AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಜೋರಾಂನಲ್ಲಿ ಕಲ್ಲು ಕ್ವಾರಿ ಕುಸಿತ ಪ್ರಕರಣ; ಎಂಟು ಮಂದಿ ಸಾವು, ಮುಂದುವರಿದ ನಾಲ್ವರ ಶೋಧ ಕಾರ್ಯ

ಮಿಜೋರಾಂನಲ್ಲಿ ಕಲ್ಲು ಕ್ವಾರಿ ಕುಸಿದು ಎಂಟು ಮಂದಿ ಸಾವನ್ನಪ್ಪಿದ್ದು, ಅವಶೇಷಗಳಡಿ ಸಿಲುಕಿದ ಉಳಿದ ನಾಲ್ವರ ಶೋಧ ಕಾರ್ಯ ಮುಂದುವರಿದಿದೆ.

ಮಿಜೋರಾಂನಲ್ಲಿ ಕಲ್ಲು ಕ್ವಾರಿ ಕುಸಿತ ಪ್ರಕರಣ; ಎಂಟು ಮಂದಿ ಸಾವು, ಮುಂದುವರಿದ ನಾಲ್ವರ ಶೋಧ ಕಾರ್ಯ
ಮಿಜೋರಾಂನಲ್ಲಿ ಕಲ್ಲು ಕ್ವಾರಿ ಕುಸಿತ; ಎಂಟು ಮಂದಿ ಸಾವು, ಮುಂದುವರೆದ ನಾಲ್ವರ ಶೋಧ ಕಾರ್ಯ Image Credit source: Twitter/ @farhan_assam
Follow us
TV9 Web
| Updated By: Rakesh Nayak Manchi

Updated on:Nov 15, 2022 | 10:33 AM

ಗುವಾಹಟಿ: ಮಿಜೋರಾಂ (Mizoram)ನ ಹ್ನಾಥಿಯಲ್ ಜಿಲ್ಲೆಯಲ್ಲಿ ಸೋಮವಾರ ಕಲ್ಲು ಕ್ವಾರಿಯೊಂದು ಕುಸಿದು (stone quarry collapse) ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ. ನಾಲ್ವರು ಇನ್ನೂ ನಾಪತ್ತೆಯಾಗಿದ್ದು, ಅವರನ್ನು ರಕ್ಷಿಸಲು ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. ಕ್ವಾರಿ ಸೈಟ್​ನಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಅವಶೇಷಗಳಡಿ ಸಿಲುಕಿದ್ದ 12 ಜನರ ಪೈಕಿ ಮಂಗಳವಾರ ಬೆಳಗ್ಗೆ 7 ರವರೆಗೆ ಎಂಟು ಮಂದಿಯ ಶವಗಳನ್ನು ಹೊರತೆಗೆಯಲಾಗಿದೆ. ನಾಪತ್ತೆಯಾಗಿರುವ ಉಳಿದ ವ್ಯಕ್ತಿಗಳ ಶೋಧ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಹ್ನಥಿಯಾಲ್ ಜಿಲ್ಲಾ ಉಪ ಆಯುಕ್ತ ಆರ್.ಲಾಲರೇಮಸಂಗ ಹೇಳಿದರು.

ಮಂಗಳವಾರ ಬೆಳಗ್ಗೆ 2 ಅಧಿಕಾರಿಗಳು ಮತ್ತು 13 ಸಿಬ್ಬಂದಿಯನ್ನು ಒಳಗೊಂಡ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ತಂಡವು ಸ್ಥಳಕ್ಕೆ ಆಗಮಿಸಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಲಾಲರೇಮಸಂಗ ತಿಳಿಸಿದ್ದಾರೆ. “ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಯ ನಂತರ ಗುರುತಿಸಲಾಗುವುದು. ಶೋಧ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಮತ್ತು ಕಾಣೆಯಾದವರೆಲ್ಲರೂ ಪತ್ತೆಯಾಗುವವರೆಗೂ ಮುಂದುವರೆಸಲಾಗುವುದು” ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಹೇಳಿಕೆಯಲ್ಲಿ ತಿಳಿಸಿದೆ.

ಮೂಲಗಳ ಪ್ರಕಾರ ಮೌದರ್ಹ್ ಹ್ನಥಿಯಾಲ್ ಜಿಲ್ಲೆಯ ಖಾಸಗಿ ಕಂಪನಿಯ ಕಾರ್ಮಿಕರು ತಮ್ಮ ಊಟದ ವಿರಾಮದಿಂದ ಆಗಷ್ಟೇ ಹಿಂದಿರುಗುತ್ತಿದ್ದಾಗ ಕಲ್ಲು ಕ್ವಾರಿ ಕುಸಿದಿದೆ. ಐದು ಹಿಟಾಚಿ ಉತ್ಖನನ ಯಂತ್ರಗಳು ಮತ್ತು ಇತರ ಡ್ರಿಲ್ಲಿಂಗ್ ಯಂತ್ರಗಳು ಸಹಿತ ಕಾರ್ಮಿಕರು ಅವಶೇಷಗಳಡಿ ಹೂತುಹೋಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಲೀಟೆ ಗ್ರಾಮ ಮತ್ತು ಹ್ನಥಿಯಾಲ್ ಪಟ್ಟಣದ ಸ್ವಯಂಸೇವಕರು ರಕ್ಷಣಾ ಕಾರ್ಯಾಚರಣೆಗಾಗಿ ದಾವಿಸಿದರು. ಇದೇ ವೇಳೆ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ, ಗಡಿ ಭದ್ರತಾ ಪಡೆ ಮತ್ತು ಅಸ್ಸಾಂ ರೈಫಲ್ಸ್ ಬಂದಿವೆ. ಈ ಕಲ್ಲು ಕ್ವಾರಿ ಎರಡೂವರೆ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ.

ಮತ್ತಷ್ಟು ದೇಶ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:30 am, Tue, 15 November 22

ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ