AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಚ್ಚರ ಎಚ್ಚರ!! ಸಾರ್ವಜನಿಕ ಸ್ಥಳಗಳಲ್ಲಿ ನಿಮ್ಮ ಮೊಬೈಲ್​, ಲ್ಯಾಪ್​ಟಾಪ್​​ ಚಾರ್ಜ್​​ ಇಟ್ಟರೇ ನಿಮ್ಮ ಖಾತೆಯಿಂದ ಹಣ ಮಾಯ

ಸಾರ್ವಜನಿಕ ಸ್ಥಳಗಳಲ್ಲಿ ಮೊಬೈಲ್​, ಲ್ಯಾಪ್​ಟಾಪ್​, ಡೆಸ್ಕ್​ಟಾಪ್​ಗಳನ್ನು ಚಾರ್ಜ್​ ಇಡುವ ಮುಖಾಂತರವು ನೀವು ಸೈಬರ್​ ವಂಚಕರಿಗೆ ಆಹುತಿಯಾಗಬಹುದು.

ಎಚ್ಚರ ಎಚ್ಚರ!! ಸಾರ್ವಜನಿಕ ಸ್ಥಳಗಳಲ್ಲಿ ನಿಮ್ಮ ಮೊಬೈಲ್​, ಲ್ಯಾಪ್​ಟಾಪ್​​ ಚಾರ್ಜ್​​ ಇಟ್ಟರೇ ನಿಮ್ಮ ಖಾತೆಯಿಂದ ಹಣ ಮಾಯ
ಪ್ರಾತಿನಿಧಿಕ ಚಿತ್ರ
TV9 Web
| Updated By: ವಿವೇಕ ಬಿರಾದಾರ|

Updated on:Sep 25, 2022 | 9:50 PM

Share

ಇತ್ತೀಚಿಗೆ ಸೈಬರ್​ ಕ್ರೈಂಗಳ ಪ್ರಕರಣಗಳು ಬಹಳಷ್ಟು ದಾಖಲಾಗುತ್ತಿವೆ. ಸಾಕಷ್ಟು ಜನರು ಸೈಬರ್​ ಕ್ರೈಂ ಮುಖಾಂತರ ಹಣವನ್ನು ಕಳೆದುಕೊಂಡು ನೊಂದಿದ್ದಾರೆ. ಇಷ್ಟು ದಿನಗಳ ಕಾಲ ಮೆಸೇಜ್​ ಕಳುಹಿಸುವ ಮೂಲಕ, ಕರೆ ಮಾಡುವ ಮೂಲಕ ಅಥವಾ ಬ್ಲ್ಯಾಕ್ ​ಮೇಲ್ ಮಾಡುವ ಮುಖಾಂತರ​ ನಿಮ್ಮ ಬ್ಯಾಂಕ್​ ಖಾತೆಯ ಮಾಹಿತಿ ಪಡೆದು ನಿಮ್ಮ ಹಣವನ್ನು ಎಗರಿಸುತ್ತಿದ್ದರು.

ಆದರೆ ಇತ್ತೀಚಿಗೆ ಹೊಸ ಪ್ರಕರಣಗಳು ದಾಖಲಾಗಿವೆ. ಅದೇನೆಂದರೆ ಸಾರ್ವಜನಿಕ ಸ್ಥಳಗಳಲ್ಲಿ ಮೊಬೈಲ್​, ಲ್ಯಾಪ್​ಟಾಪ್​, ಡೆಸ್ಕ್​ಟಾಪ್​ಗಳನ್ನು ಚಾರ್ಜ್​ ಇಡುವ ಮುಖಾಂತರವು ನೀವು ಸೈಬರ್​ ವಂಚಕರಿಗೆ ಆಹುತಿಯಾಗಬಹುದು. ನೀವು ವಿಮಾನ ನಿಲ್ದಾಣಗಳು, ಬಸ್ ನಿಲ್ದಾಣಗಳು, ಮೆಟ್ರೋ ರೈಲುಗಳು ಮತ್ತು ಇತರ ಸ್ಥಳಗಳಲ್ಲಿ ಚಾರ್ಜಿಂಗ್ ಪಾಯಿಂಟ್‌ಗಳು ಅಥವಾ USB ಪೋರ್ಟ್‌ಗಳನ್ನು ನೀವು ನೋಡಿರಲೂಬಹುದು ಮತ್ತು ಬಳಸಿರಬಹುದು.

ಆದರೆ ಇನ್ನೂಮುಂದೆ ಅವುಗಳನ್ನು ಬಳಸಬೇಡಿ ಎಂದು ಸೈಬರ್​ ಕ್ರೈಂ ಪೊಲೀಸರು ಹೇಳಿದ್ದಾರೆ. ಏಕೆಂದರೆ ಸಾರ್ವಜನಿಕ ಸ್ಥಳಗಳಲ್ಲಿ ಚಾರ್ಜಿಂಗ್​ ಹಾಕುವ ಮುಖಾಂತರ ನಿಮ್ಮ ಮೊಬೈಲ್​, ಲ್ಯಾಪ್​ಟಾಪ್​ನಲ್ಲಿರುವ ಮಾಹಿತಿಯನ್ನು ಪಡೆದು ಹಣವನ್ನು ದೋಚುತ್ತಿರುವ ಪ್ರಕರಣಗಳು ವರದಿಯಾಗಿವೆ.

ಹೈದರಾಬಾದ್‌ನ ಕಂಪನಿಯೊಂದರ ಸಿಇಒ ಒಬ್ಬರು ಸಾರ್ವಜನಿಕ ಸ್ಥಳದಲ್ಲಿ ಯುಎಸ್‌ಬಿ ಪೋರ್ಟ್ ಮೂಲಕ ತಮ್ಮ ಮೊಬೈಲ್​ನ್ನು ಚಾರ್ಜ್ ಮಾಡುತ್ತಿದ್ದರು. ತಮ್ಮ ಮೊಬೈಲ್​ ಚಾರ್ಜ್​ವಾದ ಬಳಿಕ ಅವರ ಬ್ಯಾಂಕ್​ ಖಾತೆಯಿಂದ 16 ಲಕ್ಷ ರೂಪಾಯಿ ಹಣ ಡ್ರಾ ಆಗಿರುವ ಮೆಸೆಜ್​ ಬಂದಿದೆ.

ನವದೆಹಲಿಯಲ್ಲೂ ಇದೇ ರೀತಿಯಾದ ಮೊತ್ತೊಂದು ಪ್ರಕರಣ ದಾಖಲಾಗಿದೆ. ನವದೆಹಲಿಯಲ್ಲಿ ಮಹಿಳೆಯೊಬ್ಬರು ದೆಹಲಿ ವಿಮಾನ ನಿಲ್ದಾಣದಲ್ಲಿ ಫೋನ್​ ಚಾರ್ಚ್​ ಕಡಿಮೆಯಾಗಿದೆ. ಆಗ ಏರ್‌ಪೋರ್ಟ್‌ನಲ್ಲಿರುವ ಯುಎಸ್‌ಬಿ ಚಾರ್ಜಿಂಗ್ ಸ್ಟೇಷನ್‌ನಲ್ಲಿ ಫೋನ್​ನ್ನು ಚಾರ್ಜಿಂಗ್ ಮಾಡಲು ಇರಿಸಿದ್ದಾರೆ. ಕೆಲವು ಗಂಟೆಗಳ ನಂತರ ಅವರ ಮೊಬೈಲ್‌ಗೆ ಸಂದೇಶ ಬಂದಿದ್ದು, ಅದರಲ್ಲಿ ಆಕೆಯ ಬ್ಯಾಂಕ್ ಖಾತೆಯಿಂದ 1 ಲಕ್ಷದ 20 ಸಾವಿರ ರೂ ಡೆಬಿಟ್​ ಆಗಿದೆ ಎಂದು ಇಂಡಿಯಾ ಡಾಟ್​ ಕಾಮ್​ ವರದಿ ಮಾಡಿದೆ.

ಮೊಬೈಲ್ ಚಾರ್ಜಿಂಗ್ ಸ್ಟೇಷನ್, ಯುಎಸ್‌ಬಿ ಪವರ್ ಸ್ಟೇಷನ್ ಮುಂತಾದ ಸಾರ್ವಜನಿಕ ಸ್ಥಳಗಳಲ್ಲಿ ನಿಮ್ಮ ಮೊಬೈಲ್‌ಗಳನ್ನು ಚಾರ್ಜ್ ಮಾಡಬೇಡಿ. ಸೈಬರ್ ವಂಚಕರು ಮೊಬೈಲ್‌ನಿಂದ ನಿಮ್ಮ ವೈಯಕ್ತಿಕ ಮಾಹಿತಿಯನ್ನು ಕದಿಯುವ ಸಾಧ್ಯತೆ ಇದೆ ಎಂದು ಸೆಪ್ಟೆಂಬರ್ 15 ರಂದು ಒಡಿಶಾ ಪೊಲೀಸರು ಟ್ವೀಟ್​ ಮಾಡಿದ್ದಾರೆ.

Published On - 9:50 pm, Sun, 25 September 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್