AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವ ಕಾರಣಕ್ಕೂ ಶೆಲ್ಟರ್​​ಗಳಿಂದ ಹೊರಬರಬೇಡಿ, ನಾವು ಸ್ಥಳಾಂತರ ಮಾಡುತ್ತೇವೆ: ಸುಮಿಯಲ್ಲಿರುವ ವಿದ್ಯಾರ್ಥಿಗಳಿಗೆ ಭಾರತದಿಂದ ಸೂಚನೆ

ಸುಮಿ ಎಂಬುದು ಉಕ್ರೇನ್​​ನ ಈಶಾನ್ಯ ವಲಯದಲ್ಲಿರುವ ಒಂದು ನಗರ. ಇಲ್ಲಿ ಭಾರತೀಯ ವಿದ್ಯಾರ್ಥಿಗಳು ಸುಮಾರು 800 ಮಂದಿ ಇದ್ದಾರೆ. ಅಲ್ಲೀಗ ಸದ್ಯ ಯುದ್ಧದ ತೀವ್ರತೆಯೂ ಜಾಸ್ತಿಯಾಗಿದೆ.

ಯಾವ ಕಾರಣಕ್ಕೂ ಶೆಲ್ಟರ್​​ಗಳಿಂದ ಹೊರಬರಬೇಡಿ, ನಾವು ಸ್ಥಳಾಂತರ ಮಾಡುತ್ತೇವೆ: ಸುಮಿಯಲ್ಲಿರುವ ವಿದ್ಯಾರ್ಥಿಗಳಿಗೆ ಭಾರತದಿಂದ ಸೂಚನೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Mar 05, 2022 | 4:58 PM

Share

ಉಕ್ರೇನ್​ನ ಸುಮಿ (Sumy) ಯುದ್ಧವಲಯದಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ ಬಗ್ಗೆ ನಮಗೆ ಕಾಳಜಿಯಿದೆ. ರಷ್ಯಾ ಮತ್ತು ಉಕ್ರೇನ್​ ನಡುವಿನ ಯುದ್ಧ ತೀವ್ರತೆ ಹೆಚ್ಚಾಗಿರುವ ಸುಮಿಯಲ್ಲಿ ಇರುವ ವಿದ್ಯಾರ್ಥಿಗಳು ಯಾವ ಕಾರಣಕ್ಕೂ ಹೊರಬೀಳಬೇಡಿ. ಸಾಧ್ಯವಾದಷ್ಟು ಮುನ್ನೆಚ್ಚರಿಕಾ ಕ್ರಮ ಕೈಗೊಂಡು, ಶೆಲ್ಟರ್​​ಗಳ ಒಳಗೇ ಇರಿ. ಎಲ್ಲರನ್ನೂ ರಕ್ಷಣೆ ಮಾಡುವ ಸಲುವಾಗಿ, ಕದನ ವಿರಾಮ ಘೋಷಿಸಿ ಸುರಕ್ಷಿತ ಕಾರಿಡಾರ್​ ಸೃಷ್ಟಿಸಿಕೊಡುವಂತೆ ಭಾರತ ರಷ್ಯಾ ಮತ್ತು ಉಕ್ರೇನ್​ಗೆ ನಾವು ಒತ್ತಾಯಿಸಿದ್ದೇವೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಹೇಳಿದೆ.

ಉಕ್ರೇನ್​ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಟ್ವೀಟ್​ ಮಾಡಿ, ಸುಮಿ ಯುದ್ಧ ವಲಯದಲ್ಲಿರುವ ವಿದ್ಯಾರ್ಥಿಗಳು ಇದ್ದಲ್ಲೇ ಸುರಕ್ಷಿತವಾಗಿರಿ. ಧೈರ್ಯಗೆಡಬೇಡಿ. ನಿಮ್ಮನ್ನು ಸ್ಥಳಾಂತರ ಮಾಡಲು ಎಲ್ಲ ರೀತಿಯ ಕ್ರಮಗಳನ್ನೂ ಕೈಗೊಳ್ಳಲಾಗುತ್ತಿದೆ. ಪ್ರತಿಯೊಬ್ಬರನ್ನೂ ರಕ್ಷಣೆ ಮಾಡುವವರೆಗೂ ನಮ್ಮ ಕಂಟ್ರೋಲ್​ ರೂಂ ಸಕ್ರಿಯವಾಗಿಯೇ ಇರುತ್ತದೆ ಎಂದು ತಿಳಿಸಿದೆ.

ಸುಮಿ ಎಂಬುದು ಉಕ್ರೇನ್​​ನ ಈಶಾನ್ಯ ವಲಯದಲ್ಲಿರುವ ಒಂದು ನಗರ. ಇಲ್ಲಿ ಭಾರತೀಯ ವಿದ್ಯಾರ್ಥಿಗಳು ಸುಮಾರು 800 ಮಂದಿ ಇದ್ದಾರೆ. ಅಲ್ಲೀಗ ಸದ್ಯ ಯುದ್ಧದ ತೀವ್ರತೆಯೂ ಜಾಸ್ತಿಯಾಗಿದೆ. ಬಂಕರ್​, ಶೆಲ್ಟರ್​​ಗಳಲ್ಲಿರುವ ವಿದ್ಯಾರ್ಥಿಗಳು ಸೋಷಿಯಲ್ ಮೀಡಿಯಾಗಳಲ್ಲಿ ವಿವಿಧ ವಿಡಿಯೋಗಳನ್ನು ಹಾಕುತ್ತಿದ್ದಾರೆ. ರಾಯಭಾರಿ ಕಚೇರಿಗೆ ಎಸ್​ಒಎಸ್​ ಮೆಸೇಜ್​ಗಳನ್ನು ಕಳಿಸಿ, ತಮ್ಮನ್ನು ಕಾಪಾಡುವಂತೆ ಕೇಳಿಕೊಳ್ಳುತ್ತಿದ್ದಾರೆ. ಇನ್ನು ವಿವಿಧ ದೇಶಗಳ ನಾಗರಿಕರು, ವಿದ್ಯಾರ್ಥಿಗಳ ರಕ್ಷಣೆಗಾಗಿ ಮಾನವೀಯ ಕಾರಿಡಾರ್​​ಗಳನ್ನು ಅನುವು ಮಾಡಿಕೊಡಲು ರಷ್ಯಾ ತಾತ್ಕಾಲಿಕವಾಗಿ ಕದನ ವಿರಾಮ ಘೋಷಿಸಿದೆ.

ಇದನ್ನೂ ಓದಿ: Milk Price Hike: ಭಾನುವಾರದಿಂದ ಮದರ್ ಡೈರಿ ಹಾಲಿನ ಬೆಲೆ 1 ಲೀಟರ್​ಗೆ 2 ರೂ. ಏರಿಕೆ

Published On - 4:58 pm, Sat, 5 March 22

ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?