ರಷ್ಯಾದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ಪ್ರಯಾಣಿಕರಿಗೆ ಸೌಕರ್ಯಗಳ ಕೊರತೆ: ಒಂದೇ ಕೋಣೆಯಲ್ಲಿ 20 ಮಂದಿ; ಆಹಾರ,ಶೌಚಕ್ಕೂ ಸಮಸ್ಯೆ

230 ಕ್ಕೂ ಹೆಚ್ಚು ಜನರಿದ್ದಾರೆ. ಸಾಕಷ್ಟು ಮಕ್ಕಳು ಮತ್ತು ವೃದ್ಧರು. ನಮ್ಮ ಬ್ಯಾಗ್‌ಗಳು ಇನ್ನೂ ವಿಮಾನದಲ್ಲಿವೆ. ನಮ್ಮನ್ನು ಬಸ್‌ಗಳಲ್ಲಿ ಬೇರೆ ಬೇರೆ ಸ್ಥಳಗಳಿಗೆ ಕಳುಹಿಸಲಾಗಿದೆ. ಕೆಲವರನ್ನು ಶಾಲೆಗೆ ಕಳುಹಿಸಲಾಗಿದೆ. ಅಲ್ಲಿ ಅವರು ನೆಲದ ಮೇಲೆ ಹಾಸಿಗೆಗಳನ್ನು ಹಾಕಿ ಮಲಗಿದ್ದಾರೆ.

ರಷ್ಯಾದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ಪ್ರಯಾಣಿಕರಿಗೆ ಸೌಕರ್ಯಗಳ ಕೊರತೆ: ಒಂದೇ ಕೋಣೆಯಲ್ಲಿ 20 ಮಂದಿ; ಆಹಾರ,ಶೌಚಕ್ಕೂ ಸಮಸ್ಯೆ
ರಷ್ಯಾದಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರು
Follow us
|

Updated on:Jun 07, 2023 | 3:40 PM

ದೆಹಲಿ: ರಷ್ಯಾದ (Russia) ಮಗದನ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ (Air India) ವಿಮಾನದಲ್ಲಿ ಮಕ್ಕಳು ಮತ್ತು ವೃದ್ಧರು ಸೇರಿದಂತೆ ಹಲವು ಪ್ರಯಾಣಿಕರು ಭಾಷೆಯ ಸಮಸ್ಯೆ ಎದುರಿಸುತ್ತಿದ್ದು ಪರಿಚಯವಿಲ್ಲದ ಊರಲ್ಲಿ ಆಹಾರ, ಉಳಿದುಕೊಳ್ಳಲು ಸರಿಯಾದ ಜಾಗವಿಲ್ಲದೆ ಸಂಕಷ್ಟಕ್ಕೀಡಾಗಿದ್ದಾರೆ ಎಂದು ಎನ್​​ಡಿಟಿವಿ ವರದಿ ಮಾಡಿದೆ. ಏರ್ ಇಂಡಿಯಾ ಫ್ಲೈಟ್, ಬೋಯಿಂಗ್ 777 (Boeing 777), ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ 216 ಪ್ರಯಾಣಿಕರು ಮತ್ತು 16 ಸಿಬ್ಬಂದಿಗಳೊಂದಿಗೆ ಪ್ರಯಾಣಿಸುತ್ತಿದ್ದಾಗ ಅದರ ಇಂಜಿನ್ ಒಂದರಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ತಕ್ಷಣವೇ ರಷ್ಯಾದ ಮಗದನ್‌ಗೆ ತಿರುಗಿಸಲಾಗಿತ್ತು. ರಷ್ಯಾದಲ್ಲಿ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ ಎಂದು ಏರ್ ಇಂಡಿಯಾ ಅಧಿಕಾರಿಗಳು ತಿಳಿಸಿದ್ದಾರೆ. ಜತೆಗೆ ತಾಂತ್ರಿಕ ದೋಷವನ್ನು ಸರಿಪಡಿಸಲಾಗುತ್ತಿದೆ ಎಂದು ಹೇಳಿದ್ದರು. ಇದೀಗ ರಷ್ಯಾದಲ್ಲಿ ಸಿಲುಕಿಕೊಂಡಿರುವ ಭಾರತೀಯ ಪ್ರಯಾಣಿಕರನ್ನು ಬುಧವಾರ ಮುಂಬೈನಿಂದ ಮೀಸಲು ವಿಮಾನವೊಂದು ಕರೆತರಲಿದೆ ಎಂದು ಏರ್ ಇಂಡಿಯಾ ಇಂದು (ಜೂ. 7) ತಿಳಿಸಿದೆ.

ರಷ್ಯಾದಿಂದ ಎನ್‌ಡಿಟಿವಿಯೊಂದಿಗೆ ದೂರವಾಣಿ ಮೂಲಕ ಮಾತನಾಡಿದ ವಿಮಾನದಲ್ಲಿದ್ದ ಪ್ರಯಾಣಿಕ ಗಗನ್, ಪರಿಸ್ಥಿತಿಯನ್ನು ಸವಾಲಿನದ್ದು ಎಂದು ಅಲ್ಲಿನ ಸೌಲಭ್ಯಗಳ ಕೊರತೆಯನ್ನು ವಿವರಿಸಿದ್ದಾರೆ.

230 ಕ್ಕೂ ಹೆಚ್ಚು ಜನರಿದ್ದಾರೆ. ಸಾಕಷ್ಟು ಮಕ್ಕಳು ಮತ್ತು ವೃದ್ಧರು. ನಮ್ಮ ಬ್ಯಾಗ್‌ಗಳು ಇನ್ನೂ ವಿಮಾನದಲ್ಲಿವೆ. ನಮ್ಮನ್ನು ಬಸ್‌ಗಳಲ್ಲಿ ಬೇರೆ ಬೇರೆ ಸ್ಥಳಗಳಿಗೆ ಕಳುಹಿಸಲಾಗಿದೆ. ಕೆಲವರನ್ನು ಶಾಲೆಗೆ ಕಳುಹಿಸಲಾಗಿದೆ. ಅಲ್ಲಿ ಅವರು ನೆಲದ ಮೇಲೆ ಹಾಸಿಗೆಗಳನ್ನು ಹಾಕಿ ಮಲಗಿದ್ದಾರೆ. ಶೌಚಾಲಯ ಸೌಲಭ್ಯಗಳು ಸರಿ ಇಲ್ಲ. ಎಲ್ಲದಕ್ಕೂ ಭಾಷಾ ಸಮಸ್ಯೆ ಇದೆ. ಇಲ್ಲಿ ಆಹಾರವು ತುಂಬಾ ಭಿನ್ನವಾಗಿದೆ. ಇಲ್ಲಿರುವ ಸಮುದ್ರಾಹಾರ (ಸೀಫುಡ್) ಮತ್ತು ಮಾಂಸಾಹಾರ ಕೆಲವರು ಬ್ರೆಡ್ ಮತ್ತು ಸೂಪ್ ಅನ್ನು ತಿನ್ನುತ್ತಾರೆ. ಅವರು (ರಷ್ಯಾದ ಅಧಿಕಾರಿಗಳು) ಒಳ್ಳೆಯವರಾಗಿದ್ದಾರೆ. ನಾವು ಕಾಲೇಜು ವಸತಿ ನಿಲಯದಲ್ಲಿರುವುದರಿಂದ ನಾವು ಅದೃಷ್ಟಶಾಲಿಗಳು. ನಾವು ಸುಮಾರು ಒಂದು ಗಂಟೆಯ ಹಿಂದೆ ವೈ-ಫೈ ಪಡೆದುಕೊಂಡಿದ್ದೇವೆ. ಆದ್ದರಿಂದ ನಾವು ನಮ್ಮ ಕುಟುಂಬಗಳೊಂದಿಗೆ ಸಂಪರ್ಕದಲ್ಲಿರಲು ಸಾಧ್ಯವಾಯಿತು ಎಂದು ಗಗನ್ ಹೇಳಿದ್ದಾರೆ.

ಕೆಲವು ಪ್ರಯಾಣಿಕರು ಅಲ್ಲೊಂದು ಶಾಲೆಯಲ್ಲಿದ್ದಾರೆ. ಅವರು ತರಗತಿಯ ಬೆಂಚುಗಳನ್ನು ಸರಿಸಿ ಅಲ್ಲೇ ಮಲಗಿದ್ದಾ ಒಂದು ಕೋಣೆಯಲ್ಲಿ ಸುಮಾರು 20 ಜನರಿದ್ದಾರೆ. ಅವರಿಗೆ ಸರಿಯಾದ ಆಹಾರ ವ್ಯವಸ್ಥೆ ಆಗಲಿಲ್ಲ ಎಂದು ಕೇಳ್ಪಟ್ಟೆ. ಅವರಿಗೆ ಕೋಕ್ ಮತ್ತು ಬ್ರೆಡ್ ನೀಡಲಾಗಿತು,. ಫ್ಲೈಟ್‌ನಲ್ಲಿ ನನ್ನ ಪಕ್ಕದಲ್ಲಿ 88 ವರ್ಷದ ವ್ಯಕ್ತಿಯೊಬ್ಬರು ಇದ್ದರು. ಅವರಂತಹ ಜನರು ಹೇಗೆ ಇದ್ದಾರೋ ಎಂಬುದು ನನಗೆ ಗೊತ್ತಿಲ್ಲ. ಇಬ್ಬರುಪುಟ್ಟ ಮಕ್ಕಳೊಂದಿಗೆ ಮಹಿಳೆಯೊಬ್ಬರು ಇದ್ದಾರೆ. ಅವರು ನಿಜವಾಗಿಯೂ ಕಷ್ಟಪಡುತ್ತಿದ್ದಾರೆ. ಇಲ್ಲಿರುವುದುದು ಮಾಂಸಾಹಾರ. ಇಲ್ಲಿರುವ ಅಧಿಕಾರಿಗಳು ಒಳ್ಳೆಯವರು, ಆದರೆ ಭಾಷೆಯ ಸಮಸ್ಯೆ ಇದೆ. ನಮಗೆ ಹೊರಗೆ ಹೋಗಲು ಅನುಮತಿ ಇಲ್ಲ. ನಾವು ಇಂದು ಈ ಹೊತ್ತಿಗೆ ವಿಮಾನದಲ್ಲಿ ಹೋಗುತ್ತೇವೆ ಎಂದು ನಮಗೆ ತಿಳಿಸಲಾಯಿತು ಎಂದು ಗಗನ್ ಹೇಳಿದ್ದಾರೆ.

ಇದನ್ನೂ ಓದಿ: Air India: ಸ್ಯಾನ್ ಫ್ರಾನ್ಸಿಸ್ಕೋಗೆ ಬದಲು ರಷ್ಯಾದಲ್ಲಿ ಇಳಿದ ವಿಮಾನ, ಭಾರತೀಯ ಪ್ರಯಾಣಿಕರಿಗಾಗಿ ವಿಶೇಷ ವಿಮಾನ ವ್ಯವಸ್ಥೆ

ಸಿಲುಕಿಕೊಂಡಿರು ಪ್ರಯಾಣಿಕರನ್ನು ಮಗದನ್‌ನಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ಸಾಗಿಸಲು ಮುಂಬೈನಿಂದ ಬದಲಿ ವಿಮಾನವನ್ನು ಕಳುಹಿಸಲಾಗುವುದು ಎಂದು ಏರ್ ಇಂಡಿಯಾ ಬುಧವಾರ ಹೇಳಿದೆ. ವಿಮಾನಯಾನ ಸಂಸ್ಥೆಯು ಪ್ರಯಾಣಿಕರಿಗೆ ಅಗತ್ಯವಿರುವ ಎಲ್ಲಾ ಬೆಂಬಲವನ್ನು ಒದಗಿಸುತ್ತಿದೆ. ಸ್ಥಳೀಯ ಹಾಸ್ಟೆಲ್‌ಗಳು ಮತ್ತು ಹೋಟೆಲ್‌ಗಳಲ್ಲಿ ಅವರಿಗೆ ವಸತಿ ಕಲ್ಪಿಸಲಾಗಿದೆ ಎಂದು ಭರವಸೆ ನೀಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:38 pm, Wed, 7 June 23

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್