ ಸಂಪೂರ್ಣವಾಗಿ ಸಾಂವಿಧಾನಿಕವಾಗಿದೆ ಮತ್ತು ಕೇಂದ್ರ ಸರ್ಕಾರಕ್ಕೆ ಮಾತ್ರ ಜಾರಿಗೊಳಿಸಲು ಅಧಿಕಾರವಿದೆ ಎಂದು ಹೇಳಿದ್ದಾರೆ.

ಸಿಎಎ ಅನುಷ್ಠಾನವನ್ನು ನಿರಾಕರಿಸುವ ಹಕ್ಕು ರಾಜ್ಯಗಳಿಗೆ ಇಲ್ಲ: ಅಮಿತ್​​ ಶಾ
ಅಮಿತ್​​ ಶಾ
ಅಕ್ಷಯ್​ ಪಲ್ಲಮಜಲು​​
|

Updated on: Mar 14, 2024 | 12:15 PM

Share

ಕೇಂದ್ರ ಸರ್ಕಾರ ಇತ್ತೀಚೆಗೆಷ್ಟೇ ಸಿಎಎ ( ಪೌರತ್ವ ತಿದ್ದುಪಡಿ ಕಾಯ್ದೆ) Citizenship Amendment Act ಯನ್ನು ಜಾರಿ ಮಾಡಿತ್ತು. ಇದೀಗ ಇದನ್ನು ದೇಶದ್ಯಾಂತ ಅನುಷ್ಠಾನ  ಮಾಡಲಾಗಿದೆ. ಆದರೆ ಈ ಕಾನೂನಿಗೆ ಕೆಲವು ರಾಜ್ಯಗಳು ಅಂದರೆ ಬಿಜೆಪಿಯೇತರ ಸರ್ಕಾರಗಳು ವಿರೋಧಿಸಿದೆ. ಈ ಕಾನೂನನ್ನು ಜಾರಿ ಮಾಡಿರುವುದು ಕೇಂದ್ರ, ಇದನ್ನು ಅನುಷ್ಠಾನ ಮಾಡುವುದಿಲ್ಲ ಎನ್ನುವ ಅಧಿಕಾರ ರಾಜ್ಯಗಳಿಗೆ  ಇದ್ದೀಯಾ? ಅಥವಾ ಈ ಕಾನೂನನ್ನು ವಿರೋಧಿಸುವ ಅವಕಾಶ ಅವರಿಗೆ ಯಾರು ನೀಡಿದ್ದು?  ಎಂಬ ಪ್ರಶ್ನೆಗಳು ಹುಟ್ಟಿಕೊಂಡಿದೆ. ಈ ಬಗ್ಗೆ ಕೇಂದ್ರ ಗೃಹಸಚಿವ ಅಮಿತ್​ ಶಾ ಎಎನ್​​ಐ ನಡೆಸಿದ ಸಂದರ್ಶನದಲ್ಲಿ ಉತ್ತರಿಸಿದ್ದಾರೆ. ಸಿಎಎಯನ್ನು ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ರಾಜ್ಯಗಳು ವಿರೋಧಿಸಿದೆ. ಈ ಬಗ್ಗೆ ಉತ್ತರಿಸಿದ ಶಾ, ಸಿಎಎ ಸಂವಿಧಾನದ ಯಾವುದೇ ನಿಬಂಧನೆಗಳನ್ನು ಉಲ್ಲಂಘಿಸುವುದಿಲ್ಲ ಮತ್ತು ಪೌರತ್ವಕ್ಕೆ ಸಂಬಂಧಿಸಿದ ಕಾನೂನುಗಳನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರಕ್ಕೆ ಮಾತ್ರ ಅಧಿಕಾರವಿದೆ. ಈ ಕಾನೂನನ್ನು ಮೋದಿ ಸರ್ಕಾರ ತಂದಿದೆ ಮತ್ತು ಅದನ್ನು ರದ್ದುಗೊಳಿಸುವುದು ಅಸಾಧ್ಯ ಎಂದು ಹೇಳಿದರು.

ಈ ವಿಚಾರವನ್ನು ಇಟ್ಟುಕೊಂಡು ವಿರೋಧ ಪಕ್ಷದ ನಾಯಕರು ತುಷ್ಟೀಕರಣ ರಾಜಕಾರಣ ಮಾಡುತ್ತಿದ್ದಾರೆ ಎಂದು ಹೇಳಿದರು. ಅದರ ಅನುಷ್ಠಾನವನ್ನು ನಿರಾಕರಿಸುವ ಹಕ್ಕು ನಿಮಗೆ ಇದೆಯೇ? ಅವರು ಇದನ್ನು ಅರ್ಥಮಾಡಿಕೊಳ್ಳಬೇಕು. ನಮ್ಮ ಸಂವಿಧಾನದಲ್ಲಿ, ಪೌರತ್ವಕ್ಕೆ ಸಂಬಂಧಿಸಿದ ಕಾನೂನುಗಳನ್ನು ಮಾಡುವ ಹಕ್ಕನ್ನು ಸಂಸತ್ತಿಗೆ ಮಾತ್ರ ನೀಡಲಾಗಿದೆ. ಇದು ಕೇಂದ್ರ ಸರ್ಕಾರದ ಅಧಿಕಾರ. ಹಾಗಾಗಿ ರಾಜ್ಯದಲ್ಲಿ ಕಾನೂನು ಮತ್ತು ಅದರ ಅನುಷ್ಠಾನ ಎರಡನ್ನೂ ಕೇಂದ್ರ ಮಾಡುತ್ತದೆ. ಲೋಕಸಭೆ ಚುನಾವಣೆ ನಂತರ ಎಲ್ಲ ರಾಜಕೀಯ ಪಕ್ಷಗಳು ಒಂದೆಡೆ ಬಂದು ಸಹಕಾರ ನೀಡಲಿವೆ ಎಂದು ಹೇಳಿದರು.

ನಮ್ಮ ಸಂವಿಧಾನದ 11 ನೇ ವಿಧಿಯು ಸಂಸತ್ತಿಗೆ ಪೌರತ್ವದ ಬಗ್ಗೆ ನಿಯಮಗಳನ್ನು ಮಾಡುವ ಎಲ್ಲಾ ಅಧಿಕಾರಗಳನ್ನು ನೀಡುತ್ತದೆ. ಚುನಾವಣೆಯ ನಂತರ ಎಲ್ಲರೂ ಸಹಕರಿಸುತ್ತಾರೆ ಎಂದು ನಾನು ಭಾವಿಸುತ್ತೇನೆ. ಅವರು ತುಷ್ಟೀಕರಣದ ರಾಜಕೀಯಕ್ಕಾಗಿ ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ. ಈ ವಾರದ ಆರಂಭದಲ್ಲಿ ಸಿಎಎ ಅನುಷ್ಠಾನದ ನಿಯಮಗಳನ್ನು ಕೇಂದ್ರವು ಸೂಚಿಸಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಸತತ ಎರಡನೇ ಅವಧಿಯ  ಡಿಸೆಂಬರ್ 2019 ರಲ್ಲಿ ಈ ಮಸೂದೆಯನ್ನು ಸಂಸತ್ತು ಅಂಗೀಕರಿಸಿತು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿಎಎ ಹಿಂಪಡೆಯುವ ಮಾತೇ ಇಲ್ಲ: ಅಮಿತ್ ಶಾ

ಸಿಎಎ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕಟುವಾಗಿ ಟೀಕಿಸಿದರು. ತಮ್ಮ ರಾಜ್ಯಗಳಲ್ಲಿ ಅದನ್ನು ಜಾರಿಗೆ ತರುವುದಿಲ್ಲ ಎಂದು ಹೇಳಿದ್ದಾರೆ. ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಮುನ್ನ ನಿಯಮಗಳನ್ನು ಜಾರಿಗೆ ತಂದಿದೆ. 2024 ರಲ್ಲಿ ಭಾರತ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಸಿಎಎ ರದ್ದುಗೊಳಿಸಲಾಗುವುದು ಎಂದು ಕಾಂಗ್ರೆಸ್​​ ಹೇಳಿದೆ. ಈ ಟೀಕೆಗೆ ಉತ್ತರಿಸಿದ ಶಾ, ಅವರಿಗೆ ಗೊತ್ತಿದೆ, ಲೋಕಸಭೆಯಲ್ಲಿ ಇಂಡಿಯಾ ಮೈತ್ರಿ ಕೂಟ ಗೆಲ್ಲುವುದಿಲ್ಲ ಎಂದು, ಹಾಗಾಗಿ ಹೀಗೆ ಹೇಳುತ್ತಿದ್ದಾರೆ ಎಂದು ಶಾ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು