AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಹಾಸಿಗೆಯಲ್ಲಿ ಮೂತ್ರ ಮಾಡಿದ್ದಕ್ಕೆ ಮಗುವಿನ ಗುಪ್ತಾಂಗವನ್ನೇ ಸುಟ್ಟ ತಾಯಿ!

ಕೇರಳದಲ್ಲಿ ಅತ್ಯಂತ ಅಮಾನವೀಯ ಘಟನೆಯೊಂದು ನಡೆದಿದೆ. ಹಾಸಿಗೆಯಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಕ್ಕಾಗಿ ಐದು ವರ್ಷದ ಬಾಲಕಿಯೊಬ್ಬಳು ಮಲತಾಯಿಯನ್ನು ಕ್ರೂರವಾಗಿ ಥಳಿಸಿದ್ದಾಳೆ. ಬಳಿಕ ಆ ಮಗುವಿನ ಖಾಸಗಿ ಭಾಗಗಳನ್ನು ಬಿಸಿ ಮಾಡಿದ ಸ್ಟೀಲ್ ಸೌಟಿನಿಂದ ಸುಟ್ಟಿದ್ದಾಳೆ. ಪಾಲಕ್ಕಾಡ್‌ ಬಳಿ ಈ ಘಟನೆ ನಡೆದಿದೆ. ಈ ಪ್ರಕರಣದಲ್ಲಿ ಪೊಲೀಸರು ಮಲತಾಯಿಯನ್ನು ಬಂಧಿಸಿದ್ದಾರೆ.

Viral News: ಹಾಸಿಗೆಯಲ್ಲಿ ಮೂತ್ರ ಮಾಡಿದ್ದಕ್ಕೆ ಮಗುವಿನ ಗುಪ್ತಾಂಗವನ್ನೇ ಸುಟ್ಟ ತಾಯಿ!
Kerala Mother Burns Child Private Part
ಸುಷ್ಮಾ ಚಕ್ರೆ
|

Updated on:Jan 09, 2026 | 10:10 PM

Share

ಪಾಲಕ್ಕಾಡ್, ಜನವರಿ 9: 5 ವರ್ಷದ ಪುಟ್ಟ ಬಾಲಕಿ ಮಲಗಿದ್ದಾಗ ಹಾಸಿಗೆಯಲ್ಲಿ ಮೂತ್ರ ಮಾಡಿದ್ದಾಳೆಂಬ ಕಾರಣಕ್ಕೆ ಆಕೆಯ ಮಲತಾಯಿ ಆ ಮಗುವಿನ ಗುಪ್ತಾಂಗವನ್ನೇ (Private Part) ಸುಟ್ಟಿದ್ದಾಳೆ. ಕಳೆದ ವಾರ ಉತ್ತರ ಕೇರಳ ಜಿಲ್ಲೆಯ ಕಾಂಜಿಕೋಡ್ ಬಳಿ ಈ ಘಟನೆ ನಡೆದಿದೆ. ಆ ಮಗು ಅಂಗನವಾಡಿಯಲ್ಲಿ ಕುಳಿತುಕೊಳ್ಳಲು ಕಷ್ಟಪಡುತ್ತಿರುವುದನ್ನು ಗಮನಿಸಿ ಶಿಕ್ಷಕಿ ಏನಾಯಿತು ಎಂದು ವಿಚಾರಿಸಿದಾಗ ಆ ಮಗು ಈ ವಿಷಯವನ್ನು ಹೇಳಿದೆ.

ಬಳಿಕ ಆ ಮಗುವಿನ ಗುಪ್ತಾಂಗವನ್ನು ಪರೀಕ್ಷಿಸಿದ ಅಂಗನವಾಡಿ ಶಿಕ್ಷಕಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಬಿಹಾರ ಮೂಲದ ಮಲತಾಯಿಯನ್ನು ಬಂಧಿಸಲಾಗಿದೆ. ಆಕೆಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆ ಮಹಿಳೆಯ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಮತ್ತು ಬಾಲ ನ್ಯಾಯ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯಕ್ಕೆ ಆ ಮಗು ಮಕ್ಕಳ ಕಲ್ಯಾಣ ಸಮಿತಿಯ (ಸಿಡಬ್ಲ್ಯೂಸಿ) ಆರೈಕೆಯಲ್ಲಿದೆ.

ಇದನ್ನೂ ಓದಿ: ಅಮ್ಮನ ಎದೆಹಾಲು ಕುಡಿಯುವಾಗ ಮಗು ಸಾವು!

ಆ ಮಹಿಳೆ ಇದಕ್ಕೂ ಮುಂಚೆ ಕೂಡ ಮಗುವಿನ ಮೇಲೆ ಇದೇ ರೀತಿ ಹಲ್ಲೆ ನಡೆಸಿದ್ದಾಳೆ ಎಂದು ಅಕ್ಕಪಕ್ಕದವರು ಹೇಳಿದ್ದಾರೆ. ಈ ಬಗ್ಗೆಯೂ ಪೊಲೀಸರು ವಿಚಾರಣೆ ನಡೆಸಿ, ಸಾಕ್ಷಿಗಳನ್ನು ಕಲೆಹಾಕುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:03 pm, Fri, 9 January 26

Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ