AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Earthquake: ದೆಹಲಿ-ಎನ್‌ಸಿಆರ್‌ನಲ್ಲಿ ಪ್ರಬಲ ಭೂಕಂಪನ, ಚಂಡೀಗಢ ಮತ್ತು ಪಂಜಾಬ್​ನಲ್ಲಿ ನಡುಗಿದ ಭೂಮಿ

ಶನಿವಾರ (ಆಗಸ್ಟ್ 5) ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಗುಲ್ಮಾರ್ಗ್‌ನಲ್ಲಿ ಭೂಕಂಪ ಸಂಭವಿಸಿತ್ತು. ಇದರ ಬೆನ್ನಲ್ಲೇ, ದೆಹಲಿ-ಎನ್‌ಸಿಆರ್‌ನಲ್ಲಿ ರಾತ್ರಿ ಪ್ರಬಲ ಭೂಕಂಪನವಾಗಿದೆ. ಚಂಡೀಗಢ ಮತ್ತು ಪಂಜಾಬ್​ನ ಹಲವು ಪ್ರದೇಶಗಳಲ್ಲಿ ಭೂಕಂಪನದಿಂದ ಭೂಮಿ ನಡುಗಿದೆ. ಅಲ್ಲದೆ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಲ್ಲೂ ಭೂಕಂಪನವಾಗಿದೆ.

Delhi Earthquake: ದೆಹಲಿ-ಎನ್‌ಸಿಆರ್‌ನಲ್ಲಿ ಪ್ರಬಲ ಭೂಕಂಪನ, ಚಂಡೀಗಢ ಮತ್ತು ಪಂಜಾಬ್​ನಲ್ಲಿ ನಡುಗಿದ ಭೂಮಿ
ದೆಹಲಿಯಲ್ಲಿ ಭೂಕಂಪನ (ಸಾಂದರ್ಭಿಕ ಚಿತ್ರ)Image Credit source: iStock Photo
Rakesh Nayak Manchi
Rakesh Nayak Manchi|

Updated on:Aug 05, 2023 | 10:34 PM

Share

ನವದೆಹಲಿ, ಆಗಸ್ಟ್ 5: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Dehli) ಶನಿವಾರ ರಾತ್ರಿ ಪ್ರಬಲ ಭೂಕಂಪನ (Earthquake) ಅನುಭವವಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ. ಜಮ್ಮು ಮತ್ತು ಕಾಶ್ಮೀರದ (Jammu Kashmir) ಗುಲ್ಮಾರ್ಗ್‌ನಲ್ಲಿ ಇಂದು ಮುಂಜಾನೆ 5.2 ತೀವ್ರತೆಯ ಭೂಕಂಪ ಸಂಭವಿಸಿದ ಬೆನ್ನಲೇ ಈ ಕಂಪನ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 5.5 ಭೂಕಂಪದ ತೀವ್ರತೆ ದಾಖಲಾಗಿದೆ.

ಇದೇ ವೇಳೆ ಚಂಡೀಗಢ ಮತ್ತು ಪಂಜಾಬ್​ನ ಹಲವು ಪ್ರದೇಶಗಳಲ್ಲಿ ಭೂಕಂಪನದಿಂದ ಭೂಮಿ ನಡುಗಿದೆ. ಇದರ ಕೇಂದ್ರವನ್ನು ಜಮ್ಮು ಮತ್ತು ಕಾಶ್ಮೀರದ ಗುಲ್ಮಾರ್ಗ್ ಜಿಲ್ಲೆಯಿಂದ 89 ಕಿಮೀ ಉತ್ತರ-ವಾಯುವ್ಯಕ್ಕೆ ಹೇಳಲಾಗುತ್ತಿದೆ. ಇದೇ ವೇಳೆ, ಅಫ್ಘಾನಿಸ್ತಾನ, ಪಾಕಿಸ್ತಾನದಲ್ಲೂ ಭೂಕಂಪವಾಗಿದೆ. ಆಫ್ಘನ್​ನ ಹಿಂದುಕುಶ್​ ಪರ್ವತದಲ್ಲಿ ಭೂಕಂಪದ ಕೇಂದ್ರ ಬಿಂದುವಾಗಿದೆ. ಭೂಮಿ ಕಂಪಿಸಿದ ಹಿನ್ನೆಲೆ ಜನರು ಭಯದಿಂದ ಮನೆಗಳಿಂದ ಹೊರಕ್ಕೆ ಓಡಿ ಬಂದಿದ್ದಾರೆ.

ಇಂದು ಮುಂಜಾನೆ 8:36 ಕ್ಕೆ ಗುಲ್ಮಾರ್ಗ್‌ದಲ್ಲಿ 5.2 ತೀವ್ರತೆಯ ಭೂಕಂಪ ಸಂಭವಿಸಿತ್ತು. ಭೂಕಂಪದ ಕೇಂದ್ರಬಿಂದು ಗುಲ್ಮಾರ್ಗ್‌ನಿಂದ ಸುಮಾರು 184 ಕಿಮೀ ದೂರದಲ್ಲಿ ಭೂಮಿಯ ಮೇಲ್ಮೈಯಿಂದ 129 ಕಿಮೀ ಕೆಳಗೆ ಇತ್ತು. ಆದರೆ, ಯಾವುದೇ ಹಾನಿಯ ಬಗ್ಗೆ ವರದಿಯಾಗಿಲ್ಲ.

ಇದನ್ನೂ ಓದಿ: Andaman Earthquake: ಅಂಡಮಾನ್-ನಿಕೋಬಾರ್ ದ್ವೀಪದಲ್ಲಿ ಎರಡು ದಿನಗಳಲ್ಲಿ ಎರಡನೇ ಬಾರಿ ಭೂಕಂಪ, 4.3 ತೀವ್ರತೆ ದಾಖಲು

ಅಧಿಕಾರಿಗಳ ಪ್ರಕಾರ, ಈ ವರ್ಷದ ಜೂನ್‌ನಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ವಿವಿಧ ತೀವ್ರತೆಯ 12 ಕಂಪನಗಳು ಸಂಭವಿಸಿವೆ. ಜುಲೈ 10 ರಂದು ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ 4.9 ತೀವ್ರತೆಯ ಭೂಕಂಪ ಸಂಭವಿಸಿತ್ತು. ಜೂನ್ 13 ರಂದು, ದೋಡಾ ಜಿಲ್ಲೆಯಲ್ಲಿ ಸಂಭವಿಸಿದ 5.4 ತೀವ್ರತೆಯ ಭೂಕಂಪನದಿಂದ ಮನೆಗಳು ಸೇರಿದಂತೆ ಹತ್ತಾರು ಕಟ್ಟಡಗಳು ಬಿರುಕುಗೊಂಡಿದ್ದವು.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:00 pm, Sat, 5 August 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ