AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಷಕಾರಿ ಹಾವಿನಿಂದ 30 ಮಕ್ಕಳನ್ನು ಕಾಪಾಡಿ ಪ್ರಾಣ ಬಿಟ್ಟ ಬೀದಿ ನಾಯಿ ಕಾಳಿ!

ಒಡಿಶಾದಲ್ಲಿ ಹಾವಿನ ದಾಳಿಯಿಂದ 30 ವಿದ್ಯಾರ್ಥಿಗಳನ್ನು ರಕ್ಷಿಸಲು 'ಕಾಳಿ' ಎಂಬ ಬೀದಿ ನಾಯಿ ತನ್ನ ಪ್ರಾಣವನ್ನೇ ತ್ಯಾಗ ಮಾಡಿದೆ. ಒಡಿಶಾದ ಮಯೂರ್ಭಂಜ್ ಜಿಲ್ಲೆಯಲ್ಲಿ ಹಾವಿನ ದಾಳಿಯಿಂದ 30 ಶಾಲಾ ವಿದ್ಯಾರ್ಥಿಗಳ ಜೀವವನ್ನು ಉಳಿಸಿದ ನಂತರ 'ಕಾಳಿ' ಎಂದು ಕರೆಯಲ್ಪಡುವ ಬೀದಿ ನಾಯಿ ಹೀರೋ ಎನಿಸಿಕೊಂಡಿದೆ. ವಿಷಪೂರಿತ ಹಾವು ಅವರ ಬಳಿಗೆ ಬರುತ್ತಿದ್ದಂತೆ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕುಳಿತಿದ್ದ ಜಾಗಕ್ಕೆ ಬರುತ್ತಿತ್ತು. ಆಗ ನಾಯಿ ಆ ಹಾವಿನೊಂದಿಗೆ ಸೆಣಸಾಡಿತ್ತು.

ವಿಷಕಾರಿ ಹಾವಿನಿಂದ 30 ಮಕ್ಕಳನ್ನು ಕಾಪಾಡಿ ಪ್ರಾಣ ಬಿಟ್ಟ ಬೀದಿ ನಾಯಿ ಕಾಳಿ!
Stray Dog And SnakeImage Credit source: AI
ಸುಷ್ಮಾ ಚಕ್ರೆ
|

Updated on: Apr 25, 2026 | 5:39 PM

Share

ಒಡಿಶಾ, ಏಪ್ರಿಲ್ 25: ವಿಷಕಾರಿ ಹಾವಿನಿಂದ 30 ಮಕ್ಕಳನ್ನು ರಕ್ಷಿಸಿದ ನಂತರ ಒಡಿಶಾದಲ್ಲಿ ಬೀದಿ ನಾಯಿ ವೀರಮರಣವನ್ನಪ್ಪಿದೆ. ಒಡಿಶಾದ ಹಳ್ಳಿಯೊಂದರಲ್ಲಿ ವಿಷಕಾರಿ ಹಾವಿನಿಂದ 30ಕ್ಕೂ ಹೆಚ್ಚು ಚಿಕ್ಕ ಮಕ್ಕಳನ್ನು ರಕ್ಷಿಸಿದ ನಂತರ ಬೀದಿ ನಾಯಿ (Stray Dog) ಸಾವನ್ನಪ್ಪಿದೆ. ಇದು ಸ್ಥಳೀಯ ನಿವಾಸಿಗಳಲ್ಲಿ ಭಾರೀ ದುಃಖವನ್ನು ಉಂಟುಮಾಡಿದೆ. ತಮ್ಮ ಮಕ್ಕಳನ್ನು ಕಾಪಾಡಲು ಪ್ರಾಣ ಬಿಟ್ಟ ಕಾಳಿ ಎಂಬ ಬೀದಿ ನಾಯಿಯ ಶವವನ್ನು ಮೆರವಣಿಗೆ ಮಾಡಿ ಊರಿನವರೆಲ್ಲರೂ ಸೇರಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಈ ಮೂಲಕ ಅವರು ಆ ಬೀದಿನಾಯಿಗೆ ಗೌರವ ಸಲ್ಲಿಸಿದ್ದಾರೆ.

ಆ ಏರಿಯಾದವರಿಂದ ಕಾಳಿ ಎಂದು ಕರೆಯಲ್ಪಡುತ್ತಿದ್ದ ಬೀದಿನಾಯಿ ಒಡಿಶಾದ ಮಯೂರ್ಭಂಜ್ ಜಿಲ್ಲೆಯ ಧೀರಕುಲ ಗ್ರಾಮದಲ್ಲಿ ಬಹಳ ಜನಪ್ರಿಯವಾಗಿತ್ತು. ಸೋಮವಾರ ಬೆಳಿಗ್ಗೆ ಸುಮಾರು ಎಂಟೂವರೆ ಗಂಟೆಗೆ ಹತ್ತಿರದ ಪ್ರಾಥಮಿಕ ಶಾಲೆಯಾದ ಶ್ರೀ ಜಗನ್ನಾಥ ಶಿಶು ವಿದ್ಯಾ ಮಂದಿರದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ಶಾಲಾ ಆವರಣದ ಹೊರಗೆ ಕುಳಿತಿದ್ದಾಗ ವಿಷಕಾರಿ ಹಾವು ಅವರ ಕಡೆಗೆ ಬರುತ್ತಿತ್ತು. ಇದನ್ನು ನೋಡಿದ ಕಾಳಿ ನಾಯಿ ಆ ಹಾವನ್ನು ಕಚ್ಚಿ ಕೊಂದಿತು. ಹಾವು ಕಚ್ಚಿದರೂ ಹೆದರದ ಕಾಳಿ ಹಿಂಜರಿಕೆಯಿಲ್ಲದೆ ಆ ಹಾವಿನೊಂದಿಗೆ ಹೋರಾಡಿತು.

ಇದನ್ನೂ ಓದಿ: ಬೀದಿ ನಾಯಿ ಪರಚಿದ್ದಕ್ಕೆ ಲಸಿಕೆ ಪಡೆಯಲು ಭಯಪಟ್ಟ ಬಾಲಕಿ, ರೇಬಿಸ್​ನಿಂದ ಸಾವು

ಹಾವು ಮತ್ತು ನಾಯಿಯ ಜಗಳವನ್ನು ನೋಡುತ್ತಾ ಭಯಗೊಂಡಿದ್ದ ಆ 30 ಮಕ್ಕಳ ಬಳಿ ಹಾವಿಗೆ ಹೋಗಲು ಅವಕಾಶ ನೀಡದ ಆ ನಾಯಿ ತನ್ನ ಪ್ರಾಣವನ್ನೇ ಒತ್ತೆಯಿಟ್ಟು ಮಕ್ಕಳನ್ನು ಕಾಪಾಡಿತು. ಈ ಜಗಳದ ವೇಳೆ ವಿಷಕಾರಿ ಹಾವು ಕಾಳಿಯ ಬಾಯಿಗೆ ಕಚ್ಚಿತು. ಈ ವಿಷದಿಂದ ನಾಯಿ ಸಾವನ್ನಪ್ಪಿತು. ಕಾಳಿಯ ಸಾವಿನ ಸುದ್ದಿ ಹಳ್ಳಿಯಾದ್ಯಂತ ಹರಡಿದಾಗ ಊರಿನ ನಿವಾಸಿಗಳು ದುಃಖಿತರಾದರು. ಆ ನಾಯಿಗೆ ಗೌರವ ಸಲ್ಲಿಸಲು ನಾಯಿಯ ಅಂತ್ಯಕ್ರಿಯೆಯ ಮೆರವಣಿಗೆಯನ್ನು ಆಯೋಜಿಸಿದರು. ನಾಯಿಯ ದೇಹವನ್ನು ಟ್ರಾಲಿಯ ಮೇಲೆ ಇರಿಸಿ, ಹೂವುಗಳಿಂದ ಅಲಂಕರಿಸಿ, ಬಿಳಿ ಬಟ್ಟೆಯಲ್ಲಿ ಸುತ್ತಿ, ಪೂರ್ಣ ವಿಧಿವಿಧಾನಗಳೊಂದಿಗೆ ಸಮಾಧಿ ಮಾಡಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಉಕ್ರೇನ್ ಮೇಲೆ ಮತ್ತೆ ರಷ್ಯಾದಿಂದ ಡ್ರೋನ್ ದಾಳಿ; ನಾಲ್ವರು ಸಾವು
ಉಕ್ರೇನ್ ಮೇಲೆ ಮತ್ತೆ ರಷ್ಯಾದಿಂದ ಡ್ರೋನ್ ದಾಳಿ; ನಾಲ್ವರು ಸಾವು
3 ತಿಂಗಳ ಕಂದನನ್ನ ತನ್ನದೇ ಮಗು ಎಂಬಂತೆ ಅಪ್ಪಿಕೊಂಡು ಮುದ್ದಾಡಿದ ಮಂಗ
3 ತಿಂಗಳ ಕಂದನನ್ನ ತನ್ನದೇ ಮಗು ಎಂಬಂತೆ ಅಪ್ಪಿಕೊಂಡು ಮುದ್ದಾಡಿದ ಮಂಗ
ಪಂದ್ಯ ಶ್ರೇಷ್ಠ ಕಿಂಗ್ ಕೊಹ್ಲಿಗೆ ಟಿವಿ, ಮೊಬೈಲ್ ಗಿಫ್ಟ್
ಪಂದ್ಯ ಶ್ರೇಷ್ಠ ಕಿಂಗ್ ಕೊಹ್ಲಿಗೆ ಟಿವಿ, ಮೊಬೈಲ್ ಗಿಫ್ಟ್
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಎಸೆದರು: ವಿದ್ಯಾರ್ಥಿ ಗಂಭೀರ ಆರೋಪ
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಎಸೆದರು: ವಿದ್ಯಾರ್ಥಿ ಗಂಭೀರ ಆರೋಪ
ತೆಲಂಗಾಣದಲ್ಲಿ ತಂದೆ ಮಗಳ ರಾಜಕೀಯ ಜಿದ್ದು: ಹೊಸ ಪಕ್ಷ ಘೋಷಿಸಿದ ಕವಿತಾ!
ತೆಲಂಗಾಣದಲ್ಲಿ ತಂದೆ ಮಗಳ ರಾಜಕೀಯ ಜಿದ್ದು: ಹೊಸ ಪಕ್ಷ ಘೋಷಿಸಿದ ಕವಿತಾ!
ಕಲಬುರಗಿ ಜಿಲ್ಲೆ ಡಿಸಿ ಕಚೇರಿಯಲ್ಲೇ ಇಲ್ಲ ಕುಡಿಯುವ ನೀರು
ಕಲಬುರಗಿ ಜಿಲ್ಲೆ ಡಿಸಿ ಕಚೇರಿಯಲ್ಲೇ ಇಲ್ಲ ಕುಡಿಯುವ ನೀರು
ವಿನಯ್ ಕುಲಕರ್ಣಿ ಬೆಂಬಲಕ್ಕೆ ನಿಂತ ಅಭಿಮಾನಿಗಳು!
ವಿನಯ್ ಕುಲಕರ್ಣಿ ಬೆಂಬಲಕ್ಕೆ ನಿಂತ ಅಭಿಮಾನಿಗಳು!
ರಣವೀರ್ ಸಿಂಗ್ ದೈವಕ್ಕೆ ಅವಮಾನ ಮಾಡಿದ ಪ್ರಕರಣ ಇತ್ಯರ್ಥ; ಷರತ್ತುಗಳೇನು?
ರಣವೀರ್ ಸಿಂಗ್ ದೈವಕ್ಕೆ ಅವಮಾನ ಮಾಡಿದ ಪ್ರಕರಣ ಇತ್ಯರ್ಥ; ಷರತ್ತುಗಳೇನು?
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಹಾಕಿದ್ರು: ಅಳಲು ತೋಡಿಕೊಂಡ ವಿದ್ಯಾರ್ಥಿ
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಹಾಕಿದ್ರು: ಅಳಲು ತೋಡಿಕೊಂಡ ವಿದ್ಯಾರ್ಥಿ
ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ!
ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ!