AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ವಾಲಿಯರ್: ಪೆಟ್ರೋಲ್ ಬಂಕ್ ಬಳಿ ಅಪಹರಣವಾಗಿದ್ದ ಕಾಲೇಜು ವಿದ್ಯಾರ್ಥಿನಿ ಹೋಟೆಲ್​ನಲ್ಲಿ ಪತ್ತೆ

ಗ್ವಾಲಿಯರ್​ನ ಪೆಟ್ರೋಲ್​ ಬಂಕ್ ಬಳಿಯಿಂದ ಅಪಹರಣವಾಗಿದ್ದ ಕಾಲೇಜು ವಿದ್ಯಾರ್ಥಿನಿ ಗುನಾದ ಹೋಟೆಲ್​ನಲ್ಲಿ ಪತ್ತೆಯಾಗಿದ್ದಾಳೆ. ಗ್ವಾಲಿಯರ್‌ನ ಹಿರಿಯ ಪೊಲೀಸ್ ಅಧೀಕ್ಷಕ ರಾಜೇಶ್ ಸಿಂಗ್ ಚಂದೇಲ್ ಮಾತನಾಡಿ, ಇಬ್ಬರು ಆರೋಪಿಗಳಲ್ಲಿ ಒಬ್ಬನನ್ನು ಲಹರ್‌ನಲ್ಲಿ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಗ್ವಾಲಿಯರ್: ಪೆಟ್ರೋಲ್ ಬಂಕ್ ಬಳಿ ಅಪಹರಣವಾಗಿದ್ದ ಕಾಲೇಜು ವಿದ್ಯಾರ್ಥಿನಿ ಹೋಟೆಲ್​ನಲ್ಲಿ ಪತ್ತೆ
ಅಪಹರಣ
ನಯನಾ ರಾಜೀವ್
|

Updated on: Nov 21, 2023 | 10:27 AM

Share

ಗ್ವಾಲಿಯರ್​ನ ಪೆಟ್ರೋಲ್​ ಬಂಕ್ ಬಳಿಯಿಂದ ಅಪಹರಣವಾಗಿದ್ದ ಕಾಲೇಜು ವಿದ್ಯಾರ್ಥಿನಿ ಗುನಾದ ಹೋಟೆಲ್​ನಲ್ಲಿ ಪತ್ತೆಯಾಗಿದ್ದಾಳೆ. ಗ್ವಾಲಿಯರ್‌ನ ಹಿರಿಯ ಪೊಲೀಸ್ ಅಧೀಕ್ಷಕ ರಾಜೇಶ್ ಸಿಂಗ್ ಚಂದೇಲ್ ಮಾತನಾಡಿ, ಇಬ್ಬರು ಆರೋಪಿಗಳಲ್ಲಿ ಒಬ್ಬನನ್ನು ಲಹರ್‌ನಲ್ಲಿ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಸೋಮವಾರ ಗ್ವಾಲಿಯರ್‌ನ ನಾಕಾ ಚಂದ್ರವದ್​ನ ಪೆಟ್ರೋಲ್ ಬಂಕ್ ಬಳಿ ಅಪಹರಣಕ್ಕೊಳಗಾಗಿದ್ದ 19 ವರ್ಷದ ವಿದ್ಯಾರ್ಥಿನಿ ಗುನಾದಲ್ಲಿನ ಲಾಡ್ಜ್‌ನಲ್ಲಿ ಪತ್ತೆಯಾಗಿದ್ದಾಳೆ. ಆಕೆಯನ್ನು ಮೋಟರ್‌ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದರು. ಒಬ್ಬ ವ್ಯಕ್ತಿಯನ್ನು ಲಾಹರ್‌ನಲ್ಲಿ ಬಂಧಿಸಲಾಗಿದೆ, ಎಸ್‌ಎಸ್‌ಪಿ ಮಂಗಳವಾರ ತಿಳಿಸಿದ್ದಾರೆ.

ಪ್ರಕರಣದ ತನಿಖೆಗಾಗಿ ಎರಡು ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಸೋಮವಾರ ಬೆಳಗ್ಗೆ ಗ್ವಾಲಿಯರ್‌ನ ಝಾನ್ಸಿ ರಸ್ತೆ ಪ್ರದೇಶದಲ್ಲಿ ಹಗಲು ಹೊತ್ತಿನಲ್ಲಿ ಬಸ್‌ನಿಂದ ಇಳಿದಾಗ ಬೈಕ್‌ನಲ್ಲಿ ಬಂದ ಇಬ್ಬರು ಮಹಿಳೆಯನ್ನು ಅಪಹರಿಸಿದ್ದಾರೆ.

ಜಿಲ್ಲೆಯ ಝಾನ್ಸಿ ರಸ್ತೆ ಪೊಲೀಸ್ ಠಾಣೆ ವ್ಯಾಪ್ತಿಯ ಪೆಟ್ರೋಲ್ ಬಂಕ್ ಬಳಿ ಸೋಮವಾರ ಬೆಳಗ್ಗೆ 9:30ರ ಸುಮಾರಿಗೆ ಈ ಘಟನೆ ನಡೆದಿದೆ. ಪೆಟ್ರೋಲ್ ಪಂಪ್‌ನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಈ ಸಂಪೂರ್ಣ ದೃಶ್ಯ ಸೆರೆಯಾಗಿದೆ.

ಮತ್ತಷ್ಟು ಓದಿ: ವಿಪರೀತ ಸಾಲ, ದಿನ ಬೆಳಗಾದರೆ ನೂರಾರು ಫೋನ್​ಕಾಲ್​ಗಳು, ಅಪಹರಣ ನಾಟಕವಾಡಿ ತಂದೆ ಬಳಿ ಹಣಕ್ಕೆ ಬೇಡಿಕೆ ಇಟ್ಟ

ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಯುವಕರು ಆಕೆಯನ್ನು ಬೈಕ್ ಮೇಲೆ ಕೂರಿಸಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ. ಪೊಲೀಸರ ಪ್ರಕಾರ, ಮಹಿಳೆ ಭಿಂಡ್ ಜಿಲ್ಲೆಯ ನಿವಾಸಿಯಾಗಿದ್ದು, ಆಕೆ ತನ್ನ ಕುಟುಂಬದೊಂದಿಗೆ ಬಸ್ ಮೂಲಕ ಅಲ್ಲಿಗೆ ಬಂದಿದ್ದಳು.

ಝಾನ್ಸಿ ರಸ್ತೆಯ ಬಸ್ ನಿಲ್ದಾಣದಲ್ಲಿ ಆಕೆ ಬಸ್‌ನಿಂದ ಕೆಳಗಿಳಿದಿದ್ದು, ಈ ವೇಳೆ ಮೋಟಾರ್‌ಸೈಕಲ್‌ನಲ್ಲಿ ಇಬ್ಬರು ಯುವಕರು ಅಲ್ಲಿಗೆ ಬಂದು ಆಕೆಯನ್ನು ಸ್ಥಳದಿಂದ ಕರೆದೊಯ್ದ ಘಟನೆ ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದೆ. ಅಪಹರಣಕ್ಕೆ ಕಾರಣವೇನೆಂಬುದು ಇನ್ನೂ ತಿಳಿದುಬಂದಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್