AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಹಂಗೀರ್​ಪುರಿ ಹಿಂಸಾಚಾರ ಪ್ರಕರಣ; ಆರೋಪಿಯೊಬ್ಬನನ್ನು ಬಂಧಿಸಲು ಹೋದ ಪೊಲೀಸರ ಮೇಲೆ ಕಲ್ಲು ಎಸೆದ ಕುಟುಂಬದವರು

ಇಂದು ದೆಹಲಿ ಪೊಲೀಸ್​ ಆಯುಕ್ತ ರಾಕೇಶ್ ಅಸ್ತಾನಾ ಪ್ರತಿಕ್ರಿಯೆ ನೀಡಿ, ಅಪರಾಧದಲ್ಲಿ ಪಾಲ್ಗೊಂಡ ಎಲ್ಲರನ್ನೂ ಹುಡುಕಿ, ಬಂಧಿಸುತ್ತೇವೆ. ಬಂಧಿತರಾದ 21ಕ್ಕೂ ಹೆಚ್ಚು ಜನರಲ್ಲಿ ಹಿಂದು-ಮುಸ್ಲಿಂ ಎರಡೂ ಸಮುದಾಯದವರೂ ಇದ್ದಾರೆ ಎಂದು ತಿಳಿಸಿದ್ದಾರೆ.

ಜಹಂಗೀರ್​ಪುರಿ ಹಿಂಸಾಚಾರ ಪ್ರಕರಣ; ಆರೋಪಿಯೊಬ್ಬನನ್ನು ಬಂಧಿಸಲು ಹೋದ ಪೊಲೀಸರ ಮೇಲೆ ಕಲ್ಲು ಎಸೆದ ಕುಟುಂಬದವರು
ಜಹಂಗೀರ್​ಪುರಿ ಹಿಂಸಾಚಾರ ನಡೆದ ಸ್ಥಳ
TV9 Web
| Updated By: Lakshmi Hegde|

Updated on: Apr 18, 2022 | 4:44 PM

Share

ದೆಹಲಿಯ  ಜಹಂಗೀರ್​ಪುರಿಯಲ್ಲಿ ಶನಿವಾರ ಹನುಮ ಜಯಂತಿ ಮೆರವಣಿಗೆಯ ವೇಳೆ ಕೋಮು ಸಂಘರ್ಷ ಉಂಟಾಗಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದುವರೆಗೆ 21 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೂ ಕೆಲವರು ತಪ್ಪಿಸಿಕೊಂಡಿದ್ದಾರೆ ಎಂದು ಹೇಳಲಾಗಿದ್ದು, ಪೊಲೀಸರು ಅವರಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಹೀಗೆ ಪರಾರಿಯಾದವರನ್ನು ಪತ್ತೆ ಹಚ್ಚುವ ಸಲುವಾಗಿ ಅವರ ಸಂಬಂಧಿಗಳು, ಕುಟುಂಬದವರನ್ನು ವಿಚಾರಣೆಗೆ ಒಳಪಡಿಸುವ ಕೆಲಸವನ್ನು ಪೊಲೀಸರು ನಡೆಸುತ್ತಿದ್ದಾರೆ.  ಹಾಗೇ, ಇಂದು ಪೊಲೀಸರ ತಂಡ ಘಟನೆ ನಡೆದ ಸ್ಥಳಗಳಿಗೆ ಭೇಟಿ ಕೊಟ್ಟಿತ್ತು. ಆದರೆ ಅವರ ಮೇಲೆ ಕಲ್ಲು ತೂರಾಟವಾಗಿದೆ.

ಇಂದು ಪೊಲೀಸರ ತಂಡ ಸೋನು ಚಿಕ್ನಾ ಎಂಬ ಆರೋಪಿಯನ್ನು ಹುಡುಕಿಕೊಂಡು ಘಟನೆ ನಡೆದ ಸ್ಥಳಕ್ಕೆ ಹೋಗಿತ್ತು. ಶನಿವಾರ ನಡೆದ ಸಂಘರ್ಷದ ವೇಳೆ ಈತ ಗುಂಡು ಹಾರಿಸಿದ್ದ ದೃಶ್ಯ ಎಲ್ಲೆಡೆ ವೈರಲ್​ ಆಗಿರುವ ಬೆನ್ನಲ್ಲೇ, ಅವನನ್ನು ಪತ್ತೆ ಹಚ್ಚಿ, ಬಂಧಿಸಲು ಹೋಗಿದ್ದರು. ಅಲ್ಲಿ ಹಿಂಸಾಚಾರ ನಡೆದಾಗಿನಿಂದಲೂ ಸೋನು ಚಿಕ್ನಾ ಕಾಣೆಯಾಗಿದ್ದಾನೆ. ಈತನನ್ನು ಹುಡುಕಲು ಮುಂದಾದ ಪೊಲೀಸರು ಸೀದಾ ಮನೆಯ ಬಳಿ ಹೋಗಿದ್ದಾರೆ. ಸೋನು ಕುಟುಂಬದವರನ್ನು ವಿಚಾರಣೆಗೆ ಒಳಪಡಿಸಲು ಅಲ್ಲಿಗೆ ಹೋದಾಗ ಪೊಲೀಸರ ಮೇಲೆ ದಾಳಿಯಾಗಿದೆ. ಸೋನು ಕುಟುಂಬ ಮತ್ತು ಪಕ್ಕದ ಮನೆಯವರೇ ಪೊಲೀಸ್​ ಸಿಬ್ಬಂದಿ ಮೇಲೆ ಕಲ್ಲು ಎಸೆದಿದ್ದಾರೆ. ಈ ಹಿಂಸಾಚಾರ ಉಲ್ಬಣಗೊಳ್ಳಲು ಶುರುವಾಗುತ್ತಿದ್ದಂತೆ, ಆರ್​ಎಫ್​ ಸಿಬ್ಬಂದಿ ಕಾರ್ಯಪ್ರವೃತ್ತರಾದರು. ನಂತರ ಪೊಲೀಸರು ಸೋನು ಸೋದರನನ್ನೊಬ್ಬನ್ನು ವಶಕ್ಕೆ ಪಡೆದಿದ್ದಾರೆ.

ಇಂದು ದೆಹಲಿ ಪೊಲೀಸ್​ ಆಯುಕ್ತ ರಾಕೇಶ್ ಅಸ್ತಾನಾ ಪ್ರತಿಕ್ರಿಯೆ ನೀಡಿ, ಅಪರಾಧದಲ್ಲಿ ಪಾಲ್ಗೊಂಡ ಎಲ್ಲರನ್ನೂ ಹುಡುಕಿ, ಬಂಧಿಸುತ್ತೇವೆ. ಬಂಧಿತರಾದ 21ಕ್ಕೂ ಹೆಚ್ಚು ಜನರಲ್ಲಿ ಹಿಂದು-ಮುಸ್ಲಿಂ ಎರಡೂ ಸಮುದಾಯದವರೂ ಇದ್ದಾರೆ. ಅವರು ಯಾವುದೇ ಧರ್ಮಕ್ಕೆ ಸೇರಿರಲಿ ಆರೋಪ ಸಾಬೀತಾಗಿದ್ದೇ ಆದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: IPL 2022: ಓಡಿ ಬಂದು ಕ್ಯಾಚ್ ಹಿಡಿಯದೇ ನಿಂತ ಶಿವಂ ದುಬೆ: ಅನುಮಾನ ವ್ಯಕ್ತಪಡಿಸಿದ ಅಭಿಮಾನಿಗಳು

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?