AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

JNUನಲ್ಲಿ ಪ್ರಧಾನಿ ಮೋದಿ ಕುರಿತ ವಿವಾದಿತ ಸಾಕ್ಷ್ಯಚಿತ್ರ ವೀಕ್ಷಿಸುವ ವೇಳೆ ವಿದ್ಯುತ್ ಕಡಿತ, ಕಲ್ಲು ತೂರಾಟ

ಪ್ರಧಾನಿ ನರೇಂದ್ರ ಮೋದಿ ಕುರಿತ ವಿವಾದಿ ಬಿಬಿಸಿಯ ಸಾಕ್ಷ್ಯಚಿತ್ರ ವೀಕ್ಷಣೆ ಸಂದರ್ಭದಲ್ಲಿ ಪವರ್ ಕಟ್ ಮಾಡಿದ್ದರಿಂದ ವಿದ್ಯಾರ್ಥಿಗಳು ಕಲ್ಲು ತೂರಿ ಗಲಾಟೆ ಮಾಡಿದ್ದಾರೆ.

JNUನಲ್ಲಿ ಪ್ರಧಾನಿ ಮೋದಿ ಕುರಿತ ವಿವಾದಿತ ಸಾಕ್ಷ್ಯಚಿತ್ರ ವೀಕ್ಷಿಸುವ ವೇಳೆ ವಿದ್ಯುತ್ ಕಡಿತ, ಕಲ್ಲು ತೂರಾಟ
JNUನಲ್ಲಿ ಮೋದಿ ಸಾಕ್ಷ್ಯಚಿತ್ರ ವೀಕ್ಷಿಸುತ್ತಿದ್ದವರ ಮೇಲೆ ಕಲ್ಲು ತೂರಾಟ
TV9 Web
| Edited By: |

Updated on:Jan 25, 2023 | 2:24 PM

Share

ನವದೆಹಲಿ: ತೀವ್ರ ವಿವಾದಕ್ಕೆ ಕಾರಣವಾಗಿರುವ ಬಿಬಿಸಿ ಸಂಸ್ಥೆಯ ಪ್ರಧಾನಿ ಮೋದಿ (Narendra Modi) ಕುರಿತ ಸಾಕ್ಷ್ಯಚಿತ್ರವನ್ನು(BBC Documentary) ದೆಹಲಿಯ ಜೆಎನ್​ಯುನಲ್ಲಿ (JNU) ಪ್ರದರ್ಶನ ಮಾಡಲಾಗಿದೆ. ಈ ವೇಳೆ ವಿದ್ಯುತ್ ಕಡಿತವಾಗಿದ್ದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಕಲ್ಲು ತೂರಿ ಗಲಾಟೆ ಮಾಡಿದ್ದಾರೆ ಎಂದು ವರದಿಯಾಗಿದೆ. ಅನುಮತಿ ನಿರಾಕರಣೆ ಮಧ್ಯೆಯೂ ಡಾಕ್ಯುಮೆಂಟರಿ ವೀಕ್ಷಣೆಗೆ ಮುಂದಾಗಿದ್ದಾರೆ. ಇದರಿಂದ ಆಡಳಿತ ಮಂಡಳಿ ಪವರ್ ಕಟ್ ಮಾಡಿದೆ. ಇದರಿಂದ ಕುಪಿತಗೊಂಡು ಕಲ್ಲು ತೂರಿ ಗಲಾಟೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಪಿಎಂ ಮೋದಿ ಕುರಿತ ಬಿಬಿಸಿ ವಿಮರ್ಶಾತ್ಮಕ ಸಾಕ್ಷ್ಯಚಿತ್ರ: ಟ್ವಿಟರ್, ಯೂಟ್ಯೂಬ್‌ ಪ್ರಸಾರಕ್ಕೆ ಕೇಂದ್ರ ನಿರ್ಬಂಧ

BBC ಸಾಕ್ಷ್ಯಚಿತ್ರ ಪ್ರದರ್ಶನವನ್ನು JNUSU ನಡೆಸಲು ಸಾಧ್ಯವಾಗಿಲ್ಲದಿದ್ದರಿಂದ ಕಲ್ಲು ತೂರಾಟದ ನಾಟಕ ನಡೆದಿದೆ. ಆದಾಗ್ಯೂ ವಿದ್ಯಾರ್ಥಿಗಳು ತಮ್ಮ ಮೊಬೈಲ್ ಫೋನ್‌ಗಳಲ್ಲಿ ಸಾಕ್ಷ್ಯಚಿತ್ರವನ್ನು ವೀಕ್ಷಿಸಿದ್ದಾರೆ ಎಂದು ಅಖಿಲ ಭಾರತ ವಿದ್ಯಾರ್ಥಿ ಸಂಘದ (ಎಐಎಸ್‌ಎ) ರಾಷ್ಟ್ರೀಯ ಅಧ್ಯಕ್ಷ ಎನ್ ಸಾಯಿ ಬಾಲಾಜಿ ಹೇಳಿದ್ದಾರೆ.

ಕೇಂದ್ರವು ದೇಶದಾದ್ಯಂತ ಸಾಕ್ಷ್ಯಚಿತ್ರವನ್ನು ನಿಷೇಧಿಸಿರುವ ಸಮಯದಲ್ಲಿ ಹೈದ್ರಾಬಾದ್ ವಿವಿ ಕ್ಯಾಂಪಸ್ ನಲ್ಲಿ ಇಂದು(ಜನವರಿ 24) ಸಾಕ್ಷ್ಯಚಿತ್ರ ಪ್ರದರ್ಶಿಸಲಾಗಿದೆ. ಇದರ ಬೆನ್ನಲ್ಲೇ ಇಂದು (ಮಂಗಳವಾರ) ರಾತ್ರಿ ತನ್ನ ಕಚೇರಿಯಲ್ಲಿ ಸಾಕ್ಷ್ಯಚಿತ್ರ ಪ್ರದರ್ಶಿಸುವುದಾಗಿ ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆ (ಜೆಎನ್ ಯುಎಸ್ ಯು) ತಿಳಿಸಿತ್ತು. ಈ ಸಂಬಂಧ ಸೋಮವಾರ ಭಿತ್ತಿಪತ್ರ ಹಂಚಲಾಗಿತ್ತು. ಅದರಂತೆ ರಾತ್ರಿ JNUನಲ್ಲಿ ಪ್ರಧಾನಿ ಮೋದಿ ಸಾಕ್ಷ್ಯಚಿತ್ರ ಪ್ರದರ್ಶನ ಮಾಡಲಾಗಿದ್ದು, ವೀಕ್ಷಣೆ ಮಾಡುತ್ತಿದ್ದವರ ಮೇಲೆ ಗುಂಪೊಂದು ಕಲ್ಲು ತೂರಿದೆ ಎನ್ನಲಾಗಿದೆ.

ಇದನ್ನೂ ಓದಿ: ಪಿಎಂ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ವಸ್ತುನಿಷ್ಠತೆಯ ಕೊರತೆ, ವಸಾಹತುಶಾಹಿ ಮನಸ್ಥಿತಿಯಿಂದ ಕೂಡಿದೆ: ಭಾರತ

ಈಗಾಗಲೇ ತೀವ್ರ ವಿವಾದಕ್ಕೀಡಾರುವ BBCಯ “India: The Modi Question” ಸಾಕ್ಷ್ಯಚಿತ್ರ ಪ್ರಸಾರವನ್ನು ಕೇಂದ್ರ ಸರ್ಕಾರ ಯೂಟ್ಯೂಬ್ ಮತ್ತು ಟ್ವಿಟರ್‌ನಲ್ಲಿ ನಿರ್ಬಂಧಿಸಿದೆ. ಇದಕ್ಕೆ ಸಂಬಂಧಿಸಿದಂತೆ ಭಾರತದ ನಾಯಕರು ಮತ್ತು ಸಮಾಜದ ಒಂದು ವರ್ಗದಿಂದ ವಿರೋಧ ಕೂಡ ವ್ಯಕ್ತವಾಗುತ್ತಿದೆ. ಅದಾಗ್ಯೂ ಈ ವಿವಾದಿತ ಸಾಕ್ಷ್ಯಚಿತ್ರ ಇನ್ನೂ ಅನೇಕ ಡಾರ್ಕ್ ವೆಬ್‌ಸೈಟ್‌ಗಳಲ್ಲಿ ಇದು ಅಸ್ತಿತ್ವದಲ್ಲಿದ್ದು, ಪ್ರೇಕ್ಷಕರಿಗೆ ದೊರೆಯುತ್ತಿದೆ ಎನ್ನಲಾಗಿದೆ.

Published On - 11:39 pm, Tue, 24 January 23

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ