AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಬಲ್ಪುರದ ಆಸ್ಪತ್ರೆ ಬಳಿ ಮಗುವಿನ ತಲೆಬುರುಡೆ ಜೊತೆ ಆಟವಾಡುತ್ತಿದ್ದ ಬೀದಿ ನಾಯಿಗಳು; ವಿಡಿಯೋ ವೈರಲ್

ಜಬಲ್ಪುರದ ನೇತಾಜಿ ಸುಭಾಷ್ ಚಂದ್ರ ಬೋಸ್ ವೈದ್ಯಕೀಯ ಆಸ್ಪತ್ರೆ ಬಳಿ ಮಗುವಿನ ತಲೆಬುರುಡೆಯೊಂದಿಗೆ ಆಟವಾಡುತ್ತಿದ್ದ ಬೀದಿ ನಾಯಿಗಳ ವಿಡಿಯೋ ವೈರಲ್ ಆಗಿದೆ. ಈ ದೃಶ್ಯ ಎಲ್ಲರಲ್ಲೂ ಆತಂಕ ಮೂಡಿಸಿದ್ದು, ತನಿಖೆಗೆ ಆದೇಶ ನೀಡಲಾಗಿದೆ. ಈ ಘಟನೆಯ ನಂತರ, ವೈದ್ಯಕೀಯ ಕಾಲೇಜಿನ ಡೀನ್ ನವನೀತ್ ಸಕ್ಸೇನಾ ತನಿಖೆಗೆ ಆದೇಶಿಸಿದ್ದಾರೆ. ತಲೆಬುರುಡೆ ಅಲ್ಲಿಗೆ ಹೇಗೆ ಬಂತು, ಅದು ಯಾರಿಗೆ ಸೇರಿದ್ದು ಮತ್ತು ಅದನ್ನು ಆಸ್ಪತ್ರೆಯ ಹಿಂದಿನ ಕೊಳದ ಬಳಿ ಎಸೆಯಲಾಗಿದೆಯೇ ಎಂದು ಅವರು ಪ್ರಶ್ನಿಸಿದ್ದಾರೆ.

ಜಬಲ್ಪುರದ ಆಸ್ಪತ್ರೆ ಬಳಿ ಮಗುವಿನ ತಲೆಬುರುಡೆ ಜೊತೆ ಆಟವಾಡುತ್ತಿದ್ದ ಬೀದಿ ನಾಯಿಗಳು; ವಿಡಿಯೋ ವೈರಲ್
Child Skull
ಸುಷ್ಮಾ ಚಕ್ರೆ
|

Updated on: Jan 30, 2025 | 10:28 PM

Share

ಅಬಲ್ಪುರ್: ಮಧ್ಯಪ್ರದೇಶದ ಜಬಲ್ಪುರದಲ್ಲಿ ಬೀದಿ ನಾಯಿಮರಿಗಳು ಮಗುವಿನ ತಲೆಬುರುಡೆಯೊಂದಿಗೆ ಆಟವಾಡುತ್ತಿರುವ ವಿಡಿಯೋ ಗುರುವಾರ ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಂಡಿದೆ. ಇಲ್ಲಿನ ನೇತಾಜಿ ಸುಭಾಷ್ ಚಂದ್ರ ಬೋಸ್ ವೈದ್ಯಕೀಯ ಆಸ್ಪತ್ರೆಯ ಹಾಸ್ಟೆಲ್ ಬಳಿ ಈ ವಿಡಿಯೋ ಚಿತ್ರೀಕರಿಸಲಾಗಿದೆ. ಈ ವಿಡಿಯೋ ಅಲ್ಪಾವಧಿಯಲ್ಲಿಯೇ ಲಕ್ಷಾಂತರ ವೀಕ್ಷಣೆಗಳನ್ನು ಗಳಿಸಿತು.

ಈ ಘಟನೆಯ ನಂತರ, ವೈದ್ಯಕೀಯ ಕಾಲೇಜಿನ ಡೀನ್ ನವನೀತ್ ಸಕ್ಸೇನಾ ತನಿಖೆಗೆ ಆದೇಶಿಸಿದ್ದಾರೆ. ತಲೆಬುರುಡೆ ಅಲ್ಲಿಗೆ ಹೇಗೆ ಬಂತು, ಅದು ಯಾರಿಗೆ ಸೇರಿದ್ದು ಮತ್ತು ಅದನ್ನು ಹಾಸ್ಟೆಲ್‌ನ ಹಿಂದಿನ ಕೊಳದ ಬಳಿ ಎಸೆಯಲಾಗಿದೆಯೇ ಎಂದು ಅವರು ಪ್ರಶ್ನಿಸಿದ್ದಾರೆ. ಮಾಹಿತಿಯ ಪ್ರಕಾರ, ಇಂದು ಜಬಲ್ಪುರದ ನೇತಾಜಿ ಸುಭಾಷ್ ಚಂದ್ರ ಬೋಸ್ ವೈದ್ಯಕೀಯ ಆಸ್ಪತ್ರೆಯ ಬಳಿ 2 ನಾಯಿಮರಿಗಳು ಮಗುವಿನ ತಲೆಬುರುಡೆಯೊಂದಿಗೆ ಆಟವಾಡುತ್ತಿರುವ ದೃಶ್ಯಗಳು ಅಂತರ್ಜಾಲದಲ್ಲಿ ಕಾಣಿಸಿಕೊಂಡವು.

ಇದನ್ನೂ ಓದಿ: Viral: ಫೋನ್ ತಂದ ಆಪತ್ತು; ಕೀ ಪ್ಯಾಡ್‌ ಮೊಬೈಲ್‌ ನುಂಗಿ ಪ್ರಾಣ ಕಳೆದುಕೊಂಡ ಮಹಿಳೆ

ಈ ವೀಡಿಯೊದಲ್ಲಿ ಎರಡು ನಾಯಿಮರಿಗಳಲ್ಲಿ ಒಂದು ತಲೆಬುರುಡೆಯನ್ನು ಎತ್ತಿಕೊಂಡು ಓಡಿಹೋಗಿರುವುದನ್ನು ಕಾಣಬಹುದು. ಆಸ್ಪತ್ರೆಯ ಸಿಬ್ಬಂದಿ ಮಗುವಿನ ತಲೆಬುರುಡೆಯನ್ನು ಹಾಸ್ಟೆಲ್ ಹಿಂದೆ ಹೂತುಹಾಕಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಆ ತಲೆಬರುಡೆಯನ್ನು ನಾಯಿಮರಿಗಳು ಹೊರಕ್ಕೆ ಎಳೆದ ಹಿನ್ನೆಲೆಯಲ್ಲಿ ಈ ಕೃತ್ಯ ಬಯಲಿಗೆ ಬಂದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು