AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಎಂದರೇನು? ವಿದ್ಯಾರ್ಥಿನಿಯ ಫನ್ನಿ ಉತ್ತರ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ! ಜನ ಮನಸಾರೆ ನಗ್ತಿದಾರೆ

ಶಾಲೆಯಲ್ಲಿ ವಿವಿಧ ರೀತಿಯ ಮಕ್ಕಳಿರುತ್ತಾರೆ. ಕೆಲವು ವಿದ್ಯಾರ್ಥಿಗಳು ಅಧ್ಯಯನ ಮಾಡಲು ತುಂಬಾ ಆಸಕ್ತಿ ಹೊಂದಿದ್ದರೆ, ಕೆಲವು ವಿದ್ಯಾರ್ಥಿಗಳು ತುಂಬಾ ಚಾಣಾಕ್ಷರು. ಬುದ್ಧಿವಂತರೂ ಆಗಿಗಿರುತ್ತಾರೆ. ಆದರೆ ಕೆಲವು ವಿದ್ಯಾರ್ಥಿಗಳು ಸಾಮಾನ್ಯ ಬುದ್ಧಿವಂತಿಕೆಯನ್ನು ಹೊಂದಿದ್ದರೂ ತಮ್ಮ ಕೆಲಸದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಾರೆ. ಕೆಲವು ವಿದ್ಯಾರ್ಥಿಗಳು ಮನಸ್ಸಿಟ್ಟು ಅಧ್ಯಯನ ಮಾಡುವುದಿಲ್ಲ. ಆದರೆ ಅಂತಹ ವಿದ್ಯಾರ್ಥಿಗಳ ಹೃದಯ ಎಲ್ಲೆಲ್ಲೋ ಓಡಾಡುತ್ತಿರುತ್ತದೆ/ ಏನನ್ನೋ ಜಾಲಾಡುತ್ತಿರುತ್ತದೆ.

ಮದುವೆ ಎಂದರೇನು? ವಿದ್ಯಾರ್ಥಿನಿಯ ಫನ್ನಿ ಉತ್ತರ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ! ಜನ ಮನಸಾರೆ ನಗ್ತಿದಾರೆ
ಮದುವೆ ಎಂದರೇನು? ವಿದ್ಯಾರ್ಥಿಯ ಫನ್ನಿ ಉತ್ತರ ಸೋಷಿಯಲ್ ಮೀಡಿಯಾದಲ್ಲಿ ವೈರಲ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Oct 02, 2023 | 1:08 PM

Share

ಕೆಲವು ವಿದ್ಯಾರ್ಥಿಗಳು ಸಮಯ ಕಳೆಯಲು ತಮ್ಮ ನೆಚ್ಚಿನ ಉತ್ತರಗಳನ್ನು ಪರೀಕ್ಷಗೆ ನೀಡಿರುವ ಉತ್ತರ ಪತ್ರಿಕೆಗಳ ಮೇಲೆಯೇ ಗೀಚುತ್ತಾರೆ. ಉತ್ತರ ಸಮಂಜಸ ಅಲ್ಲದಿರಬಹುದು ಅದರೂ ನೆನಪಿನಲ್ಲಿ ಉಳಿಯುವಂತಹ ಉತ್ತರಗಳಾಗಿರುತ್ತವೆ. ಕೆಲ ಸಮಯದ ಹಿಂದೆ ಅಲ್ಲು ಅರ್ಜುನ್ ಅವರು ‘ಪುಷ್ಪ: ದಿ ರೈಸ್’ ಚಿತ್ರದಲ್ಲಿ ಪುಷ್ಪಾ.. ಪುಷ್ಪಾ ರಾಜ್ ಎಂದು ಬರೆದ ವಿದ್ಯಾರ್ಥಿಯ ಉತ್ತರ ಪತ್ರಿಕೆಯ ಚಿತ್ರ ಅಂತರ್ಜಾಲದಲ್ಲಿ ಕಾಣಿಸಿಕೊಂಡಿದ್ದು ನಿಮಗೆ ನೆನಪಿರಬಹುದು. ಆದರೆ ಇದೀಗ ಉತ್ತರ ಪತ್ರಿಕೆಯಲ್ಲಿ ವಿದ್ಯಾರ್ಥಿನಿಯೊಬ್ಬಳು ಮದುವೆಯ ಬಗ್ಗೆ ವಿಚಿತ್ರ ವ್ಯಾಖ್ಯಾನ ನೀಡಿದ್ದಾಳೆ. ಇದನ್ನು ನೋಡಿದರೆ ಯಾರಪ್ಪಾ ಈ ಬಾಲೆ ಎಂದು ನೀವು ಯೋಚಿಸುತ್ತೀರಿ/ಮುಸಿಮನುಸಿ ನಗುತ್ತೀರಿ.

ಶಾಲೆಯಲ್ಲಿ ವಿವಿಧ ರೀತಿಯ ಮಕ್ಕಳಿರುತ್ತಾರೆ. ಕೆಲವು ವಿದ್ಯಾರ್ಥಿಗಳು ಅಧ್ಯಯನ ಮಾಡಲು ತುಂಬಾ ಆಸಕ್ತಿ ಹೊಂದಿದ್ದರೆ, ಕೆಲವು ವಿದ್ಯಾರ್ಥಿಗಳು ತುಂಬಾ ಚಾಣಾಕ್ಷರು. ಬುದ್ಧಿವಂತರೂ ಆಗಿಗಿರುತ್ತಾರೆ. ಆದರೆ ಕೆಲವು ವಿದ್ಯಾರ್ಥಿಗಳು ಸಾಮಾನ್ಯ ಬುದ್ಧಿವಂತಿಕೆಯನ್ನು ಹೊಂದಿದ್ದರೂ ತಮ್ಮ ಕೆಲಸದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಾರೆ. ಕೆಲವು ವಿದ್ಯಾರ್ಥಿಗಳು ಮನಸ್ಸಿಟ್ಟು ಅಧ್ಯಯನ ಮಾಡುವುದಿಲ್ಲ. ಆದರೆ ಅಂತಹ ವಿದ್ಯಾರ್ಥಿಗಳ ಹೃದಯ ಎಲ್ಲೆಲ್ಲೋ ಓಡಾಡುತ್ತಿರುತ್ತದೆ/ ಏನನ್ನೋ ಜಾಲಾಡುತ್ತಿರುತ್ತದೆ.

ಮತ್ತಷ್ಟು ಓದಿ: ರಾಜಸ್ಥಾನದಲ್ಲಿ ಜನಸಂಘರ್ಷ್ ಯಾತ್ರೆ: ನಾವು ಕರ್ನಾಟಕದ ಕಾಂಗ್ರೆಸ್ ಪಕ್ಷದಿಂದ ಕಲಿಯಬೇಕು ಎಂದ ಸಚಿನ್ ಪೈಲಟ್

ಅಂತಹ ಉತ್ತರ ಸದ್ಯ ಅಂತರ್ಜಾಲದಲ್ಲಿ ಜಾಲಾಡುತ್ತಿದೆ. ಅದೀಗ ವೈರಲ್ ಆಗಿದೆ. ಇದನ್ನು ನೋಡಿದರೆ ನಗು ಬರುತ್ತದೆ.. ಆ ವಿದ್ಯಾರ್ಥಿನಿ ಅದೆಷ್ಟು ತಮಾಷೆಯಾಗಿ ಬರೆದಿದ್ದಾರೆ ಗೊತ್ತಾ… ಶಾಲೆ/ ಕಾ;ಲೇಜು ಸೇರಿದ ಸ್ಟೂಡೆಂಟುಗಳಿಗೆ ವರ್ಷ ಆರಂಭವಾಗುತ್ತಿದ್ದಂತೆ ಹಲವು ಯೂನಿಟ್ ಟೆಸ್ಟ್​​ಗಳು, ತ್ರೈಮಾಸಿಕ, ಅರ್ಧ ವರ್ಷದ ಪರೀಕ್ಷೆಗಳು ಬರುತ್ತಲೇ ಇರುತ್ತವೆ. ಯಾವುದೇ ವಿದ್ಯಾರ್ಥಿಯಾಗಲಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಮತ್ತು ಉತ್ತಮ ಅಂಕಗಳನ್ನು ಪಡೆಯಲು ಬಯಸುತ್ತಾರೆ. ಆದರೆ ಕೆಲವು ವಿದ್ಯಾರ್ಥಿಗಳು ಸಮಯ ಕಳೆಯಲು ತಮಗಿಷ್ಟ ಬಂದ, ತಮ್ಮ ನೆಚ್ಚಿನ ಉತ್ತರಗಳನ್ನು ಆನ್ಸರ್​​​ ಪೇಪರ್ ಮೇಲೆ ಗೀಚುತ್ತಾರೆ. ಇವು ನೆನಪಿನಲ್ಲಿ ಉಳಿಯುತ್ತವೆ.

ಮದುವೆಯ ವ್ಯಾಖ್ಯಾನವೇನು ಎಂಬಬುದಕ್ಕೆ ಈ ವಿದ್ಯಾರ್ಥಿನಿಯ ಉತ್ತರ ನಗು ತರಿಸುತ್ತದೆ. ಅದು ಹೀಗಿದೆ: ಮದುವೆಯೆಂದರೆ ಅದು.. ಈಗ ನೀನು ದೊಡ್ಡವನಾಗಿದ್ದೀಯ. ಇಷ್ಟು ವರ್ಷ ನಿನ್ನನ್ನು ಸಾಕಿದ್ದೆವು.. ಇನ್ನು ನಮ್ಮಿಂದ ಆಗೋಲ್ಲ ಎನ್ನುತ್ತಾರೆ ಬಾಲಕಿಯ ಪೋಷಕರು. ನಂತರ ಹುಡುಗನನ್ನು ಆಯ್ಕೆ ಮಾಡುವ ಪ್ರಕ್ರಿಯೆಯು ಪ್ರಾರಂಭವಾಗುತ್ತದೆ. ಹುಡುಗಿಯ ಪೋಷಕರು ತಮ್ಮ ಮಗಳನ್ನು ಮದುವೆ ಮಾಡಿಕೊಟ್ಟು, ತಮ್ಮ ಮಗಳನ್ನು ಬೆಳೆಸುವ ಪುರುಷನನ್ನು ಹುಡುಕುತ್ತಾರೆ. ನಂತರ ಹುಡುಗಿ ಮತ್ತು ಹುಡುಗ ಭೇಟಿಯಾಗುತ್ತಾರೆ. ತಂದೆ-ತಾಯಿ ನಿಶ್ಚಯಿಸಿದವರನ್ನೇ ಮಗಳು ಮದುವೆಯಾಗುತ್ತಾಳೆ ಎಂದು ಮನದಾಳದ ಭಾವನೆಗಳನ್ನು ಪ್ರಸ್ತುತಪಡಿಸಿದ್ದಾಳೆ. ವಿದ್ಯಾರ್ಥಿನಿ ಬರೆದ ಉತ್ತರ ಶಿಕ್ಷಕರು ನಿತರುತ್ತರರಾಗಿದ್ದಾರೆ. ಆದರೆ ಅವಳ ಉತ್ತರ ಪತ್ರಿಕೆಯನ್ನು ಅಡ್ಡಲಾಗಿ ಹೊಡೆದಳು, ಶೂನ್ಯ ಅಂಕಗಳನ್ನು ದಯಪಾಲಿಸಿದ್ದಾರೆ.

ಈ ಚಿತ್ರವನ್ನು @srpdaa ಖಾತೆಯಿಂದ ಟ್ವಿಟರ್‌ನಲ್ಲಿ ಹಂಚಿಕೊಳ್ಳಲಾಗಿದೆ ಈ ಪೋಸ್ಟ್ ಗೆ ನಾನಾ ಕಾಮೆಂಟ್‌ಗಳನ್ನು ಮಾಡುವ ಮೂಲಕ ತಮ್ಮ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ