AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯಕೀಯ ಆಮ್ಲಜನಕ ಕೊರತೆ: ಬೇಡಿಕೆಯನ್ನು ನಿಯಂತ್ರಣದಲ್ಲಿಟ್ಟುಕೊಳ್ಳಿ ಎಂದು ರಾಜ್ಯಗಳಿಗೆ ಸಲಹೆ ನೀಡಿದ ಪಿಯೂಷ್ ಗೋಯಲ್​

ಕೊರೊನಾ ಕೇಸ್​ಗಳು ಹೆಚ್ಚಾದಂತೆ ದೇಶದ ಆರೋಗ್ಯ ಕ್ಷೇತ್ರಕ್ಕೆ, ಇಲ್ಲಿನ ಮೂಲಸೌಕರ್ಯಕ್ಕೆ ಸವಾಲು ಎದುರಾಗುತ್ತದೆ. ನಾವು ರಾಜ್ಯಸರ್ಕಾರಗಳೊಂದಿಗೆ ಸದಾ ಇದ್ದೇವೆ. ಆದರೆ ರಾಜ್ಯ ಸರ್ಕಾರಗಳು ಪೂರೈಕೆ ಮತ್ತು ಬೇಡಿಕೆಯ ನಿರ್ವಹಣೆ ಸರಿಯಾಗಿ ಮಾಡಬೇಕು ಎಂದು ಪಿಯೂಷ್​ ಗೋಯಲ್​ ಹೇಳಿದ್ದಾರೆ.

ವೈದ್ಯಕೀಯ ಆಮ್ಲಜನಕ ಕೊರತೆ: ಬೇಡಿಕೆಯನ್ನು ನಿಯಂತ್ರಣದಲ್ಲಿಟ್ಟುಕೊಳ್ಳಿ ಎಂದು ರಾಜ್ಯಗಳಿಗೆ ಸಲಹೆ ನೀಡಿದ ಪಿಯೂಷ್ ಗೋಯಲ್​
ರೈಲ್ವೆ ಸಚಿವ ಪಿಯೂಷ್ ಗೋಯಲ್
Follow us
Lakshmi Hegde
|

Updated on: Apr 19, 2021 | 9:48 AM

ದೆಹಲಿ: ದೇಶಾದ್ಯಂತ ಕೊರೊನಾ ವೈರಸ್ ಸೋಂಕಿತರು​ ಹೆಚ್ಚುತ್ತಿರುವ ಬೆನ್ನಲ್ಲೇ ವೈದ್ಯಕೀಯ ಆಮ್ಲಜನಕದ ಕೊರತೆ ಎದುರಾಗಿದೆ. ಈ ಬಗ್ಗೆ ಹಲವು ರಾಜ್ಯಗಳು ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿವೆ. ಈ ಮಧ್ಯೆ ವೈದ್ಯಕೀಯ ಆಮ್ಲಜನಕದ ಬೇಡಿಕೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳುವಂತೆ ಕೇಂದ್ರ ಸಚಿವ ಪಿಯೂಷ್​ ಗೋಯಲ್​ ರಾಜ್ಯ ಸರ್ಕಾರಗಳಿಗೆ ಸಲಹೆ ನೀಡಿದ್ದಾರೆ.

12 ರಾಜ್ಯ ಸರ್ಕಾರಗಳೊಂದಿಗೆ ಸಭೆ ವಿಸ್ತೃತ ಸಭೆ ನಡೆಸಿ, ಆಮ್ಲಜನಕ ಕೊರತೆ ಬಗ್ಗೆ ಪರಾಮರ್ಶಿಸಲಾಗಿದೆ. ಅಲ್ಲದೆ, ರಾಜ್ಯಗಳ ಅಗತ್ಯತೆಯನ್ನೂ ಕೇಳಲಾಗಿದೆ. ಒಟ್ಟು 6177 ಮೆಟ್ರಿಕ್​ ಟನ್​ ಆಕ್ಸಿಜನ್​ಗಳನ್ನು ಪೂರೈಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಮಧ್ಯೆ ರಾಜ್ಯಗಳು ಆಮ್ಲಜನಕ ಬೇಡಿಕೆಯನ್ನು ನಿಯಂತ್ರಣ ಮಾಡಬೇಕು. ಪೂರೈಕೆ ನಿರ್ವಹಣೆ ಎಷ್ಟು ಮುಖ್ಯವೋ.. ಬೇಡಿಕೆ ನಿರ್ವಹಣೆಯೂ ಅಷ್ಟೇ ಮುಖ್ಯ ಎಂದು ಪಿಯೂಷ್​ ಗೋಯಲ್ ತಿಳಿಸಿದ್ದಾರೆ.

ಕೊರೊನಾ ಕೇಸ್​ಗಳು ಹೆಚ್ಚಾದಂತೆ ದೇಶದ ಆರೋಗ್ಯ ಕ್ಷೇತ್ರಕ್ಕೆ, ಇಲ್ಲಿನ ಮೂಲಸೌಕರ್ಯಕ್ಕೆ ಸವಾಲು ಎದುರಾಗುತ್ತದೆ. ನಾವು ರಾಜ್ಯಸರ್ಕಾರಗಳೊಂದಿಗೆ ಸದಾ ಇದ್ದೇವೆ. ಆದರೆ ರಾಜ್ಯ ಸರ್ಕಾರಗಳು ಪೂರೈಕೆ ಮತ್ತು ಬೇಡಿಕೆಯ ನಿರ್ವಹಣೆ ಸರಿಯಾಗಿ ಮಾಡಬೇಕು. ಕೊವಿಡ್​ -19 ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದ್ದಾರೆ. 9 ಕೈಗಾರಿಕೆಗಳನ್ನು ಹೊರತುಪಡಿಸಿ, ಉಳಿದ ಕೈಗಾರಿಕೆಗಳಿಗೆ ಏಪ್ರಿಲ್​ 22ರಿಂದ ಆಕ್ಸಿಜನ್​ ಪೂರೈಕೆಯನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗುವುದು. ವೈದ್ಯಕೀಯ ಆಮ್ಲಜನಕವನ್ನು ಹೆಚ್ಚೆಚ್ಚು ಪೂರೈಸುವ ದೃಷ್ಟಿಯಿಂದ ಇದನ್ನು ಮಾಡಲಾಗಿದೆ ಎಂದು ಹೇಳಿದ್ದಾರೆ. ಅಲ್ಲದೆ, ಅತಿಹೆಚ್ಚಿನ ಪ್ರಮಾಣದ ಆಕ್ಸಿಜನ್ ಅಂದರೆ ಸುಮಾರು 1500 ಮೆಟ್ರಿಕ್​ ಟನ್​ಗಳಷ್ಟನ್ನು ಮಹಾರಾಷ್ಟ್ರಕ್ಕೆ ನೀಡಲಾಗುವುದು, ದೆಹಲಿಗೆ 350 ಮೆಟ್ರಿಕ್​ ಟನ್ ಮತ್ತು ಉತ್ತರ ಪ್ರದೇಶಕ್ಕೆ 800 ಮೆಟ್ರಿಕ್​ ಟನ್ ಪೂರೈಕೆ ಮಾಡುವುದಾಗಿ ಪಿಯೂಷ್ ಗೋಯಲ್ ತಿಳಿಸಿದ್ದಾರೆ.

ಇದನ್ನೂ ಓದಿ: ಬಿಹಾರದ ಮಾಜಿ ಸಚಿವ, ಜೆಡಿಯು ಶಾಸಕ ಮೇವಾಲಾಲ್ ಚೌಧರಿ ಕೊರೊನಾಗೆ ಬಲಿ

ರೆಮ್​ಡೆಸಿವರ್​​ಗೆ ಪರ್ಯಾಯ ದೇಸಿ ಆಯುಧ್​ ಅಡ್ವಾನ್ಸ್​! ಔಷಧಿ ಪಡೆದ ವಾರದೊಳಗೆ ಸೋಂಕಿತರು ಗುಣಮುಖ ಎಂದ ಅಧ್ಯಯನ

(States should keep Medical oxygen demand under Control says Piyush Goyal)

ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ
ಶೋಪಿಯಾನ್​ನಲ್ಲಿ ಲಷ್ಕರ್​​ನ ಮೋಸ್ಟ್ ವಾಂಟೆಡ್ ಉಗ್ರ ಸೇರಿ ಮೂವರ ಎನ್​ಕೌಂಟರ್
ಶೋಪಿಯಾನ್​ನಲ್ಲಿ ಲಷ್ಕರ್​​ನ ಮೋಸ್ಟ್ ವಾಂಟೆಡ್ ಉಗ್ರ ಸೇರಿ ಮೂವರ ಎನ್​ಕೌಂಟರ್
ಎಲ್ಲ ಸಂದೇಹಗಳನ್ನು ಪ್ರಧಾನಿ ಮೋದಿ ದೂರ ಮಾಡಿದ್ದಾರೆ: ವಿಜಯೇಂದ್ರ
ಎಲ್ಲ ಸಂದೇಹಗಳನ್ನು ಪ್ರಧಾನಿ ಮೋದಿ ದೂರ ಮಾಡಿದ್ದಾರೆ: ವಿಜಯೇಂದ್ರ
ನಿಮಗೆ ಇಂಗ್ಲಿಷ್ ಬರದಿದ್ದರೆ ಸುಮ್ಮನಿರಿ, ಪಾಕ್​ ರಕ್ಷಣಾ ಸಚಿವಗೆ ತರಾಟೆ
ನಿಮಗೆ ಇಂಗ್ಲಿಷ್ ಬರದಿದ್ದರೆ ಸುಮ್ಮನಿರಿ, ಪಾಕ್​ ರಕ್ಷಣಾ ಸಚಿವಗೆ ತರಾಟೆ