AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Earthquake: ದೆಹಲಿ-ಎನ್‌ಸಿಆರ್‌ನಲ್ಲಿ ಪ್ರಬಲ ಭೂಕಂಪನ, ಚಂಡೀಗಢ ಮತ್ತು ಪಂಜಾಬ್​ನಲ್ಲಿ ನಡುಗಿದ ಭೂಮಿ

ಶನಿವಾರ (ಆಗಸ್ಟ್ 5) ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಗುಲ್ಮಾರ್ಗ್‌ನಲ್ಲಿ ಭೂಕಂಪ ಸಂಭವಿಸಿತ್ತು. ಇದರ ಬೆನ್ನಲ್ಲೇ, ದೆಹಲಿ-ಎನ್‌ಸಿಆರ್‌ನಲ್ಲಿ ರಾತ್ರಿ ಪ್ರಬಲ ಭೂಕಂಪನವಾಗಿದೆ. ಚಂಡೀಗಢ ಮತ್ತು ಪಂಜಾಬ್​ನ ಹಲವು ಪ್ರದೇಶಗಳಲ್ಲಿ ಭೂಕಂಪನದಿಂದ ಭೂಮಿ ನಡುಗಿದೆ. ಅಲ್ಲದೆ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಲ್ಲೂ ಭೂಕಂಪನವಾಗಿದೆ.

Delhi Earthquake: ದೆಹಲಿ-ಎನ್‌ಸಿಆರ್‌ನಲ್ಲಿ ಪ್ರಬಲ ಭೂಕಂಪನ, ಚಂಡೀಗಢ ಮತ್ತು ಪಂಜಾಬ್​ನಲ್ಲಿ ನಡುಗಿದ ಭೂಮಿ
ದೆಹಲಿಯಲ್ಲಿ ಭೂಕಂಪನ (ಸಾಂದರ್ಭಿಕ ಚಿತ್ರ)Image Credit source: iStock Photo
Rakesh Nayak Manchi
|

Updated on:Aug 05, 2023 | 10:34 PM

Share

ನವದೆಹಲಿ, ಆಗಸ್ಟ್ 5: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Dehli) ಶನಿವಾರ ರಾತ್ರಿ ಪ್ರಬಲ ಭೂಕಂಪನ (Earthquake) ಅನುಭವವಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ. ಜಮ್ಮು ಮತ್ತು ಕಾಶ್ಮೀರದ (Jammu Kashmir) ಗುಲ್ಮಾರ್ಗ್‌ನಲ್ಲಿ ಇಂದು ಮುಂಜಾನೆ 5.2 ತೀವ್ರತೆಯ ಭೂಕಂಪ ಸಂಭವಿಸಿದ ಬೆನ್ನಲೇ ಈ ಕಂಪನ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 5.5 ಭೂಕಂಪದ ತೀವ್ರತೆ ದಾಖಲಾಗಿದೆ.

ಇದೇ ವೇಳೆ ಚಂಡೀಗಢ ಮತ್ತು ಪಂಜಾಬ್​ನ ಹಲವು ಪ್ರದೇಶಗಳಲ್ಲಿ ಭೂಕಂಪನದಿಂದ ಭೂಮಿ ನಡುಗಿದೆ. ಇದರ ಕೇಂದ್ರವನ್ನು ಜಮ್ಮು ಮತ್ತು ಕಾಶ್ಮೀರದ ಗುಲ್ಮಾರ್ಗ್ ಜಿಲ್ಲೆಯಿಂದ 89 ಕಿಮೀ ಉತ್ತರ-ವಾಯುವ್ಯಕ್ಕೆ ಹೇಳಲಾಗುತ್ತಿದೆ. ಇದೇ ವೇಳೆ, ಅಫ್ಘಾನಿಸ್ತಾನ, ಪಾಕಿಸ್ತಾನದಲ್ಲೂ ಭೂಕಂಪವಾಗಿದೆ. ಆಫ್ಘನ್​ನ ಹಿಂದುಕುಶ್​ ಪರ್ವತದಲ್ಲಿ ಭೂಕಂಪದ ಕೇಂದ್ರ ಬಿಂದುವಾಗಿದೆ. ಭೂಮಿ ಕಂಪಿಸಿದ ಹಿನ್ನೆಲೆ ಜನರು ಭಯದಿಂದ ಮನೆಗಳಿಂದ ಹೊರಕ್ಕೆ ಓಡಿ ಬಂದಿದ್ದಾರೆ.

ಇಂದು ಮುಂಜಾನೆ 8:36 ಕ್ಕೆ ಗುಲ್ಮಾರ್ಗ್‌ದಲ್ಲಿ 5.2 ತೀವ್ರತೆಯ ಭೂಕಂಪ ಸಂಭವಿಸಿತ್ತು. ಭೂಕಂಪದ ಕೇಂದ್ರಬಿಂದು ಗುಲ್ಮಾರ್ಗ್‌ನಿಂದ ಸುಮಾರು 184 ಕಿಮೀ ದೂರದಲ್ಲಿ ಭೂಮಿಯ ಮೇಲ್ಮೈಯಿಂದ 129 ಕಿಮೀ ಕೆಳಗೆ ಇತ್ತು. ಆದರೆ, ಯಾವುದೇ ಹಾನಿಯ ಬಗ್ಗೆ ವರದಿಯಾಗಿಲ್ಲ.

ಇದನ್ನೂ ಓದಿ: Andaman Earthquake: ಅಂಡಮಾನ್-ನಿಕೋಬಾರ್ ದ್ವೀಪದಲ್ಲಿ ಎರಡು ದಿನಗಳಲ್ಲಿ ಎರಡನೇ ಬಾರಿ ಭೂಕಂಪ, 4.3 ತೀವ್ರತೆ ದಾಖಲು

ಅಧಿಕಾರಿಗಳ ಪ್ರಕಾರ, ಈ ವರ್ಷದ ಜೂನ್‌ನಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ವಿವಿಧ ತೀವ್ರತೆಯ 12 ಕಂಪನಗಳು ಸಂಭವಿಸಿವೆ. ಜುಲೈ 10 ರಂದು ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ 4.9 ತೀವ್ರತೆಯ ಭೂಕಂಪ ಸಂಭವಿಸಿತ್ತು. ಜೂನ್ 13 ರಂದು, ದೋಡಾ ಜಿಲ್ಲೆಯಲ್ಲಿ ಸಂಭವಿಸಿದ 5.4 ತೀವ್ರತೆಯ ಭೂಕಂಪನದಿಂದ ಮನೆಗಳು ಸೇರಿದಂತೆ ಹತ್ತಾರು ಕಟ್ಟಡಗಳು ಬಿರುಕುಗೊಂಡಿದ್ದವು.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:00 pm, Sat, 5 August 23

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ