AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದಲ್ಲಿ 2 ಗಂಟೆಯೊಳಗೆ 40 ಜನರಿಗೆ ಕಚ್ಚಿದ ಬೀದಿನಾಯಿ; ಆಸ್ಪತ್ರೆ ವಾರ್ಡ್​ಗಳು ಫುಲ್!

ಬೀದಿ ನಾಯಿಯಿಂದ ಕಡಿತಕ್ಕೊಳಗಾದ ಜನರು ಸಮೀಪದ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಇದರಿಂದ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗವು ಜನರಿಂದ ತುಂಬಿ ತುಳುಕುತ್ತಿದ್ದು, ವಾರ್ಡ್​ಗಳು ಫುಲ್ ಆಗಿವೆ.

ರಾಜಸ್ಥಾನದಲ್ಲಿ 2 ಗಂಟೆಯೊಳಗೆ 40 ಜನರಿಗೆ ಕಚ್ಚಿದ ಬೀದಿನಾಯಿ; ಆಸ್ಪತ್ರೆ ವಾರ್ಡ್​ಗಳು ಫುಲ್!
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Dec 30, 2022 | 3:49 PM

ಬಾರ್ಮರ್: ರಾಜಸ್ಥಾನದ (Rajasthan) ಬಾರ್ಮರ್‌ನಲ್ಲಿ ಬೀದಿ ನಾಯಿಯೊಂದು ಕೇವಲ 2 ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ್ದು, ಇದು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಬೀದಿ ನಾಯಿಯಿಂದ (Stray Dog) ಕಡಿತಕ್ಕೊಳಗಾದ ಜನರು ಸಮೀಪದ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಇದರಿಂದ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗವು ಜನರಿಂದ ತುಂಬಿ ತುಳುಕುತ್ತಿದ್ದು, ವಾರ್ಡ್​ಗಳು ಫುಲ್ ಆಗಿವೆ. ನಾಯಿ ಕಚ್ಚಿ 40 ಜನರಿಗೆ ಗಾಯಗಳಾಗಿದ್ದು, ಬಾರ್ಮರ್ (Barmer) ಜಿಲ್ಲೆಯ ಕಲ್ಯಾಣಪುರ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ಕರೆತರುತ್ತಿದ್ದಂತೆ ಆಸ್ಪತ್ರೆಯ ಆಡಳಿತ ಮಂಡಳಿಯೂ ತಬ್ಬಿಬ್ಬಾಯಿತು. ಕೂಡಲೇ ನಗರಸಭೆಗೆ ಮಾಹಿತಿ ನೀಡಲಾಗಿದ್ದು, ಬೀದಿ ನಾಯಿಯನ್ನು ಹಿಡಿಯಲು 2 ತಂಡಗಳನ್ನು ರಚಿಸಲಾಯಿತು. ಕೊನೆಗೆ ಆಸ್ಪತ್ರೆಯ ಸಿಬ್ಬಂದಿಯ ನೆರವಿನಿಂದ ಬೀದಿ ನಾಯಿಯನ್ನು ಹಿಡಿಯಲಾಯಿತು.

ಇದನ್ನೂ ಓದಿ: Street Dog Attack: 8 ವರ್ಷದ ಬಾಲಕಿ ಹಾಗೂ ತಂದೆ ಮೇಲೆ ಬೀದಿ ನಾಯಿ ದಾಳಿ, ಬಾಲಕಿ ಮುಖ ಮತ್ತು ಕುತ್ತಿಗೆ ಭಾಗಕ್ಕೆ ಹೊಲಿಗೆ

ಇದೀಗ ಬಾರ್ಮರ್ ನಗರದ ವಿವಿಧ ಪ್ರದೇಶಗಳಿಂದ ಬೀದಿ ನಾಯಿಗಳನ್ನು ಹಿಡಿಯಲು ನಗರಸಭೆ ಮುಂದಾಗಿದೆ. ಹಠಾತ್ ಬೀದಿನಾಯಿ ಕಡಿತದಿಂದ ಗಾಯಗೊಂಡ ಅನೇಕ ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಬಿ.ಎಲ್. ಮನ್ಸೂರಿಯಾ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ