AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ಬಸ್​ನಲ್ಲಿ ಸೀಟಿಗಾಗಿ ಜಗಳ, ಬಾಲಕ ಸಾವು

ಶಾಲಾ ಬಸ್ಸಿನಲ್ಲಿ ಸೀಟಿಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಸಣ್ಣ ಜಗಳ ದುರಂತ ತಿರುವು ಪಡೆದುಕೊಂಡು 14 ವರ್ಷದ ಬಾಲಕ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾನೆ. 9 ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳಾದ ಸರವಣನ್ ಮತ್ತು ಕಂದಗುರು ನಡುವೆ ಶಾಲಾ ಬಸ್ಸಿನಲ್ಲಿ ಸೀಟಿನ ಕುರಿತು ಜಗಳ ನಡೆದಿತ್ತು. ಈ ಜಗಳ ತಾರಕಕ್ಕೇರಿತು, ಮತ್ತು ಆ ಕ್ಷಣದಲ್ಲಿ ಸರವಣನ್ ಕಂದಗುರುವನ್ನು ತಳ್ಳಿದ ಪರಿಣಾಮ ಆತ ಬಿದ್ದು ತಲೆಗೆ ಪೆಟ್ಟು ಬಿದ್ದಿತ್ತು ಎಂದು ಹೇಳಲಾಗಿದೆ. ವೈದ್ಯಕೀಯ ಚಿಕಿತ್ಸೆಗಾಗಿ ಸಾಗಿಸಲಾಯಿತಾದರೂ, ಗುರುವಾರ ಬೆಳಗ್ಗೆ ಕಂದಗುರು ಸಾವನ್ನಪ್ಪಿದರು

ಶಾಲಾ ಬಸ್​ನಲ್ಲಿ ಸೀಟಿಗಾಗಿ ಜಗಳ, ಬಾಲಕ ಸಾವು
ಬಸ್-ಸಾಂದರ್ಭಿಕ ಚಿತ್ರImage Credit source: IndiaMart
ನಯನಾ ರಾಜೀವ್
|

Updated on:Feb 13, 2025 | 11:39 AM

Share

ಶಾಲಾ ಬಸ್ಸಿನಲ್ಲಿ ಸೀಟಿಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಸಣ್ಣ ಜಗಳ ದುರಂತ ತಿರುವು ಪಡೆದುಕೊಂಡು 14 ವರ್ಷದ ಬಾಲಕ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾನೆ. 9 ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳಾದ ಸರವಣನ್ ಮತ್ತು ಕಂದಗುರು ನಡುವೆ ಶಾಲಾ ಬಸ್ಸಿನಲ್ಲಿ ಸೀಟಿನ ಕುರಿತು ಜಗಳ ನಡೆದಿತ್ತು. ಈ ಜಗಳ ತಾರಕಕ್ಕೇರಿತು, ಮತ್ತು ಆ ಕ್ಷಣದಲ್ಲಿ ಸರವಣನ್ ಕಂದಗುರುವನ್ನು ತಳ್ಳಿದ ಪರಿಣಾಮ ಆತ ಬಿದ್ದು ತಲೆಗೆ ಪೆಟ್ಟು ಬಿದ್ದಿತ್ತು ಎಂದು ಹೇಳಲಾಗಿದೆ. ವೈದ್ಯಕೀಯ ಚಿಕಿತ್ಸೆಗಾಗಿ ಸಾಗಿಸಲಾಯಿತಾದರೂ, ಗುರುವಾರ ಬೆಳಗ್ಗೆ ಕಂದಗುರು ಸಾವನ್ನಪ್ಪಿದರು.

ಘಟನೆಯ ನಂತರ, ಸೇಲಂ ಪೊಲೀಸರು ಸರವಣನ್​ನ್ನು ವಶಕ್ಕೆ ಪಡೆದಿದ್ದಾರೆ, ಮುಂದಿನ ಕಾನೂನು ಕ್ರಮಗಳಿಗಾಗಿ ಆತನನ್ನು ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ದೃಢಪಡಿಸಿದರು.

ವಾಗ್ವಾದಕ್ಕೆ ಕಾರಣವಾದ ಸಂದರ್ಭಗಳ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಅಕ್ಟೋಬರ್ 2024 ರಲ್ಲಿ, ಪ್ರೆಸಿಡೆನ್ಸಿ ಕಾಲೇಜಿನ 19 ವರ್ಷದ ವಿದ್ಯಾರ್ಥಿ ಎ ಸುಂದರ್, ಪಚೈಯಪ್ಪ ಕಾಲೇಜಿನ ವಿದ್ಯಾರ್ಥಿಗಳ ಗುಂಪಿನಿಂದ ಹಲ್ಲೆಗೊಳಗಾಗಿ ಸಾವನ್ನಪ್ಪಿದ್ದ.

ಎತ್ತಿನಬಂಡಿಗೆ ಬೈಕ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರು ಸಾವು ಎತ್ತಿನಬಂಡಿಗೆ ಬೈಕ್ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಮೂವರು ಮೃತಪಟ್ಟ ಘಟನೆ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಗುಡಗೂರು ಕ್ರಾಸ್ ಬಳಿ ನಡೆದಿದೆ. 25 ವರ್ಷದ ಶಶಿಕುಮಾರ ಉಪ್ಪಾರ, 23 ವರ್ಷದ ಆಕಾಶ ಬಿರಾದಾರ ಮತ್ತು 23 ವರ್ಷದ ದರ್ಶನ ಮೃತ ದುರ್ದೈವಿಗಳು.

ಮತ್ತಷ್ಟು ಓದಿ: ಶಾಲೆಯಿಂದ ತಡವಾಗಿ ಬಂದಿದ್ದಕ್ಕೆ ಮಗನನ್ನು ಹೊಡೆದು ಕೊಂದ ಕುಡುಕ ತಂದೆ

ಇಬ್ಬರು ವಿದ್ಯಾರ್ಥಿಗಳು ಸೇರಿ ಬೈಕ್​ನಲ್ಲಿ ಮೂವರು ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ಜಾತ್ರೆಗೆ ಹೊರಟಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಇವರು ಹನುಮನಮಟ್ಟಿ ಗ್ರಾಮದಿಂದ ಮೈಲಾರ ಜಾತ್ರೆಗೆ ಹೊರಟಿದ್ದಾಗ ಈ ದುರ್ಘಟನೆ ನಡೆದಿದೆ. ಆಕಾಶ ಮತ್ತು ದರ್ಶನ ಮೂರನೇ ವರ್ಷದ ಬಿಎಸ್ಸಿ ಅಗ್ರಿ ಓದುತ್ತಿದ್ದರು.

ಶಶಿಕುಮಾರ ಹನುಮನಮಟ್ಟಿ ಗ್ರಾಮದಲ್ಲಿ ಹೋಟೆಲ್​ ಕೆಲಸ ಮಾಡುತ್ತಿದ್ದ. ತಡರಾತ್ರಿ ಎತ್ತಿನಬಂಡಿಗೆ ಡಿಕ್ಕಿ ಹೊಡೆದು ಮೂವರು ಮೃತಪಟ್ಟಿದ್ದಾರೆ. ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:55 pm, Tue, 11 February 25

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್