AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆಗಳನ್ನು ಬಲಪಡಿಸಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಅಮಿತ್ ಶಾ

ಭಯೋತ್ಪಾದನೆಯ ಬೆದರಿಕೆಯನ್ನು ತೊಡೆದುಹಾಕಲು ಜಮ್ಮು ಮತ್ತು ಕಾಶ್ಮೀರ ಭದ್ರತಾ ಏಜೆನ್ಸಿಗಳ ಪ್ರದೇಶದ ಪ್ರಾಬಲ್ಯ ಯೋಜನೆಯನ್ನು ಅಮಿತ್ ಶಾ ಪರಿಶೀಲಿಸಿದ್ದು, ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳನ್ನು ಬಲಪಡಿಸಲು ಮತ್ತು ಭಯೋತ್ಪಾದಕ ಪರಿಸರ ವ್ಯವಸ್ಥೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಅಗತ್ಯವನ್ನು ಅಮಿತ್ ಶಾ ಒತ್ತಿ ಹೇಳಿದ್ದಾರೆ.

ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆಗಳನ್ನು ಬಲಪಡಿಸಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಅಮಿತ್ ಶಾ
ಅಮಿತ್ ಶಾ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Jan 02, 2024 | 9:05 PM

Share

ಶ್ರೀನಗರ ಜನವರಿ 02: ಡಿಸೆಂಬರ್ 21 ರಂದು ಪಾಕಿಸ್ತಾನ (Pakistan) ಮೂಲದ ಭಯೋತ್ಪಾದಕ ಗುಂಪು ಜೈಶ್-ಎ-ಮುಹಮ್ಮದ್‌ನ ಪ್ರಾಕ್ಸಿ ಪೀಪಲ್ಸ್ ಆಂಟಿ-ಫ್ಯಾಸಿಸ್ಟ್ ಫ್ರಂಟ್ (PAFF) ಭಯೋತ್ಪಾದಕರ ಹೊಂಚುದಾಳಿಯಲ್ಲಿ ನಾಲ್ವರು ಯೋಧರು ಹುತಾತ್ಮರಾದ ದಿನಗಳ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಮಂಗಳವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಸೇರಿದಂತೆ ಗುಪ್ತಚರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. ಸಭೆಯಲ್ಲಿ  ಭಯೋತ್ಪಾದನೆಯ ಬೆದರಿಕೆಯನ್ನು ತೊಡೆದುಹಾಕಲು ಜಮ್ಮು ಮತ್ತು ಕಾಶ್ಮೀರ ಭದ್ರತಾ ಏಜೆನ್ಸಿಗಳ ಪ್ರದೇಶದ ಪ್ರಾಬಲ್ಯ ಯೋಜನೆಯನ್ನು ಅಮಿತ್ ಶಾ ಪರಿಶೀಲಿಸಿದ್ದು, ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳನ್ನು ಬಲಪಡಿಸಲು ಮತ್ತು ಭಯೋತ್ಪಾದಕ ಪರಿಸರ ವ್ಯವಸ್ಥೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಅಗತ್ಯವನ್ನು ಒತ್ತಿ ಹೇಳಿದ್ದಾರೆ.

ದುರ್ಬಲ ಪ್ರದೇಶಗಳಲ್ಲಿ ಸೂಕ್ತ ನಿಯೋಜನೆಗಾಗಿ ಅವರು ಭದ್ರತಾ ಏಜೆನ್ಸಿಗಳಿಗೆ ಸಲಹೆ ನೀಡಿದರು. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸರ್ಕಾರವು ಭಯೋತ್ಪಾದನೆ ವಿರುದ್ಧ ಶೂನ್ಯ ಸಹಿಷ್ಣುತೆಯ ವಿಧಾನವನ್ನು ಅನುಸರಿಸುವುದನ್ನು ಮುಂದುವರಿಸುತ್ತದೆ ಎಂದು ಗೃಹ ಸಚಿವರು ಪುನರುಚ್ಚರಿಸಿದ್ದಾರೆ.

ಹೊಂಚುದಾಳಿ ನಡೆದ ಕೆಲವೇ ದಿನಗಳ ನಂತರ, ಪೂಂಚ್ ಹೊಂಚುದಾಳಿಗೆ ಸಂಬಂಧಿಸಿದಂತೆ ಭದ್ರತಾ ಪಡೆಗಳು ಮೂರು ನಾಗರಿಕರನ್ನು ವಿಚಾರಣೆಗೆ ಒಳಪಡಿಸಿದವು. ಬಂಧನದಲ್ಲಿ ಮೂವರು ಕೊಲ್ಲಲ್ಪಟ್ಟರು ಎಂದು ಅವರ ಸಂಬಂಧಿಕರು ಆರೋಪಿಸಿದ್ದಾರೆ, ಇದರ ಪರಿಣಾಮವಾಗಿ ಸೇನೆಯು ತನಿಖೆಯನ್ನು ಪ್ರಾರಂಭಿಸಿತು. ಈ ಘಟನೆಗಳ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪೂಂಚ್‌ಗೆ ಭೇಟಿ ನೀಡಿದ್ದರು. 2023 ರ ಆರಂಭದಿಂದಲೂ ಜಮ್ಮು ಮತ್ತು ಕಾಶ್ಮೀರದನಲ್ಲಿ ವಿರಳವಾದ ಹಿಂಸಾಚಾರದ ಘಟನೆಗಳು ಮುಂದುವರೆದವು. ಆರ್ಟಿಕಲ್ 370 ರ ಅಡಿಯಲ್ಲಿ ವಿಶೇಷ ಸ್ಥಾನಮಾನವನ್ನು 2019 ರಲ್ಲಿ ಕೇಂದ್ರವು ರದ್ದುಗೊಳಿಸಿತು.

ಇದನ್ನೂ ಓದಿ: ತಮಿಳುನಾಡಿನಲ್ಲಿ ₹20,000 ಕೋಟಿಗೂ ಅಧಿಕ ಮೊತ್ತದ ಯೋಜನೆ ಉದ್ಘಾಟಿಸಿದ ಮೋದಿ

ಕಳೆದ ವರ್ಷ, ಕೇಂದ್ರಾಡಳಿತ ಪ್ರದೇಶದ ರಾಜೌರಿ, ಪೂಂಚ್ ಮತ್ತು ರಿಯಾಸಿ ಜಿಲ್ಲೆಗಳಲ್ಲಿ ನಡೆದ ಸರಣಿ ಎನ್‌ಕೌಂಟರ್‌ಗಳಲ್ಲಿ 28 ಭಯೋತ್ಪಾದಕರು ಮತ್ತು 19 ಭದ್ರತಾ ಸಿಬ್ಬಂದಿ ಸೇರಿದಂತೆ 54 ಜನರು ಸಾವಿಗೀಡಾಗಿದ್ದಾರೆ. ಅಧಿಕಾರಿಗಳ ಪ್ರಕಾರ, ಈ ಪ್ರದೇಶದಲ್ಲಿ ಭಯೋತ್ಪಾದನೆಯನ್ನು ಪುನರುಜ್ಜೀವನಗೊಳಿಸಲು ಗಡಿಯಾಚೆಗಿನ ಹತಾಶ ಪ್ರಯತ್ನಗಳಿಂದ ಹಿಂಸಾಚಾರದ ಹೆಚ್ಚಳವಾಗಿದೆ. ರಾಜೌರಿಯಲ್ಲಿ 10 ಭಯೋತ್ಪಾದಕರು ಮತ್ತು 14 ಭದ್ರತಾ ಪಡೆ ಸಿಬ್ಬಂದಿ ಸೇರಿದಂತೆ 31 ಜನರು ಸಾವನ್ನಪ್ಪಿದ್ದಾರೆ. ಪೂಂಚ್‌ನಲ್ಲಿ 15 ಭಯೋತ್ಪಾದಕರು ಮತ್ತು ಐವರು ಭದ್ರತಾ ಸಿಬ್ಬಂದಿ ಹತರಾಗಿದ್ದಾರೆ. ರಿಯಾಸಿಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ.

ಗಡಿಯ ಈ ಭಾಗಕ್ಕೆ ನುಸುಳಲು ಯತ್ನಿಸಿದಾಗ ಹೆಚ್ಚಿನ ಉಗ್ರರು ಕೊಲ್ಲಲ್ಪಟ್ಟರು. ಕಳೆದ ವರ್ಷ ಮೇ ತಿಂಗಳಲ್ಲಿ ಚಮ್ರೆರ್ ಅರಣ್ಯದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಐವರು ಸೇನಾ ಸಿಬ್ಬಂದಿಗಳು ಸಾವಿಗೀಡಾಗಿದ್ದು, ಪ್ರಮುಖ ಶ್ರೇಣಿಯ ಅಧಿಕಾರಿ ಗಾಯಗೊಂಡಿದ್ದರು. ಈ ಕಾರ್ಯಾಚರಣೆಯಲ್ಲಿ ವಿದೇಶಿ ಭಯೋತ್ಪಾದಕನೂ ಹತನಾಗಿದ್ದಾನೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ