AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವ ಕಾರಣಕ್ಕೂ ಶೆಲ್ಟರ್​​ಗಳಿಂದ ಹೊರಬರಬೇಡಿ, ನಾವು ಸ್ಥಳಾಂತರ ಮಾಡುತ್ತೇವೆ: ಸುಮಿಯಲ್ಲಿರುವ ವಿದ್ಯಾರ್ಥಿಗಳಿಗೆ ಭಾರತದಿಂದ ಸೂಚನೆ

ಸುಮಿ ಎಂಬುದು ಉಕ್ರೇನ್​​ನ ಈಶಾನ್ಯ ವಲಯದಲ್ಲಿರುವ ಒಂದು ನಗರ. ಇಲ್ಲಿ ಭಾರತೀಯ ವಿದ್ಯಾರ್ಥಿಗಳು ಸುಮಾರು 800 ಮಂದಿ ಇದ್ದಾರೆ. ಅಲ್ಲೀಗ ಸದ್ಯ ಯುದ್ಧದ ತೀವ್ರತೆಯೂ ಜಾಸ್ತಿಯಾಗಿದೆ.

ಯಾವ ಕಾರಣಕ್ಕೂ ಶೆಲ್ಟರ್​​ಗಳಿಂದ ಹೊರಬರಬೇಡಿ, ನಾವು ಸ್ಥಳಾಂತರ ಮಾಡುತ್ತೇವೆ: ಸುಮಿಯಲ್ಲಿರುವ ವಿದ್ಯಾರ್ಥಿಗಳಿಗೆ ಭಾರತದಿಂದ ಸೂಚನೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Mar 05, 2022 | 4:58 PM

Share

ಉಕ್ರೇನ್​ನ ಸುಮಿ (Sumy) ಯುದ್ಧವಲಯದಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ ಬಗ್ಗೆ ನಮಗೆ ಕಾಳಜಿಯಿದೆ. ರಷ್ಯಾ ಮತ್ತು ಉಕ್ರೇನ್​ ನಡುವಿನ ಯುದ್ಧ ತೀವ್ರತೆ ಹೆಚ್ಚಾಗಿರುವ ಸುಮಿಯಲ್ಲಿ ಇರುವ ವಿದ್ಯಾರ್ಥಿಗಳು ಯಾವ ಕಾರಣಕ್ಕೂ ಹೊರಬೀಳಬೇಡಿ. ಸಾಧ್ಯವಾದಷ್ಟು ಮುನ್ನೆಚ್ಚರಿಕಾ ಕ್ರಮ ಕೈಗೊಂಡು, ಶೆಲ್ಟರ್​​ಗಳ ಒಳಗೇ ಇರಿ. ಎಲ್ಲರನ್ನೂ ರಕ್ಷಣೆ ಮಾಡುವ ಸಲುವಾಗಿ, ಕದನ ವಿರಾಮ ಘೋಷಿಸಿ ಸುರಕ್ಷಿತ ಕಾರಿಡಾರ್​ ಸೃಷ್ಟಿಸಿಕೊಡುವಂತೆ ಭಾರತ ರಷ್ಯಾ ಮತ್ತು ಉಕ್ರೇನ್​ಗೆ ನಾವು ಒತ್ತಾಯಿಸಿದ್ದೇವೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಹೇಳಿದೆ.

ಉಕ್ರೇನ್​ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಟ್ವೀಟ್​ ಮಾಡಿ, ಸುಮಿ ಯುದ್ಧ ವಲಯದಲ್ಲಿರುವ ವಿದ್ಯಾರ್ಥಿಗಳು ಇದ್ದಲ್ಲೇ ಸುರಕ್ಷಿತವಾಗಿರಿ. ಧೈರ್ಯಗೆಡಬೇಡಿ. ನಿಮ್ಮನ್ನು ಸ್ಥಳಾಂತರ ಮಾಡಲು ಎಲ್ಲ ರೀತಿಯ ಕ್ರಮಗಳನ್ನೂ ಕೈಗೊಳ್ಳಲಾಗುತ್ತಿದೆ. ಪ್ರತಿಯೊಬ್ಬರನ್ನೂ ರಕ್ಷಣೆ ಮಾಡುವವರೆಗೂ ನಮ್ಮ ಕಂಟ್ರೋಲ್​ ರೂಂ ಸಕ್ರಿಯವಾಗಿಯೇ ಇರುತ್ತದೆ ಎಂದು ತಿಳಿಸಿದೆ.

ಸುಮಿ ಎಂಬುದು ಉಕ್ರೇನ್​​ನ ಈಶಾನ್ಯ ವಲಯದಲ್ಲಿರುವ ಒಂದು ನಗರ. ಇಲ್ಲಿ ಭಾರತೀಯ ವಿದ್ಯಾರ್ಥಿಗಳು ಸುಮಾರು 800 ಮಂದಿ ಇದ್ದಾರೆ. ಅಲ್ಲೀಗ ಸದ್ಯ ಯುದ್ಧದ ತೀವ್ರತೆಯೂ ಜಾಸ್ತಿಯಾಗಿದೆ. ಬಂಕರ್​, ಶೆಲ್ಟರ್​​ಗಳಲ್ಲಿರುವ ವಿದ್ಯಾರ್ಥಿಗಳು ಸೋಷಿಯಲ್ ಮೀಡಿಯಾಗಳಲ್ಲಿ ವಿವಿಧ ವಿಡಿಯೋಗಳನ್ನು ಹಾಕುತ್ತಿದ್ದಾರೆ. ರಾಯಭಾರಿ ಕಚೇರಿಗೆ ಎಸ್​ಒಎಸ್​ ಮೆಸೇಜ್​ಗಳನ್ನು ಕಳಿಸಿ, ತಮ್ಮನ್ನು ಕಾಪಾಡುವಂತೆ ಕೇಳಿಕೊಳ್ಳುತ್ತಿದ್ದಾರೆ. ಇನ್ನು ವಿವಿಧ ದೇಶಗಳ ನಾಗರಿಕರು, ವಿದ್ಯಾರ್ಥಿಗಳ ರಕ್ಷಣೆಗಾಗಿ ಮಾನವೀಯ ಕಾರಿಡಾರ್​​ಗಳನ್ನು ಅನುವು ಮಾಡಿಕೊಡಲು ರಷ್ಯಾ ತಾತ್ಕಾಲಿಕವಾಗಿ ಕದನ ವಿರಾಮ ಘೋಷಿಸಿದೆ.

ಇದನ್ನೂ ಓದಿ: Milk Price Hike: ಭಾನುವಾರದಿಂದ ಮದರ್ ಡೈರಿ ಹಾಲಿನ ಬೆಲೆ 1 ಲೀಟರ್​ಗೆ 2 ರೂ. ಏರಿಕೆ

Published On - 4:58 pm, Sat, 5 March 22

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ