AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಮಾಜಿಕ ಮಾಧ್ಯಮದಲ್ಲಿ ಅಸಭ್ಯ ವಿಷಯಗಳನ್ನು ತಡೆಯಲು ಕಠಿಣ ಕಾನೂನು ಅಗತ್ಯ: ಸಚಿವ ಅಶ್ವಿನಿ ವೈಷ್ಣವ್

ಸಾಮಾಜಿಕ ಮಾಧ್ಯಮದಲ್ಲಿ ಅಸಭ್ಯ ವಿಷಯಗಳನ್ನು ಹಂಚುವವರಿಗೆ ಸಚಿವ ಅಶ್ವಿನಿ ವೈಷ್ಣವ್ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಕಠಿಣ ಕ್ರಮದ ಅಗತ್ಯ ಇದೆ. ಇದನ್ನು ತಕ್ಷಣ ನಾವು ಜಾರಿಗೆ ತರುತ್ತೇವೆ. . ಸಂಸತ್ತಿನಲ್ಲಿ ಇಂದು ಗದ್ದಲ ನಡುವೆಯೂ ಈ ವಿಚಾರವನ್ನು ಅಶ್ವಿನಿ ವೈಷ್ಣವ್ ಪ್ರಸ್ತಾಪಿಸಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಅಸಭ್ಯ ವಿಷಯಗಳನ್ನು ತಡೆಯಲು ಕಠಿಣ ಕಾನೂನು ಅಗತ್ಯ: ಸಚಿವ ಅಶ್ವಿನಿ ವೈಷ್ಣವ್
ಸಚಿವ ಅಶ್ವಿನಿ ವೈಷ್ಣವ್
ಅಕ್ಷಯ್​ ಪಲ್ಲಮಜಲು​​
|

Updated on: Nov 27, 2024 | 1:23 PM

Share

ದೆಹಲಿ, ನ.27: ಸಂಸತ್ತು ಚಳಿಗಾಲ ಅಧಿವೇಶನ ಮಂಗಳವಾರದಿಂದ ಪ್ರಾರಂಭವಾಗಿದೆ. ಅನೇಕ ವಿಚಾರಗಳನ್ನು ಮಂಡಿಸಲು ಹಾಗೂ ಮಸೂದೆಯನ್ನು ಅನುಮೋದಿಸಲು ಸರ್ಕಾರ ಸಿದ್ಧವಾಗಿದೆ. ಇಂದು (ನ.27) ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅವರು ಭಾರತ ಮತ್ತು ಸಾಮಾಜಿಕ ವಿಚಾರಗಳ ಬಗ್ಗೆ ಅಶ್ಲೀಲ ಹಾಗೂ ವಿವಾದತ್ಮಕ ವಿಚಾರಗಳನ್ನು ಹರಡುವುದನ್ನು ತಪ್ಪಿಸುವ ಕೆಲಸ ಮಾಡಬೇಕಿದೆ ಎಂದು ಹೇಳಿದರು. ಸಂಸತ್ತಿನಲ್ಲಿ ಇಂದು ಗದ್ದಲ ನಡುವೆಯೂ ಈ ವಿಚಾರವನ್ನು ಅಶ್ವಿನಿ ವೈಷ್ಣವ್ ಪ್ರಸ್ತಾಪಿಸಿದ್ದಾರೆ.

ಈ ಇದರ ಜತೆಗೆ ಸಂಸದೀಯ ಸ್ಥಾಯಿ ಸಮಿತಿಯು ಸಮಸ್ಯೆಯನ್ನು ಕೈಗೆತ್ತಿಕೊಳ್ಳಬೇಕು ಮತ್ತು ಈ ನಿಟ್ಟಿನಲ್ಲಿ ಹೆಚ್ಚು ಕಠಿಣ ಕಾನೂನುಗಳನ್ನು ರೂಪಿಸಲು ಸಹಾಯ ಮಾಡಬೇಕು ಎಂದು ಹೇಳಿದರು. ಹಿಂದೆ, ಸಂಪಾದಕೀಯ ಪರಿಶೀಲನೆಗಳು ಇದ್ದವು, ಅಲ್ಲಿ ಏನಾದರೂ ಸರಿ ಅಥವಾ ತಪ್ಪಾಗಿದೆಯೇ ಎಂಬುದನ್ನು ಚರ್ಚಿಸಲಾಗುತ್ತಿತ್ತು. ಆದರೆ ಇದೀಗ ಆ ಕ್ರಮ ಇಲ್ಲ, ಇಂದು ಸಾಮಾಜಿಕ ಮಾಧ್ಯಮಗಳ ದರ್ಬಾರ್​​ ಶುರುವಾಗಿದೆ. ಹಾಗೂ ಇಂದು ಹಲವು ವಿಚಾರಗಳು ಸಾಮಾಜಿಕ ಮಾಧ್ಯಮಗಳು ಪತ್ರಿಕಾ ಸ್ವಾತಂತ್ರ್ಯಕ್ಕೆ ವೇದಿಕೆಯಾಗಿದೆ. ಈ ಕಾರಣದಿಂದ ಸಾಮಾಜಿಕ ಮಾಧ್ಯಮದ ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದೆ. ಈ ವೇದಿಕೆಯ ಮೂಲಕ ಅಶ್ಲೀಲ ವಿಚಾರಗಳನ್ನು ಹರಡುತ್ತಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಒಂದು ರಾಷ್ಟ್ರ, ಒಂದು ಚಂದಾದಾರಿಕೆ ಯೋಜನೆಗೆ ಕೇಂದ್ರ ಅನುಮೋದನೆ, ವಿದ್ಯಾರ್ಥಿಗಳಿಗೇನು ಪ್ರಯೋಜನ?

ವಿಡಿಯೋ ಇಲ್ಲಿದೆ ನೋಡಿ:

ಈಗಾಗಲೇ ಸಾಮಾಜಿಕ ಮಾಧ್ಯಮಗಳಲ್ಲಿ ಇಂತಹ ವಿಚಾರಗಳನ್ನು ಹರಡುವುದನ್ನು ತಡೆಯಲು ಕಾನೂನುಗಳನ್ನು ತರಲಾಗಿದೆ. ಅದನ್ನು ಮತ್ತಷ್ಟು ಕಠಿಣ ಮಾಡಬೇಕಿದೆ ಎಂದು ಹೇಳಿದರು. ಅಕ್ರಮವಾಗಿ ಸಾಮಾಜಿಕ ಜಾಲತಾಣಗಳ ಮೂಲಕ ಅಸಭ್ಯ ಮತ್ತು ಲೈಂಗಿಕ ವಿಷಯಗಳ ಪ್ರಸಾರವನ್ನು ಪರಿಶೀಲಿಸಲು ಅಸ್ತಿತ್ವದಲ್ಲಿರುವ ಕಾರ್ಯವಿಧಾನಗಳ ಬಗ್ಗೆ ಬಿಜೆಪಿ ಸದಸ್ಯ ಅರುಣ್ ಗೋವಿಲ್ ಅವರ ಪ್ರಶ್ನೆಗಳಿಗೆ ಉತ್ತರಿಸಿದರು. ಈ ಕಾನೂನುಗಳನ್ನು ಗಮನದಲ್ಲಿಟ್ಟುಕೊಂಡು ಅಸ್ತಿತ್ವದಲ್ಲಿರುವ ಕಾನೂನುಗಳನ್ನು ಇನ್ನಷ್ಟು ಕಠಿಣಗೊಳಿಸಲು ಸರ್ಕಾರವು ಪ್ರಸ್ತಾಪಿಸುತ್ತದೆ ಎಂದು ಹೇಳಿದರು. ಈ ವೇಳೆ ವಿರೋಧ ಪಕ್ಷಗಳು ಗದ್ದಲವನ್ನು ಸೃಷ್ಟಿಸಿದ ಕಾರಣ ಅಧಿವೇಶವನ್ನು ಮುಂದೂಡಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ