AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದಲ್ಲಿ 2 ಗಂಟೆಯೊಳಗೆ 40 ಜನರಿಗೆ ಕಚ್ಚಿದ ಬೀದಿನಾಯಿ; ಆಸ್ಪತ್ರೆ ವಾರ್ಡ್​ಗಳು ಫುಲ್!

ಬೀದಿ ನಾಯಿಯಿಂದ ಕಡಿತಕ್ಕೊಳಗಾದ ಜನರು ಸಮೀಪದ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಇದರಿಂದ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗವು ಜನರಿಂದ ತುಂಬಿ ತುಳುಕುತ್ತಿದ್ದು, ವಾರ್ಡ್​ಗಳು ಫುಲ್ ಆಗಿವೆ.

ರಾಜಸ್ಥಾನದಲ್ಲಿ 2 ಗಂಟೆಯೊಳಗೆ 40 ಜನರಿಗೆ ಕಚ್ಚಿದ ಬೀದಿನಾಯಿ; ಆಸ್ಪತ್ರೆ ವಾರ್ಡ್​ಗಳು ಫುಲ್!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 30, 2022 | 3:49 PM

Share

ಬಾರ್ಮರ್: ರಾಜಸ್ಥಾನದ (Rajasthan) ಬಾರ್ಮರ್‌ನಲ್ಲಿ ಬೀದಿ ನಾಯಿಯೊಂದು ಕೇವಲ 2 ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ್ದು, ಇದು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಬೀದಿ ನಾಯಿಯಿಂದ (Stray Dog) ಕಡಿತಕ್ಕೊಳಗಾದ ಜನರು ಸಮೀಪದ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಇದರಿಂದ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗವು ಜನರಿಂದ ತುಂಬಿ ತುಳುಕುತ್ತಿದ್ದು, ವಾರ್ಡ್​ಗಳು ಫುಲ್ ಆಗಿವೆ. ನಾಯಿ ಕಚ್ಚಿ 40 ಜನರಿಗೆ ಗಾಯಗಳಾಗಿದ್ದು, ಬಾರ್ಮರ್ (Barmer) ಜಿಲ್ಲೆಯ ಕಲ್ಯಾಣಪುರ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ಕರೆತರುತ್ತಿದ್ದಂತೆ ಆಸ್ಪತ್ರೆಯ ಆಡಳಿತ ಮಂಡಳಿಯೂ ತಬ್ಬಿಬ್ಬಾಯಿತು. ಕೂಡಲೇ ನಗರಸಭೆಗೆ ಮಾಹಿತಿ ನೀಡಲಾಗಿದ್ದು, ಬೀದಿ ನಾಯಿಯನ್ನು ಹಿಡಿಯಲು 2 ತಂಡಗಳನ್ನು ರಚಿಸಲಾಯಿತು. ಕೊನೆಗೆ ಆಸ್ಪತ್ರೆಯ ಸಿಬ್ಬಂದಿಯ ನೆರವಿನಿಂದ ಬೀದಿ ನಾಯಿಯನ್ನು ಹಿಡಿಯಲಾಯಿತು.

ಇದನ್ನೂ ಓದಿ: Street Dog Attack: 8 ವರ್ಷದ ಬಾಲಕಿ ಹಾಗೂ ತಂದೆ ಮೇಲೆ ಬೀದಿ ನಾಯಿ ದಾಳಿ, ಬಾಲಕಿ ಮುಖ ಮತ್ತು ಕುತ್ತಿಗೆ ಭಾಗಕ್ಕೆ ಹೊಲಿಗೆ

ಇದೀಗ ಬಾರ್ಮರ್ ನಗರದ ವಿವಿಧ ಪ್ರದೇಶಗಳಿಂದ ಬೀದಿ ನಾಯಿಗಳನ್ನು ಹಿಡಿಯಲು ನಗರಸಭೆ ಮುಂದಾಗಿದೆ. ಹಠಾತ್ ಬೀದಿನಾಯಿ ಕಡಿತದಿಂದ ಗಾಯಗೊಂಡ ಅನೇಕ ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಬಿ.ಎಲ್. ಮನ್ಸೂರಿಯಾ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ