AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಮಾಜಿಕ ಮಾಧ್ಯಮದಲ್ಲಿ ಅಸಭ್ಯ ವಿಷಯಗಳನ್ನು ತಡೆಯಲು ಕಠಿಣ ಕಾನೂನು ಅಗತ್ಯ: ಸಚಿವ ಅಶ್ವಿನಿ ವೈಷ್ಣವ್

ಸಾಮಾಜಿಕ ಮಾಧ್ಯಮದಲ್ಲಿ ಅಸಭ್ಯ ವಿಷಯಗಳನ್ನು ಹಂಚುವವರಿಗೆ ಸಚಿವ ಅಶ್ವಿನಿ ವೈಷ್ಣವ್ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಕಠಿಣ ಕ್ರಮದ ಅಗತ್ಯ ಇದೆ. ಇದನ್ನು ತಕ್ಷಣ ನಾವು ಜಾರಿಗೆ ತರುತ್ತೇವೆ. . ಸಂಸತ್ತಿನಲ್ಲಿ ಇಂದು ಗದ್ದಲ ನಡುವೆಯೂ ಈ ವಿಚಾರವನ್ನು ಅಶ್ವಿನಿ ವೈಷ್ಣವ್ ಪ್ರಸ್ತಾಪಿಸಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಅಸಭ್ಯ ವಿಷಯಗಳನ್ನು ತಡೆಯಲು ಕಠಿಣ ಕಾನೂನು ಅಗತ್ಯ: ಸಚಿವ ಅಶ್ವಿನಿ ವೈಷ್ಣವ್
ಸಚಿವ ಅಶ್ವಿನಿ ವೈಷ್ಣವ್
ಅಕ್ಷಯ್​ ಪಲ್ಲಮಜಲು​​
|

Updated on: Nov 27, 2024 | 1:23 PM

Share

ದೆಹಲಿ, ನ.27: ಸಂಸತ್ತು ಚಳಿಗಾಲ ಅಧಿವೇಶನ ಮಂಗಳವಾರದಿಂದ ಪ್ರಾರಂಭವಾಗಿದೆ. ಅನೇಕ ವಿಚಾರಗಳನ್ನು ಮಂಡಿಸಲು ಹಾಗೂ ಮಸೂದೆಯನ್ನು ಅನುಮೋದಿಸಲು ಸರ್ಕಾರ ಸಿದ್ಧವಾಗಿದೆ. ಇಂದು (ನ.27) ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅವರು ಭಾರತ ಮತ್ತು ಸಾಮಾಜಿಕ ವಿಚಾರಗಳ ಬಗ್ಗೆ ಅಶ್ಲೀಲ ಹಾಗೂ ವಿವಾದತ್ಮಕ ವಿಚಾರಗಳನ್ನು ಹರಡುವುದನ್ನು ತಪ್ಪಿಸುವ ಕೆಲಸ ಮಾಡಬೇಕಿದೆ ಎಂದು ಹೇಳಿದರು. ಸಂಸತ್ತಿನಲ್ಲಿ ಇಂದು ಗದ್ದಲ ನಡುವೆಯೂ ಈ ವಿಚಾರವನ್ನು ಅಶ್ವಿನಿ ವೈಷ್ಣವ್ ಪ್ರಸ್ತಾಪಿಸಿದ್ದಾರೆ.

ಈ ಇದರ ಜತೆಗೆ ಸಂಸದೀಯ ಸ್ಥಾಯಿ ಸಮಿತಿಯು ಸಮಸ್ಯೆಯನ್ನು ಕೈಗೆತ್ತಿಕೊಳ್ಳಬೇಕು ಮತ್ತು ಈ ನಿಟ್ಟಿನಲ್ಲಿ ಹೆಚ್ಚು ಕಠಿಣ ಕಾನೂನುಗಳನ್ನು ರೂಪಿಸಲು ಸಹಾಯ ಮಾಡಬೇಕು ಎಂದು ಹೇಳಿದರು. ಹಿಂದೆ, ಸಂಪಾದಕೀಯ ಪರಿಶೀಲನೆಗಳು ಇದ್ದವು, ಅಲ್ಲಿ ಏನಾದರೂ ಸರಿ ಅಥವಾ ತಪ್ಪಾಗಿದೆಯೇ ಎಂಬುದನ್ನು ಚರ್ಚಿಸಲಾಗುತ್ತಿತ್ತು. ಆದರೆ ಇದೀಗ ಆ ಕ್ರಮ ಇಲ್ಲ, ಇಂದು ಸಾಮಾಜಿಕ ಮಾಧ್ಯಮಗಳ ದರ್ಬಾರ್​​ ಶುರುವಾಗಿದೆ. ಹಾಗೂ ಇಂದು ಹಲವು ವಿಚಾರಗಳು ಸಾಮಾಜಿಕ ಮಾಧ್ಯಮಗಳು ಪತ್ರಿಕಾ ಸ್ವಾತಂತ್ರ್ಯಕ್ಕೆ ವೇದಿಕೆಯಾಗಿದೆ. ಈ ಕಾರಣದಿಂದ ಸಾಮಾಜಿಕ ಮಾಧ್ಯಮದ ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದೆ. ಈ ವೇದಿಕೆಯ ಮೂಲಕ ಅಶ್ಲೀಲ ವಿಚಾರಗಳನ್ನು ಹರಡುತ್ತಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಒಂದು ರಾಷ್ಟ್ರ, ಒಂದು ಚಂದಾದಾರಿಕೆ ಯೋಜನೆಗೆ ಕೇಂದ್ರ ಅನುಮೋದನೆ, ವಿದ್ಯಾರ್ಥಿಗಳಿಗೇನು ಪ್ರಯೋಜನ?

ವಿಡಿಯೋ ಇಲ್ಲಿದೆ ನೋಡಿ:

ಈಗಾಗಲೇ ಸಾಮಾಜಿಕ ಮಾಧ್ಯಮಗಳಲ್ಲಿ ಇಂತಹ ವಿಚಾರಗಳನ್ನು ಹರಡುವುದನ್ನು ತಡೆಯಲು ಕಾನೂನುಗಳನ್ನು ತರಲಾಗಿದೆ. ಅದನ್ನು ಮತ್ತಷ್ಟು ಕಠಿಣ ಮಾಡಬೇಕಿದೆ ಎಂದು ಹೇಳಿದರು. ಅಕ್ರಮವಾಗಿ ಸಾಮಾಜಿಕ ಜಾಲತಾಣಗಳ ಮೂಲಕ ಅಸಭ್ಯ ಮತ್ತು ಲೈಂಗಿಕ ವಿಷಯಗಳ ಪ್ರಸಾರವನ್ನು ಪರಿಶೀಲಿಸಲು ಅಸ್ತಿತ್ವದಲ್ಲಿರುವ ಕಾರ್ಯವಿಧಾನಗಳ ಬಗ್ಗೆ ಬಿಜೆಪಿ ಸದಸ್ಯ ಅರುಣ್ ಗೋವಿಲ್ ಅವರ ಪ್ರಶ್ನೆಗಳಿಗೆ ಉತ್ತರಿಸಿದರು. ಈ ಕಾನೂನುಗಳನ್ನು ಗಮನದಲ್ಲಿಟ್ಟುಕೊಂಡು ಅಸ್ತಿತ್ವದಲ್ಲಿರುವ ಕಾನೂನುಗಳನ್ನು ಇನ್ನಷ್ಟು ಕಠಿಣಗೊಳಿಸಲು ಸರ್ಕಾರವು ಪ್ರಸ್ತಾಪಿಸುತ್ತದೆ ಎಂದು ಹೇಳಿದರು. ಈ ವೇಳೆ ವಿರೋಧ ಪಕ್ಷಗಳು ಗದ್ದಲವನ್ನು ಸೃಷ್ಟಿಸಿದ ಕಾರಣ ಅಧಿವೇಶವನ್ನು ಮುಂದೂಡಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್