AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Narendra Modi: ರೇವಡಿ ಸಂಸ್ಕೃತಿ ದೇಶದ ಅಭಿವೃದ್ಧಿಗೆ ಅಪಾಯಕಾರಿ; ಬುಂದೇಲ್​ಖಂಡ್ ಎಕ್ಸ್​ಪ್ರೆಸ್​ವೇಗೆ ಮೋದಿ ಚಾಲನೆ

ರೇವಡಿ ಸಂಸ್ಕೃತಿಯನ್ನು ಹೊಂದಿರುವವರು ನಿಮಗಾಗಿ ಹೊಸ ಎಕ್ಸ್‌ಪ್ರೆಸ್‌ವೇಗಳನ್ನು, ಹೊಸ ವಿಮಾನ ನಿಲ್ದಾಣಗಳನ್ನು ಅಥವಾ ರಕ್ಷಣಾ ಕಾರಿಡಾರ್‌ಗಳನ್ನು ಎಂದಿಗೂ ನಿರ್ಮಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಲೇವಡಿ ಮಾಡಿದ್ದಾರೆ.

PM Narendra Modi: ರೇವಡಿ ಸಂಸ್ಕೃತಿ ದೇಶದ ಅಭಿವೃದ್ಧಿಗೆ ಅಪಾಯಕಾರಿ; ಬುಂದೇಲ್​ಖಂಡ್ ಎಕ್ಸ್​ಪ್ರೆಸ್​ವೇಗೆ ಮೋದಿ ಚಾಲನೆ
ಬುಂದೇಲ್​ಖಂಡ್ ಎಕ್ಸ್​ಪ್ರೆಸ್​ವೇಗೆ ಮೋದಿ ಚಾಲನೆ
TV9 Web
| Updated By: ಡಾ. ಭಾಸ್ಕರ ಹೆಗಡೆ|

Updated on:Jul 16, 2022 | 3:44 PM

Share

ಲಕ್ನೋ: ದೇಶದಲ್ಲಿ ಉಚಿತ ರೇವಡಿ ಹಂಚುವ ಮೂಲಕ ಮತ ಸಂಗ್ರಹಿಸುವ ಸಂಸ್ಕೃತಿ ತರಲು ಪ್ರಯತ್ನಿಸಲಾಗುತ್ತಿದೆ. ಈ ರೇವಡಿ ಸಂಸ್ಕೃತಿ ದೇಶದ ಅಭಿವೃದ್ಧಿಗೆ ಅತ್ಯಂತ ಅಪಾಯಕಾರಿ. ಈ ರೇವಡಿ ಸಂಸ್ಕೃತಿಯ ಬಗ್ಗೆ ದೇಶದ ಜನರು ಬಹಳ ಜಾಗರೂಕರಾಗಿರಬೇಕು. ನಾವೆಲ್ಲರೂ ಒಟ್ಟಾಗಿ ದೇಶದ ರಾಜಕೀಯದಿಂದ ರೇವಡಿ ಸಂಸ್ಕೃತಿಯನ್ನು ತೊಡೆದುಹಾಕಬೇಕು. ರೇವಡಿ ಸಂಸ್ಕೃತಿಯನ್ನು ಹೊಂದಿರುವವರು ನಿಮಗಾಗಿ ಹೊಸ ಎಕ್ಸ್‌ಪ್ರೆಸ್‌ವೇಗಳನ್ನು, ಹೊಸ ವಿಮಾನ ನಿಲ್ದಾಣಗಳನ್ನು ಅಥವಾ ರಕ್ಷಣಾ ಕಾರಿಡಾರ್‌ಗಳನ್ನು ಎಂದಿಗೂ ನಿರ್ಮಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಲೇವಡಿ ಮಾಡಿದ್ದಾರೆ.

ರೇವಡಿ ಒಂದು ಸಿಹಿತಿಂಡಿ. ಪ್ರಾಯಶಃ ಹರ್ಯಾಣಾದ ರೇವರಿಯಲ್ಲಿ ಈ ಸಿಹಿತಿಂಡಿ ಹುಟ್ಟಿದ್ದರಿಂದ ಇದಕ್ಕೆ ರೇವಡಿ ಎಂದು ಕರೆಯುತ್ತಾರೆ ಎನ್ನುವ ನಂಬುಗೆ ಇದೆ. ಆದರೆ ಪ್ರಧಾನಿ ಇಂದು ಭಾಷಣ ಮಾಡುವಾಗ ಬಳಸಿದ ರೇವಡಿ ಹಂಚುವಿಕೆ ಅರ್ಥವೇ ಬೇರೆ ಇದೆ. ರೇವಡಿ ಹಂಚೋದು ಎಂದರೆ, ಸಿಹಿಮಾತಾಡಿ ಜನರ ಹಾದಿ ತಪ್ಪಿಸುವುದು ಎಂದರ್ಥ.

ಉತ್ತರ ಪ್ರದೇಶದ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇಯನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಿದ್ದಾರೆ. ಉತ್ತರ ಪ್ರದೇಶದ ಜಲೌನ್​ನಲ್ಲಿ​​14,850 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ 296.07 ಕಿ.ಮೀ. ಉದ್ದದ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇಯನ್ನು ಇಂದು ಮೋದಿ ಉದ್ಘಾಟಿಸಿದ್ದಾರೆ. ಈ ಎಕ್ಸ್‌ಪ್ರೆಸ್‌ವೇ 7 ಜಿಲ್ಲೆಗಳ ಮೂಲಕ ಹಾದು ಹೋಗುತ್ತದೆ. ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಗೆ ಸಂಪರ್ಕ ಕಲ್ಪಿಸುತ್ತದೆ. ಈ ವೇಳೆ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಉತ್ತರ ಪ್ರದೇಶದಲ್ಲಿ ಮೂಲಭೂತ ಸೌಕರ್ಯದ ಕೆಲಸವನ್ನು ಎಷ್ಟು ಗಂಭೀರವಾಗಿ ಮತ್ತು ವೇಗವಾಗಿ ಮಾಡಲಾಗುತ್ತಿದೆ ಎಂದರೆ ಉತ್ತಮ ಪ್ರದೇಶ ಈಗ, ಈ ವಿಷಯದಲ್ಲಿ ಸಾಧನೆ ಮಾಡಿದ್ದ ಇತರೆ ಉತ್ತಮ ರಾಜ್ಯಗಳನ್ನು ಕೂಡ ಮೀರಿಸಿದೆ. ದೇಶದಾದ್ಯಂತ ಉತ್ತರ ಪ್ರದೇಶದ ಗುರುತು ಬದಲಾಗುತ್ತಿದೆ ಎಂದು ಬಣ್ಣಿಸಿದ್ದಾರೆ.

ಇದನ್ನೂ ಓದಿ: Bundelkhand Expressway: ಉತ್ತರಪ್ರದೇಶದಲ್ಲಿ ಪ್ರಧಾನಿ ಮೋದಿಯಿಂದ ಇಂದು ಬುಂದೇಲ್​ಖಂಡ್​ ಎಕ್ಸ್​ಪ್ರೆಸ್​ ವೇ ಉದ್ಘಾಟನೆ

ದೇಶಕ್ಕೆ ಹಾನಿ ಮಾಡುವ, ದೇಶದ ಅಭಿವೃದ್ಧಿಯ ಮೇಲೆ ಪರಿಣಾಮ ಬೀರುವ ಎಲ್ಲವನ್ನೂ ನಾವು ದೂರವಿಡಬೇಕು. ಉತ್ತರ ಪ್ರದೇಶ ಅಸಂಖ್ಯಾತ ಯೋಧರನ್ನು ಹುಟ್ಟುಹಾಕಿದ ಭೂಮಿ. ಈ ನಾಡಿನವರ ರಕ್ತದಲ್ಲಿ ಭಕ್ತಿ ಹರಿಯುತ್ತಿದೆ. ಇಂದು ಬುಂದೇಲ್‌ಖಂಡ್ ಭೂಮಿಗೆ ಎಕ್ಸ್‌ಪ್ರೆಸ್‌ವೇಯ ಉಡುಗೊರೆಯನ್ನು ನೀಡಲು ನನಗೆ ಬಹಳ ಸಂತೋಷವಾಗುತ್ತಿದೆ. ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ಮೂಲಕ ಚಿತ್ರಕೂಟದಿಂದ ದೆಹಲಿಗೆ 3-4 ಗಂಟೆಗಳಷ್ಟು ಪ್ರಯಾಣದ ಅವಧಿಯನ್ನು ಕಡಿಮೆ ಮಾಡಲಾಗಿದೆ ಎಂದಿದ್ದಾರೆ.

ಈ ಎಕ್ಸ್‌ಪ್ರೆಸ್‌ವೇ ಇಲ್ಲಿನ ವಾಹನಗಳಿಗೆ ವೇಗವನ್ನು ನೀಡುವುದಲ್ಲದೆ, ಇಡೀ ಬುಂದೇಲ್‌ಖಂಡದ ಕೈಗಾರಿಕಾ ಪ್ರಗತಿಯನ್ನು ವೇಗಗೊಳಿಸುತ್ತದೆ. ಉತ್ತರ ಪ್ರದೇಶದಲ್ಲಿ ಸರಯೂ ಕಾಲುವೆ ಯೋಜನೆ ಪೂರ್ಣಗೊಳ್ಳಲು 40 ವರ್ಷ ಬೇಕಾಯಿತು. ಉತ್ತರ ಪ್ರದೇಶದಲ್ಲಿ 30 ವರ್ಷಗಳ ಕಾಲ ಗೋರಖ್‌ಪುರ ರಸಗೊಬ್ಬರ ಘಟಕವನ್ನು ಮುಚ್ಚಲಾಗಿತ್ತು. ಅರ್ಜುನ್ ಅಣೆಕಟ್ಟು ಯೋಜನೆ ಪೂರ್ಣಗೊಳಿಸಲು 12 ವರ್ಷ ಬೇಕಾಯಿತು. ಆದರೆ, ಈಗ ಉತ್ತರ ಪ್ರದೇಶ ಅಭಿವೃದ್ಧಿಯ ವಿಷಯದಲ್ಲಿ ಬಹಳ ಮುಂಚೂಣಿಯಲ್ಲಿದೆ ಎಂದು ಮೋದಿ ಹೇಳಿದ್ದಾರೆ.

ಚಿತ್ರಕೂಟವನ್ನು ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇಗೆ ಸಂಪರ್ಕಿಸುವ ನಾಲ್ಕು-ಪಥದ ಎಕ್ಸ್‌ಪ್ರೆಸ್‌ವೇಗೆ 2020ರ ಫೆಬ್ರವರಿಯಲ್ಲಿ ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸಿದ್ದರು. 28 ತಿಂಗಳಲ್ಲಿ ಪೂರ್ಣಗೊಂಡಿರುವ ಈ ಯೋಜನೆಯು ಇಂದು ಲೋಕಾರ್ಪಣೆಯಾಗಿದೆ. ಸುಮಾರು 14,850 ಕೋಟಿ ರೂ. ವೆಚ್ಚದಲ್ಲಿ 296 ಕಿ.ಮೀ ಚತುಷ್ಪಥ ಎಕ್ಸ್ ಪ್ರೆಸ್ ವೇ ನಿರ್ಮಿಸಲಾಗಿದೆ. ಈ ಎಕ್ಸ್‌ಪ್ರೆಸ್‌ವೇ ಈ ಪ್ರದೇಶದಲ್ಲಿ ಸಂಪರ್ಕ ಮತ್ತು ಕೈಗಾರಿಕಾ ಅಭಿವೃದ್ಧಿಗೆ ಪ್ರಮುಖ ಉತ್ತೇಜನವನ್ನು ನೀಡುತ್ತದೆ.

Published On - 1:30 pm, Sat, 16 July 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ