AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಂ ಭದ್ರತಾ ಲೋಪ: ನಡೆಸಲಾಗುತ್ತಿರುವ ತನಿಖೆಗಳನ್ನು ತಕ್ಷಣವೇ ನಿಲ್ಲಿಸುವಂತೆ ಸುಪ್ರೀಂಕೋರ್ಟ್​ ಆದೇಶ, ಕೇಂದ್ರದ ವಿರುದ್ಧ ಅಸಮಾಧಾನ

ಪ್ರಧಾನಿ ಭದ್ರತೆ ಲೋಪಕ್ಕೆ ಸಂಬಂಧಪಟ್ಟಂತೆ ನೀವೇನು ಅಂದುಕೊಂಡಿದ್ದೀರೋ ಅದೇ ಅಭಿಪ್ರಾಯವನ್ನು ನ್ಯಾಯಾಲಯಕ್ಕೆ ಕೊಡಲು ಪ್ರಯತ್ನಿಸುತ್ತಿದ್ದೀರಿ. ಅಂದ ಮೇಲೆ ಇಲ್ಯಾಕೆ ಬಂದಿರಿ ಎಂದು ನ್ಯಾ.ಹಿಮಾ ಕೊಹ್ಲಿ ಕೇಂದ್ರವನ್ನು ತರಾಟೆಗೆ ತೆಗದುಕೊಂಡಿದ್ದಾರೆ.

ಪಿಎಂ ಭದ್ರತಾ ಲೋಪ: ನಡೆಸಲಾಗುತ್ತಿರುವ ತನಿಖೆಗಳನ್ನು ತಕ್ಷಣವೇ ನಿಲ್ಲಿಸುವಂತೆ ಸುಪ್ರೀಂಕೋರ್ಟ್​ ಆದೇಶ, ಕೇಂದ್ರದ ವಿರುದ್ಧ ಅಸಮಾಧಾನ
ಸುಪ್ರೀಂಕೋರ್ಟ್​
TV9 Web
| Edited By: |

Updated on:Jan 10, 2022 | 12:51 PM

Share

ಪಂಜಾಬ್​ನಲ್ಲಿ ಪ್ರಧಾನಮಂತ್ರಿ ಭದ್ರತೆಯಲ್ಲಿ ಲೋಪವುಂಟಾದ (PM Security Breach in Punjab) ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯ ನಡೆಯುತ್ತಿರುವ ಎಲ್ಲ ರೀತಿಯ ತನಿಖೆಯನ್ನೂ ತಕ್ಷಣವೇ ನಿಲ್ಲಿಸಿ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್​.ವಿ.ರಮಣ (Supreme Court CJI N.V.Ramana) ಆದೇಶಿಸಿದ್ದಾರೆ. ಇಂದು ಸಿಜೆಐ ನೇತೃತ್ವದ ಪೀಠ ಅರ್ಜಿ ವಿಚಾರಣೆ ನಡೆಸಿತ್ತು. ನಂತರ ತೀರ್ಪು ಪ್ರಕಟಿಸಿದ ಎನ್​.ವಿ.ರಮಣ, ಪಂಜಾಬ್​ನಲ್ಲಾದ ಭದ್ರತಾ ಲೋಪದ ಬಗ್ಗೆ ತನಿಖೆ ನಡೆಸಲು ನಾವು ಸುಪ್ರೀಂಕೋರ್ಟ್​ ನಿವೃತ್ತ ನ್ಯಾಯಾಧೀಶರ ನೇತೃತ್ವದ ನಾಲ್ವರ ಸಮಿತಿ ರಚಿಸುತ್ತಿದ್ದೇವೆ. ಈ ಸಮಿತಿಯಲ್ಲಿ ಚಂಡಿಗಢ್​ ಡಿಜಿಪಿ, ರಾಷ್ಟ್ರೀಯ ತನಿಖಾ ದಳ (NIA)ದ ಐಜಿ, ಹೈಕೋರ್ಟ್​​ನ ರಿಜಿಸ್ಟ್ರಾರ್​ ಜನರಲ್​ ಮತ್ತು ಪಂಜಾಬ್​​ನ ಹೆಚ್ಚುವರಿ ಡಿಜಿ ಇರಲಿದ್ದಾರೆ. ಈ ನಾಲ್ವರ ಸಮಿತಿ ತನಿಖೆ ನಡೆಸಿ ನಮಗೆ ವರದಿ ಕೊಡಲಿದೆ ಎಂದು ತಿಳಿಸಿದ್ದಾರೆ. 

ಇಂದು ಸುಪ್ರೀಂಕೋರ್ಟ್​ ಲಾಯರ್ಸ್​ ವೈಸ್​ ಎಂಬ ಎನ್​ಜಿಒ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡಿತ್ತು. ಇಂದಿನ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದೆ. ಪಸ್ತುತ ಕೇಸ್​​ನ ವಿಚಾರಣೆ ಸುಪ್ರೀಂಕೋರ್ಟ್​​ನಲ್ಲಿ ನಡೆಯುತ್ತಿರುವಾಗ, ಅದು ಹೇಗೆ ನೀವು ಪಂಜಾಬ್​ ಸರ್ಕಾರದ ಅಧಿಕಾರಿಗಳಿಗೆ ಶೋಕಾಸ್​ ನೋಟಿಸ್​ ಕೊಟ್ಟಿರಿ ಎಂದು ಅಸಮಾಧಾನದಿಂದ ಪ್ರಶ್ನಿಸಿದೆ.  ಪ್ರಧಾನಿ ಭದ್ರತೆ ಲೋಪಕ್ಕೆ ಸಂಬಂಧಪಟ್ಟಂತೆ ನೀವೇನು ಅಂದುಕೊಂಡಿದ್ದೀರೋ ಅದೇ ಅಭಿಪ್ರಾಯವನ್ನು ನ್ಯಾಯಾಲಯಕ್ಕೆ ಕೊಡಲು ಪ್ರಯತ್ನಿಸುತ್ತಿದ್ದೀರಿ. ನೀವು ಹೇಳಿದ್ದೇ ಅಂತಿಮ ಅಂದಮೇಲೆ ಕೋರ್ಟ್​ಗ್ಯಾಕೆ ಬಂದಿರಿ ಎಂದು ನ್ಯಾಯಾಧೀಶರಾದ ಹಿಮಾ ಕೊಹ್ಲಿ ಖಾರವಾಗಿಯೇ ಕೇಂದ್ರಕ್ಕೆ ಪ್ರಶ್ನಿಸಿದ್ದಾರೆ.  ಹಾಗೇ, ಪೀಠದಲ್ಲಿದ್ದ ಇನ್ನೊಬ್ಬ ನ್ಯಾಯಮೂರ್ತಿ ಸೂರ್ಯಕಾಂತ್​, ನೀವು ಪಂಜಾಬ್​ ಸರ್ಕಾರಕ್ಕೆ ಕಳಿಸಿದ ಶೋಕಾಸ್ ನೋಟಿಸ್​ನಲ್ಲಿ ವ್ಯತಿರಿಕ್ತ ಅಂಶಗಳಿವೆ. ಅದರಲ್ಲಿ, ಲೋಪದ ಬಗ್ಗೆ ತನಿಖೆ ನಡೆಸಲು ನೀವು ತನಿಖಾ ಸಮಿತಿ ರಚಿಸುತ್ತಿರುವುದಾಗಿ ಒಂದೆಡೆ ಹೇಳುತ್ತೀರಿ, ಇನ್ನೊಂದೆಡೆ ಪಂಜಾಬ್​ ಸರ್ಕಾರದ್ದೇ ತಪ್ಪು ಎನ್ನುತ್ತೀರಿ. ನೀವು ವಿಚಾರಣೆ ಯಾವಾಗ ನಡೆಸಿದಿರಿ? ತಪ್ಪಿತಸ್ಥರು ಯಾರು? ಎಂದು ಪ್ರಶ್ನಿಸಿದ್ದಾರೆ.

ಇದೇ ವೇಳೆ ಕೋರ್ಟ್​ಗೆ ಪ್ರತಿಕ್ರಿಯೆ ನೀಡಿದ ಕೇಂದ್ರ ಸರ್ಕಾರ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಪ್ರಧಾನಿಯವರು ಪಂಜಾಬ್​ಗೆ ಭೇಟಿ ನೀಡಿದಾಗ ಉಂಟಾದ ಭದ್ರತಾ ಲೋಪಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸಮಿತಿಯೇ ಪರಿಶೀಲಿಸಿ ಕೋರ್ಟ್​ಗೆ ವರದಿ ಸಲ್ಲಿಸಬಹುದು ಎಂದು ಹೇಳಿದರು. ಆದರೆ ಕೇಂದ್ರದ ತನಿಖೆ ಬಗ್ಗೆ ಪಂಜಾಬ್​ ಸರ್ಕಾರವನ್ನು ಪ್ರತಿನಿಧಿಸಿದ ಅಡ್ವೋಕೇಟ್​ ಜನರಲ್ಲಿ ಅನುಮಾನ ವ್ಯಕ್ತಪಡಿಸಿ, ಸ್ವತಂತ್ರ ತನಿಖೆ ನಡೆಯಬೇಕು ಎಂದು ಮನವಿ ಮಾಡಿದ್ದರು. ಒಟ್ಟಾರೆ ವಾದ-ಪ್ರತಿವಾದವನ್ನು ಆಲಿಸಿದ ಸಿಜೆಐ ಎನ್​.ವಿ.ರಮಣ, ನಾವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಯಾರೂ ಅಂದುಕೊಳ್ಳಬೇಕಾಗಿಲ್ಲ. ಪ್ರಸ್ತುತ ಕೇಸ್​​ನ್ನು ಇನ್ನಷ್ಟು ಸಂಕೀರ್ಣಗೊಳಿಸುವುದಿಲ್ಲ. ನಾವು ನಾಲ್ಕು ಸದಸ್ಯರನ್ನು ಒಳಗೊಂಡ ಸಮಿತಿ ರಚಿಸುತ್ತೇವೆ. ಹೀಗಾಗಿ ಸದ್ಯ ನಡೆಸಲಾಗುತ್ತಿರುವ ಎಲ್ಲ ರೀತಿಯ ತನಿಖೆಗಳನ್ನೂ ಇಲ್ಲಿಗೇ ನಿಲ್ಲಿಸಬೇಕು ಎಂದು ಹೇಳಿದರು.

ಇದನ್ನೂ ಓದಿ: ಪಂಜಾಬ್​​ನಲ್ಲಿ ಪ್ರಧಾನಿ ಮೋದಿ ಭದ್ರತೆ ಲೋಪ: ಇಂದು ಸಿಜೆಐ ಎನ್​ವಿ ರಮಣ ನೇತೃತ್ವದ ಪೀಠದಿಂದ ಅರ್ಜಿ ವಿಚಾರಣೆ

Published On - 12:25 pm, Mon, 10 January 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?