AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Stray Dogs: ಒಡಿಶಾದ ಕ್ಯಾನ್ಸರ್ ಆಸ್ಪತ್ರೆಯಲ್ಲಿ ನಾಯಿಗಳ ಕಾಟ, ಹಲವು ರೋಗಿಗಳನ್ನು ಕಚ್ಚಿ ಗಾಯಗೊಳಿಸಿದ ಬೀದಿ ನಾಯಿಗಳು

ಒಡಿಶಾದ ಕ್ಯಾನ್ಸರ್​ ಆಸ್ಪತ್ರೆ(Cancer Hospital) ಯಲ್ಲಿ ಬೀದಿ ನಾಯಿಗಳ ಕಾಟ ವಿಪರೀತವಾಗಿದೆ, ಹಲವು ರೋಗಿಗಳನ್ನು ಕಚ್ಚಿ ಗಾಯಗೊಳಿಸಿವೆ.

Stray Dogs: ಒಡಿಶಾದ ಕ್ಯಾನ್ಸರ್ ಆಸ್ಪತ್ರೆಯಲ್ಲಿ ನಾಯಿಗಳ ಕಾಟ, ಹಲವು ರೋಗಿಗಳನ್ನು ಕಚ್ಚಿ ಗಾಯಗೊಳಿಸಿದ ಬೀದಿ ನಾಯಿಗಳು
ಬೀದಿ ನಾಯಿ(ಸಾಂದರ್ಭಿಕ ಚಿತ್ರ)
ನಯನಾ ರಾಜೀವ್
|

Updated on: May 26, 2023 | 10:29 AM

Share

ಒಡಿಶಾದ ಕ್ಯಾನ್ಸರ್​ ಆಸ್ಪತ್ರೆ(Cancer Hospital) ಯಲ್ಲಿ ಬೀದಿ ನಾಯಿಗಳ ಕಾಟ ವಿಪರೀತವಾಗಿದೆ, ಹಲವು ರೋಗಿಗಳನ್ನು ಕಚ್ಚಿ ಗಾಯಗೊಳಿಸಿವೆ. ಒಡಿಶಾದ ಕಟಕ್‌ನಲ್ಲಿರುವ ಆಚಾರ್ಯ ಹರಿಹರ್ ಪೋಸ್ಟ್ ಗ್ರಾಜುಯೇಟ್ ಇನ್‌ಸ್ಟಿಟ್ಯೂಟ್ ಆಫ್ ಕ್ಯಾನ್ಸರ್ (ಎಎಚ್‌ಪಿಜಿಐಸಿ) ನಲ್ಲಿ ಹೆಚ್ಚುತ್ತಿರುವ ಬೀದಿ ನಾಯಿ ಕಡಿತದ ಘಟನೆಗಳ ಕುರಿತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು (ಎನ್‌ಎಚ್‌ಆರ್‌ಸಿ) ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿದೆ. ಆಯೋಗವು ಒಡಿಶಾ ಸರ್ಕಾರ, ರಾಜ್ಯದ ಆಸ್ಪತ್ರೆ ಆಡಳಿತ ಮತ್ತು ಸಿಟಿ ಮುನ್ಸಿಪಲ್ ಕಾರ್ಪೊರೇಶನ್‌ಗೆ ಗುರುವಾರ ಈ ಸಮಸ್ಯೆಗೆ ಸಂಬಂಧಿಸಿದಂತೆ ನೋಟಿಸ್ ಜಾರಿ ಮಾಡಿದೆ.

ಎಎಚ್‌ಪಿಜಿಐಸಿ ಆವರಣದಲ್ಲಿ ಬೀದಿ ನಾಯಿಗಳು ಯಾವುದೇ ಭಯವಿಲ್ಲದೆ ಸಂಚರಿಸುತ್ತಿದ್ದು, ರೋಗಿಗಳಿಗೆ ಕಚ್ಚುತ್ತಿವೆ. ಕಳೆದ ವಾರ ಆಸ್ಪತ್ರೆ ಆವರಣದಲ್ಲಿ ಐವರು ರೋಗಿಗಳಿಗೆ ಬೀದಿ ನಾಯಿಗಳು ಕಚ್ಚಿದ್ದವು ಎಂದು ವರದಿಗಳು ತಿಳಿಸಿವೆ. ಇದು ಅವರ ನಿರ್ಣಾಯಕ ಕ್ಯಾನ್ಸರ್ ಚಿಕಿತ್ಸಾ ವಿಧಾನಗಳಾದ ಕೀಮೋಥೆರಪಿ ಮತ್ತು ವಿಕಿರಣಗಳ ವಿಳಂಬಕ್ಕೆ ಕಾರಣವಾಯಿತು.

ಈ ಘಟನೆಗಳು ನಿಜವಾಗಿದ್ದರೆ, ರೋಗಿಗಳ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು NHRC ಹೇಳಿದೆ. ಎನ್‌ಎಚ್‌ಆರ್‌ಸಿ ಒಡಿಶಾ ಸರ್ಕಾರದ ಮುಖ್ಯ ಕಾರ್ಯದರ್ಶಿ, ಎಎಚ್‌ಪಿಜಿಐಸಿ ನಿರ್ದೇಶಕರು ಮತ್ತು ಕಟಕ್ ಮುನ್ಸಿಪಲ್ ಕಾರ್ಪೊರೇಷನ್ ಆಯುಕ್ತರಿಗೆ ಆರು ವಾರಗಳಲ್ಲಿ ವಿವರವಾದ ವರದಿಯನ್ನು ಸಲ್ಲಿಸುವಂತೆ ಸೂಚಿಸಿದೆ.

ಮತ್ತಷ್ಟು ಓದಿ: Delhi: ಇತ್ತೀಚೆಗಷ್ಟೇ ಬೀದಿ ನಾಯಿಗಳ ದಾಳಿಯಿಂದ ಇಬ್ಬರು ಬಾಲಕರು ಮೃತಪಟ್ಟಿದ್ದ ಜಾಗದಲ್ಲೇ ಮತ್ತೋರ್ವ ಬಾಲಕನ ಮೇಲೆ ನಾಯಿಗಳ ದಾಳಿ

AHPGIC ಆಸ್ಪತ್ರೆಯೊಳಗೆ ಬೀದಿನಾಯಿಗಳ ಸಮಸ್ಯೆಯನ್ನು ಪರಿಹರಿಸಲು ಮತ್ತು ಆವರಣದೊಳಗೆ ರೋಗಿಗಳು ಮತ್ತು ಅವರ ಪರಿಚಾರಕರ ಸುರಕ್ಷತೆಯನ್ನು ಖಾತ್ರಿಪಡಿಸಿಕೊಳ್ಳಲು ತೆಗೆದುಕೊಂಡ ಕ್ರಮಗಳನ್ನು ಅಥವಾ ತೆಗೆದುಕೊಳ್ಳಬೇಕಾದ ಕ್ರಮಗಳನ್ನು ವರದಿಯು ವಿವರಿಸಬೇಕು. ಆಯೋಗವು ಹೊರಡಿಸಿದ ರೋಗಿಗಳ ಹಕ್ಕುಗಳ ಚಾರ್ಟರ್ ಅನ್ನು ಅನುಸರಿಸಲು ಆಸ್ಪತ್ರೆಯ ಆಡಳಿತವು ನಿರ್ಲಕ್ಷ್ಯ ತೋರುತ್ತಿದೆ ಎಂದು NHRC ಗಮನಿಸಿದೆ.

ಆಸ್ಪತ್ರೆಯಲ್ಲಿ ಪ್ರತಿದಿನ 700 ರಿಂದ 1,000 ರೋಗಿಗಳು ಚಿಕಿತ್ಸೆಗೆಂದು ಬರುತ್ತಾರೆ. ಬೀದಿನಾಯಿಗಳು ರೋಗಿಗಳು ಮತ್ತು ಅವರ ಸಹಾಯಕರನ್ನು ಕಚ್ಚುತ್ತಿವೆ ಮತ್ತು ಅವುಗಳಿಂದ ಆಹಾರವನ್ನು ಕಸಿದುಕೊಳ್ಳುತ್ತಿವೆ. ಆಸ್ಪತ್ರೆಯ ವಾರ್ಡ್‌ಗಳಲ್ಲಿ ಕೂಡ ನಾಯಿಗಳು ಓಡಾಡುತ್ತಿರುವುದು ಕಂಡು ಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್