AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವ ಕಾರಣಕ್ಕೂ ಶೆಲ್ಟರ್​​ಗಳಿಂದ ಹೊರಬರಬೇಡಿ, ನಾವು ಸ್ಥಳಾಂತರ ಮಾಡುತ್ತೇವೆ: ಸುಮಿಯಲ್ಲಿರುವ ವಿದ್ಯಾರ್ಥಿಗಳಿಗೆ ಭಾರತದಿಂದ ಸೂಚನೆ

ಸುಮಿ ಎಂಬುದು ಉಕ್ರೇನ್​​ನ ಈಶಾನ್ಯ ವಲಯದಲ್ಲಿರುವ ಒಂದು ನಗರ. ಇಲ್ಲಿ ಭಾರತೀಯ ವಿದ್ಯಾರ್ಥಿಗಳು ಸುಮಾರು 800 ಮಂದಿ ಇದ್ದಾರೆ. ಅಲ್ಲೀಗ ಸದ್ಯ ಯುದ್ಧದ ತೀವ್ರತೆಯೂ ಜಾಸ್ತಿಯಾಗಿದೆ.

ಯಾವ ಕಾರಣಕ್ಕೂ ಶೆಲ್ಟರ್​​ಗಳಿಂದ ಹೊರಬರಬೇಡಿ, ನಾವು ಸ್ಥಳಾಂತರ ಮಾಡುತ್ತೇವೆ: ಸುಮಿಯಲ್ಲಿರುವ ವಿದ್ಯಾರ್ಥಿಗಳಿಗೆ ಭಾರತದಿಂದ ಸೂಚನೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Mar 05, 2022 | 4:58 PM

Share

ಉಕ್ರೇನ್​ನ ಸುಮಿ (Sumy) ಯುದ್ಧವಲಯದಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ ಬಗ್ಗೆ ನಮಗೆ ಕಾಳಜಿಯಿದೆ. ರಷ್ಯಾ ಮತ್ತು ಉಕ್ರೇನ್​ ನಡುವಿನ ಯುದ್ಧ ತೀವ್ರತೆ ಹೆಚ್ಚಾಗಿರುವ ಸುಮಿಯಲ್ಲಿ ಇರುವ ವಿದ್ಯಾರ್ಥಿಗಳು ಯಾವ ಕಾರಣಕ್ಕೂ ಹೊರಬೀಳಬೇಡಿ. ಸಾಧ್ಯವಾದಷ್ಟು ಮುನ್ನೆಚ್ಚರಿಕಾ ಕ್ರಮ ಕೈಗೊಂಡು, ಶೆಲ್ಟರ್​​ಗಳ ಒಳಗೇ ಇರಿ. ಎಲ್ಲರನ್ನೂ ರಕ್ಷಣೆ ಮಾಡುವ ಸಲುವಾಗಿ, ಕದನ ವಿರಾಮ ಘೋಷಿಸಿ ಸುರಕ್ಷಿತ ಕಾರಿಡಾರ್​ ಸೃಷ್ಟಿಸಿಕೊಡುವಂತೆ ಭಾರತ ರಷ್ಯಾ ಮತ್ತು ಉಕ್ರೇನ್​ಗೆ ನಾವು ಒತ್ತಾಯಿಸಿದ್ದೇವೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಹೇಳಿದೆ.

ಉಕ್ರೇನ್​ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಟ್ವೀಟ್​ ಮಾಡಿ, ಸುಮಿ ಯುದ್ಧ ವಲಯದಲ್ಲಿರುವ ವಿದ್ಯಾರ್ಥಿಗಳು ಇದ್ದಲ್ಲೇ ಸುರಕ್ಷಿತವಾಗಿರಿ. ಧೈರ್ಯಗೆಡಬೇಡಿ. ನಿಮ್ಮನ್ನು ಸ್ಥಳಾಂತರ ಮಾಡಲು ಎಲ್ಲ ರೀತಿಯ ಕ್ರಮಗಳನ್ನೂ ಕೈಗೊಳ್ಳಲಾಗುತ್ತಿದೆ. ಪ್ರತಿಯೊಬ್ಬರನ್ನೂ ರಕ್ಷಣೆ ಮಾಡುವವರೆಗೂ ನಮ್ಮ ಕಂಟ್ರೋಲ್​ ರೂಂ ಸಕ್ರಿಯವಾಗಿಯೇ ಇರುತ್ತದೆ ಎಂದು ತಿಳಿಸಿದೆ.

ಸುಮಿ ಎಂಬುದು ಉಕ್ರೇನ್​​ನ ಈಶಾನ್ಯ ವಲಯದಲ್ಲಿರುವ ಒಂದು ನಗರ. ಇಲ್ಲಿ ಭಾರತೀಯ ವಿದ್ಯಾರ್ಥಿಗಳು ಸುಮಾರು 800 ಮಂದಿ ಇದ್ದಾರೆ. ಅಲ್ಲೀಗ ಸದ್ಯ ಯುದ್ಧದ ತೀವ್ರತೆಯೂ ಜಾಸ್ತಿಯಾಗಿದೆ. ಬಂಕರ್​, ಶೆಲ್ಟರ್​​ಗಳಲ್ಲಿರುವ ವಿದ್ಯಾರ್ಥಿಗಳು ಸೋಷಿಯಲ್ ಮೀಡಿಯಾಗಳಲ್ಲಿ ವಿವಿಧ ವಿಡಿಯೋಗಳನ್ನು ಹಾಕುತ್ತಿದ್ದಾರೆ. ರಾಯಭಾರಿ ಕಚೇರಿಗೆ ಎಸ್​ಒಎಸ್​ ಮೆಸೇಜ್​ಗಳನ್ನು ಕಳಿಸಿ, ತಮ್ಮನ್ನು ಕಾಪಾಡುವಂತೆ ಕೇಳಿಕೊಳ್ಳುತ್ತಿದ್ದಾರೆ. ಇನ್ನು ವಿವಿಧ ದೇಶಗಳ ನಾಗರಿಕರು, ವಿದ್ಯಾರ್ಥಿಗಳ ರಕ್ಷಣೆಗಾಗಿ ಮಾನವೀಯ ಕಾರಿಡಾರ್​​ಗಳನ್ನು ಅನುವು ಮಾಡಿಕೊಡಲು ರಷ್ಯಾ ತಾತ್ಕಾಲಿಕವಾಗಿ ಕದನ ವಿರಾಮ ಘೋಷಿಸಿದೆ.

ಇದನ್ನೂ ಓದಿ: Milk Price Hike: ಭಾನುವಾರದಿಂದ ಮದರ್ ಡೈರಿ ಹಾಲಿನ ಬೆಲೆ 1 ಲೀಟರ್​ಗೆ 2 ರೂ. ಏರಿಕೆ

Published On - 4:58 pm, Sat, 5 March 22

Follow Us
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್