AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ವಾಲಿಯರ್: ಪೆಟ್ರೋಲ್ ಬಂಕ್ ಬಳಿ ಅಪಹರಣವಾಗಿದ್ದ ಕಾಲೇಜು ವಿದ್ಯಾರ್ಥಿನಿ ಹೋಟೆಲ್​ನಲ್ಲಿ ಪತ್ತೆ

ಗ್ವಾಲಿಯರ್​ನ ಪೆಟ್ರೋಲ್​ ಬಂಕ್ ಬಳಿಯಿಂದ ಅಪಹರಣವಾಗಿದ್ದ ಕಾಲೇಜು ವಿದ್ಯಾರ್ಥಿನಿ ಗುನಾದ ಹೋಟೆಲ್​ನಲ್ಲಿ ಪತ್ತೆಯಾಗಿದ್ದಾಳೆ. ಗ್ವಾಲಿಯರ್‌ನ ಹಿರಿಯ ಪೊಲೀಸ್ ಅಧೀಕ್ಷಕ ರಾಜೇಶ್ ಸಿಂಗ್ ಚಂದೇಲ್ ಮಾತನಾಡಿ, ಇಬ್ಬರು ಆರೋಪಿಗಳಲ್ಲಿ ಒಬ್ಬನನ್ನು ಲಹರ್‌ನಲ್ಲಿ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಗ್ವಾಲಿಯರ್: ಪೆಟ್ರೋಲ್ ಬಂಕ್ ಬಳಿ ಅಪಹರಣವಾಗಿದ್ದ ಕಾಲೇಜು ವಿದ್ಯಾರ್ಥಿನಿ ಹೋಟೆಲ್​ನಲ್ಲಿ ಪತ್ತೆ
ಅಪಹರಣ
ನಯನಾ ರಾಜೀವ್
|

Updated on: Nov 21, 2023 | 10:27 AM

Share

ಗ್ವಾಲಿಯರ್​ನ ಪೆಟ್ರೋಲ್​ ಬಂಕ್ ಬಳಿಯಿಂದ ಅಪಹರಣವಾಗಿದ್ದ ಕಾಲೇಜು ವಿದ್ಯಾರ್ಥಿನಿ ಗುನಾದ ಹೋಟೆಲ್​ನಲ್ಲಿ ಪತ್ತೆಯಾಗಿದ್ದಾಳೆ. ಗ್ವಾಲಿಯರ್‌ನ ಹಿರಿಯ ಪೊಲೀಸ್ ಅಧೀಕ್ಷಕ ರಾಜೇಶ್ ಸಿಂಗ್ ಚಂದೇಲ್ ಮಾತನಾಡಿ, ಇಬ್ಬರು ಆರೋಪಿಗಳಲ್ಲಿ ಒಬ್ಬನನ್ನು ಲಹರ್‌ನಲ್ಲಿ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಸೋಮವಾರ ಗ್ವಾಲಿಯರ್‌ನ ನಾಕಾ ಚಂದ್ರವದ್​ನ ಪೆಟ್ರೋಲ್ ಬಂಕ್ ಬಳಿ ಅಪಹರಣಕ್ಕೊಳಗಾಗಿದ್ದ 19 ವರ್ಷದ ವಿದ್ಯಾರ್ಥಿನಿ ಗುನಾದಲ್ಲಿನ ಲಾಡ್ಜ್‌ನಲ್ಲಿ ಪತ್ತೆಯಾಗಿದ್ದಾಳೆ. ಆಕೆಯನ್ನು ಮೋಟರ್‌ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದರು. ಒಬ್ಬ ವ್ಯಕ್ತಿಯನ್ನು ಲಾಹರ್‌ನಲ್ಲಿ ಬಂಧಿಸಲಾಗಿದೆ, ಎಸ್‌ಎಸ್‌ಪಿ ಮಂಗಳವಾರ ತಿಳಿಸಿದ್ದಾರೆ.

ಪ್ರಕರಣದ ತನಿಖೆಗಾಗಿ ಎರಡು ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಸೋಮವಾರ ಬೆಳಗ್ಗೆ ಗ್ವಾಲಿಯರ್‌ನ ಝಾನ್ಸಿ ರಸ್ತೆ ಪ್ರದೇಶದಲ್ಲಿ ಹಗಲು ಹೊತ್ತಿನಲ್ಲಿ ಬಸ್‌ನಿಂದ ಇಳಿದಾಗ ಬೈಕ್‌ನಲ್ಲಿ ಬಂದ ಇಬ್ಬರು ಮಹಿಳೆಯನ್ನು ಅಪಹರಿಸಿದ್ದಾರೆ.

ಜಿಲ್ಲೆಯ ಝಾನ್ಸಿ ರಸ್ತೆ ಪೊಲೀಸ್ ಠಾಣೆ ವ್ಯಾಪ್ತಿಯ ಪೆಟ್ರೋಲ್ ಬಂಕ್ ಬಳಿ ಸೋಮವಾರ ಬೆಳಗ್ಗೆ 9:30ರ ಸುಮಾರಿಗೆ ಈ ಘಟನೆ ನಡೆದಿದೆ. ಪೆಟ್ರೋಲ್ ಪಂಪ್‌ನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಈ ಸಂಪೂರ್ಣ ದೃಶ್ಯ ಸೆರೆಯಾಗಿದೆ.

ಮತ್ತಷ್ಟು ಓದಿ: ವಿಪರೀತ ಸಾಲ, ದಿನ ಬೆಳಗಾದರೆ ನೂರಾರು ಫೋನ್​ಕಾಲ್​ಗಳು, ಅಪಹರಣ ನಾಟಕವಾಡಿ ತಂದೆ ಬಳಿ ಹಣಕ್ಕೆ ಬೇಡಿಕೆ ಇಟ್ಟ

ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಯುವಕರು ಆಕೆಯನ್ನು ಬೈಕ್ ಮೇಲೆ ಕೂರಿಸಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ. ಪೊಲೀಸರ ಪ್ರಕಾರ, ಮಹಿಳೆ ಭಿಂಡ್ ಜಿಲ್ಲೆಯ ನಿವಾಸಿಯಾಗಿದ್ದು, ಆಕೆ ತನ್ನ ಕುಟುಂಬದೊಂದಿಗೆ ಬಸ್ ಮೂಲಕ ಅಲ್ಲಿಗೆ ಬಂದಿದ್ದಳು.

ಝಾನ್ಸಿ ರಸ್ತೆಯ ಬಸ್ ನಿಲ್ದಾಣದಲ್ಲಿ ಆಕೆ ಬಸ್‌ನಿಂದ ಕೆಳಗಿಳಿದಿದ್ದು, ಈ ವೇಳೆ ಮೋಟಾರ್‌ಸೈಕಲ್‌ನಲ್ಲಿ ಇಬ್ಬರು ಯುವಕರು ಅಲ್ಲಿಗೆ ಬಂದು ಆಕೆಯನ್ನು ಸ್ಥಳದಿಂದ ಕರೆದೊಯ್ದ ಘಟನೆ ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದೆ. ಅಪಹರಣಕ್ಕೆ ಕಾರಣವೇನೆಂಬುದು ಇನ್ನೂ ತಿಳಿದುಬಂದಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ