AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ಬಸ್​ನಲ್ಲಿ ಸೀಟಿಗಾಗಿ ಜಗಳ, ಬಾಲಕ ಸಾವು

ಶಾಲಾ ಬಸ್ಸಿನಲ್ಲಿ ಸೀಟಿಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಸಣ್ಣ ಜಗಳ ದುರಂತ ತಿರುವು ಪಡೆದುಕೊಂಡು 14 ವರ್ಷದ ಬಾಲಕ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾನೆ. 9 ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳಾದ ಸರವಣನ್ ಮತ್ತು ಕಂದಗುರು ನಡುವೆ ಶಾಲಾ ಬಸ್ಸಿನಲ್ಲಿ ಸೀಟಿನ ಕುರಿತು ಜಗಳ ನಡೆದಿತ್ತು. ಈ ಜಗಳ ತಾರಕಕ್ಕೇರಿತು, ಮತ್ತು ಆ ಕ್ಷಣದಲ್ಲಿ ಸರವಣನ್ ಕಂದಗುರುವನ್ನು ತಳ್ಳಿದ ಪರಿಣಾಮ ಆತ ಬಿದ್ದು ತಲೆಗೆ ಪೆಟ್ಟು ಬಿದ್ದಿತ್ತು ಎಂದು ಹೇಳಲಾಗಿದೆ. ವೈದ್ಯಕೀಯ ಚಿಕಿತ್ಸೆಗಾಗಿ ಸಾಗಿಸಲಾಯಿತಾದರೂ, ಗುರುವಾರ ಬೆಳಗ್ಗೆ ಕಂದಗುರು ಸಾವನ್ನಪ್ಪಿದರು

ಶಾಲಾ ಬಸ್​ನಲ್ಲಿ ಸೀಟಿಗಾಗಿ ಜಗಳ, ಬಾಲಕ ಸಾವು
ಬಸ್-ಸಾಂದರ್ಭಿಕ ಚಿತ್ರImage Credit source: IndiaMart
ನಯನಾ ರಾಜೀವ್
|

Updated on:Feb 13, 2025 | 11:39 AM

Share

ಶಾಲಾ ಬಸ್ಸಿನಲ್ಲಿ ಸೀಟಿಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಸಣ್ಣ ಜಗಳ ದುರಂತ ತಿರುವು ಪಡೆದುಕೊಂಡು 14 ವರ್ಷದ ಬಾಲಕ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾನೆ. 9 ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳಾದ ಸರವಣನ್ ಮತ್ತು ಕಂದಗುರು ನಡುವೆ ಶಾಲಾ ಬಸ್ಸಿನಲ್ಲಿ ಸೀಟಿನ ಕುರಿತು ಜಗಳ ನಡೆದಿತ್ತು. ಈ ಜಗಳ ತಾರಕಕ್ಕೇರಿತು, ಮತ್ತು ಆ ಕ್ಷಣದಲ್ಲಿ ಸರವಣನ್ ಕಂದಗುರುವನ್ನು ತಳ್ಳಿದ ಪರಿಣಾಮ ಆತ ಬಿದ್ದು ತಲೆಗೆ ಪೆಟ್ಟು ಬಿದ್ದಿತ್ತು ಎಂದು ಹೇಳಲಾಗಿದೆ. ವೈದ್ಯಕೀಯ ಚಿಕಿತ್ಸೆಗಾಗಿ ಸಾಗಿಸಲಾಯಿತಾದರೂ, ಗುರುವಾರ ಬೆಳಗ್ಗೆ ಕಂದಗುರು ಸಾವನ್ನಪ್ಪಿದರು.

ಘಟನೆಯ ನಂತರ, ಸೇಲಂ ಪೊಲೀಸರು ಸರವಣನ್​ನ್ನು ವಶಕ್ಕೆ ಪಡೆದಿದ್ದಾರೆ, ಮುಂದಿನ ಕಾನೂನು ಕ್ರಮಗಳಿಗಾಗಿ ಆತನನ್ನು ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ದೃಢಪಡಿಸಿದರು.

ವಾಗ್ವಾದಕ್ಕೆ ಕಾರಣವಾದ ಸಂದರ್ಭಗಳ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಅಕ್ಟೋಬರ್ 2024 ರಲ್ಲಿ, ಪ್ರೆಸಿಡೆನ್ಸಿ ಕಾಲೇಜಿನ 19 ವರ್ಷದ ವಿದ್ಯಾರ್ಥಿ ಎ ಸುಂದರ್, ಪಚೈಯಪ್ಪ ಕಾಲೇಜಿನ ವಿದ್ಯಾರ್ಥಿಗಳ ಗುಂಪಿನಿಂದ ಹಲ್ಲೆಗೊಳಗಾಗಿ ಸಾವನ್ನಪ್ಪಿದ್ದ.

ಎತ್ತಿನಬಂಡಿಗೆ ಬೈಕ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರು ಸಾವು ಎತ್ತಿನಬಂಡಿಗೆ ಬೈಕ್ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಮೂವರು ಮೃತಪಟ್ಟ ಘಟನೆ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಗುಡಗೂರು ಕ್ರಾಸ್ ಬಳಿ ನಡೆದಿದೆ. 25 ವರ್ಷದ ಶಶಿಕುಮಾರ ಉಪ್ಪಾರ, 23 ವರ್ಷದ ಆಕಾಶ ಬಿರಾದಾರ ಮತ್ತು 23 ವರ್ಷದ ದರ್ಶನ ಮೃತ ದುರ್ದೈವಿಗಳು.

ಮತ್ತಷ್ಟು ಓದಿ: ಶಾಲೆಯಿಂದ ತಡವಾಗಿ ಬಂದಿದ್ದಕ್ಕೆ ಮಗನನ್ನು ಹೊಡೆದು ಕೊಂದ ಕುಡುಕ ತಂದೆ

ಇಬ್ಬರು ವಿದ್ಯಾರ್ಥಿಗಳು ಸೇರಿ ಬೈಕ್​ನಲ್ಲಿ ಮೂವರು ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ಜಾತ್ರೆಗೆ ಹೊರಟಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಇವರು ಹನುಮನಮಟ್ಟಿ ಗ್ರಾಮದಿಂದ ಮೈಲಾರ ಜಾತ್ರೆಗೆ ಹೊರಟಿದ್ದಾಗ ಈ ದುರ್ಘಟನೆ ನಡೆದಿದೆ. ಆಕಾಶ ಮತ್ತು ದರ್ಶನ ಮೂರನೇ ವರ್ಷದ ಬಿಎಸ್ಸಿ ಅಗ್ರಿ ಓದುತ್ತಿದ್ದರು.

ಶಶಿಕುಮಾರ ಹನುಮನಮಟ್ಟಿ ಗ್ರಾಮದಲ್ಲಿ ಹೋಟೆಲ್​ ಕೆಲಸ ಮಾಡುತ್ತಿದ್ದ. ತಡರಾತ್ರಿ ಎತ್ತಿನಬಂಡಿಗೆ ಡಿಕ್ಕಿ ಹೊಡೆದು ಮೂವರು ಮೃತಪಟ್ಟಿದ್ದಾರೆ. ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:55 pm, Tue, 11 February 25

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್