AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಡಿಸಲಿಗೆ ನುಗ್ಗಿ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ವೃದ್ಧೆಯ ಕಚ್ಚಿ ಕೊಂದ ಬೀದಿ ನಾಯಿಗಳು

ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯನ್ನು ಬೀದಿ ನಾಯಿಗಳು ಕೊಂದಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಅವರು ಮಲಗಿದ್ದ ಗುಡಿಸಿಲಿಗೆ ನುಗ್ಗಿದ ನಾಯಿಗಳು ದೇಹದ ಹಲವು ಭಾಗಗಳನ್ನು ಕಚ್ಚಿ ತಿಂದಿವೆ. ಮಹಿಳೆ ಅಲ್ಲೇ ಸಾವನ್ನಪ್ಪಿದ್ದಾರೆ.

ಗುಡಿಸಲಿಗೆ ನುಗ್ಗಿ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ವೃದ್ಧೆಯ ಕಚ್ಚಿ ಕೊಂದ ಬೀದಿ ನಾಯಿಗಳು
ಬೀದಿನಾಯಿಗಳು-ಸಾಂದರ್ಭಿಕ ಚಿತ್ರ
ನಯನಾ ರಾಜೀವ್
|

Updated on: Aug 02, 2024 | 12:05 PM

Share

ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ವೃದ್ಧೆಯನ್ನು ಬೀದಿನಾಯಿಗಳು ಕಚ್ಚಿ ಕೊಂದಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದ ರಾಜಣ್ಣ ಸಿರ್ಸಿಲಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಮುಸ್ತಾಬಾದ್ ಮಂಡಲದ ಕೇಂದ್ರ ಕಛೇರಿಯ ಸೇವಾಲಾಲ್ ತಾಂಡಾ ಪ್ರದೇಶದ ತನ್ನ ಗುಡಿಸಲಿನಲ್ಲಿ ಮಲಗಿದ್ದ ವೃದ್ಧೆಯೊಬ್ಬಳನ್ನು ನಾಯಿಗಳ ಹಿಂಡು ಕಚ್ಚಿಹಾಕಿವೆ. ಅವರು ಗುಡಿಸಲಿನಲ್ಲಿ ಮಲಗಿದ್ದಾಗ ಬೀದಿ ನಾಯಿಗಳು ದಾಳಿ ನಡೆಸಿವೆ, ನಾಯಿಗಳು ಅವರ ದೇಹದ ಭಾಗಗಳನ್ನು ತಿಂದು ಬಳಿಕ ಮನೆಯಿಂದ ಹೊರಗೆ ಬಂದಿವೆ.

ಮಹಿಳೆಯ ಮಗ ನೀಡಿದ ದೂರಿನ ಮೇರೆಗೆ ಪೊಲೀಸರು ಅನುಮಾನಾಸ್ಪದ ಸಾವಿನ ಪ್ರಕರಣವನ್ನು ದಾಖಲಿಸಿದ್ದಾರೆ. ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಅಧಿಕಾರಿಗಳು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಬಾಲಾನಗರದ ರಾಜೀವ್ ಕಾಲೋನಿಯಲ್ಲಿ ಆರು ಮಕ್ಕಳು ಸೇರಿದಂತೆ 16 ಜನರ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿವೆ. ಸಂಜೆ 5 ಗಂಟೆ ಸುಮಾರಿಗೆ ಈ ದಾಳಿ ನಡೆದಿದೆ. ರಾಜೀವ್ ಕಾಲೋನಿಯ ಓಡಿಯಲ್ಲಿ ಬೀದಿನಾಯಿಗಳು ಅಡ್ಡಾಡುತ್ತಿದ್ದವು. ದಾರಿಹೋಕರ ಮೇಲೆ ಏಕಾಏಕಿ ದಾಳಿ ನಡೆಸಲು ಪ್ರಾರಂಭಿಸಿದವು. ಸ್ಥಳೀಯರು ನಾಯಿಯನ್ನು ಓಡಿಸಿದ ಬಳಿಕ ಪರಿಸ್ಥಿತಿ ಹತೋಟಿಗೆ ಬಂದಿದೆ.

ಸಾಕು ನಾಯಿ ಕಡಿತದಿಂದ ತಂದೆ ಮಗ ಸಾವು ಒಂದೆಡೆ ಬೀದಿನಾಯಿಗಳ ಕಾಟವಾದರೆ ಇ್ನೊಂದೆಡೆ ಸಾಕು ನಾಯಿಗಳು ಕೂಡ ಕಚ್ಚಿರುವ ಹಲವು ಘಟನೆಗಳು ಬೆಳಕಿಗೆ ಬಂದಿವೆ. ನಾಯಿ ಕಡಿತದಿಂದ ತಂದೆ ಹಾಗೂ ಮಗ ಸಾವನ್ನಪ್ಪಿರುವ ಘಟನೆ ವಿಶಾಖಪಟ್ಟಣಂನಲ್ಲಿ ನಡೆದಿದೆ.

ಮತ್ತಷ್ಟು ಓದಿ: ಒಂದೇ ದಿನ 8 ಮಕ್ಕಳ ಮೇಲೆ ಬೀದಿ ನಾಯಿ ದಾಳಿ; ಚಿಕಿತ್ಸೆ ಫಲಿಸದೆ 4 ವರ್ಷದ ಬಾಲಕಿ ಸಾವು, ಉಳಿದವರಲ್ಲಿ ಆತಂಕ

ವಿಶಾಖಪಟ್ಟಣಂನ ಭೀಮ್ಲಿ ನಿವಾಸಿಗಳಾದ 59 ವರ್ಷದ ನರಸಿಂಗರಾವ್ ಮತ್ತು ಅವರ 27 ವರ್ಷದ ಮಗ ಭಾರ್ಗವ್​ಗೆ ಒಂದು ವಾರದ ಹಿಂದೆ ಸಾಕು ನಾಯಿ ಕಚ್ಚಿತ್ತು, ಆದರೆ ಅವರು ವೈದ್ಯಕೀಯ ಚಿಕಿತ್ಸೆ ಪಡೆದಿರಲಿಲ್ಲ.

ಘಟನೆ ನಡೆದು ಎರಡು ದಿನಗಳ ಬಳಿ ನಾಯಿ ಸಾವನ್ನಪ್ಪಿದ್ದು ಆಗ ಆ್ಯಂಟಿ ರೇಬಿಸ್​ ಚುಚ್ಚುಮದ್ದು ಪಡೆಯಲು ಆಸ್ಪತ್ರೆಗೆ ಹೋಗಿದ್ದರು, ಅಷ್ಟರಲ್ಲಾಗಲೇ ಕಾಲ ಮಿಂಚಿತ್ತು. ರೇಬಿಸ್ ಅವರ ಮೆದುಳು ಹಾಗೂ ಯಕೃತ್ತಿಗೆ ವ್ಯಾಪಿಸಿತ್ತು, ಚಿಕಿತ್ಸೆ ಒಳಗಾಗಿದ್ದರೂ ಇಬ್ಬರೂ ಮಾರಣಾಂತಿಕ ಸೋಂಕಿಗೆ ಬಲಿಯಾದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ