AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬನಾರಸ್ ಹಿಂದೂ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ನಿರ್ಮಿಸಿದ ಗಿನ್ನಿಸ್​ ದಾಖಲೆ ಏನು ಗೊತ್ತಾ?

ಬನಾರಸ್ ಹಿಂದೂ ವಿಶ್ವವಿದ್ಯಾಲಯದ (BHU) ವಿದ್ಯಾರ್ಥಿನಿ ನೇಹಾ ಸಿಂಗ್ ನೈಸರ್ಗಿಕ ಬಣ್ಣಗಳನ್ನು ಮತ್ತು ಬಳಕೆ ಅವಧಿ ಮೀರಿದ ಮಸಾಲೆ ಪದಾರ್ಥಗಳನ್ನು ಬಳಸಿ ವಿಶ್ವದ ಅತಿದೊಡ್ಡ ವರ್ಣಚಿತ್ರವನ್ನು ರಚಿಸಿದ್ದಾರೆ.

ಬನಾರಸ್ ಹಿಂದೂ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ನಿರ್ಮಿಸಿದ ಗಿನ್ನಿಸ್​ ದಾಖಲೆ ಏನು ಗೊತ್ತಾ?
ನೇಹಾ ಸಿಂಗ್
Follow us
shruti hegde
| Updated By: ಸಾಧು ಶ್ರೀನಾಥ್​

Updated on:Dec 21, 2020 | 6:07 PM

ದೇಶದಲ್ಲಿ ಅನೇಕ ಪ್ರತಿಭಾವಂತರಿದ್ದಾರೆ. ಇತ್ತೀಚೆಗೆ ತಮಿಳುನಾಡಿನ ಬಾಲಕಿಯೊಬ್ಬಳು ಒಂದು ಗಂಟೆಯೊಳಗೆ 46 ಭಕ್ಷ್ಯಗಳನ್ನು ಮಾಡಿ ವಿಶ್ವ ದಾಖಲೆ ಮೆರೆದಿದ್ದಾಳೆ. ಅದೇ ರೀತಿ ಬನಾರಸ್​ ಹಿಂದೂ ವಿಶ್ವವಿದ್ಯಾಲಯದ (BHU) ವಿದ್ಯಾರ್ಥಿನಿ ನೇಹಾ ಸಿಂಗ್ ನೈಸರ್ಗಿಕ ಬಣ್ಣಗಳಿಂದ ಮತ್ತು ಬಳಕೆ ಅವಧಿ ಮುಗಿದ ಮಸಾಲೆ ಪದಾರ್ಥಗಳಿಂದ ವಿಶ್ವದಲ್ಲೇ ಅತಿ ದೊಡ್ಡ ಚಿತ್ರಕಲೆ ಬಿಡಿಸುವ ಮೂಲಕ  ಗಿನ್ನಿಸ್ ಬುಕ್ ಆಫ್ ವರ್ಲ್ಡ್​​ ರೆಕಾರ್ಡ್​ಗೆ ಪಾತ್ರಳಾಗಿದ್ದಾಳೆ.

ಉತ್ತರ ಪ್ರದೇಶದ ಬಲಿಯಾ ಜಿಲ್ಲೆಯ ಕೊತ್ವಾರಿ ಗ್ರಾಮದ ನೇಹಾ ಸಿಂಗ್ ಬನಾರಸ್ ಹಿಂದೂ ವಿಶ್ವವಿದ್ಯಾಲಯದ ವೈದಿಕ ವಿಜ್ಞಾನದ ವಿದ್ಯಾರ್ಥಿನಿ. ಅದೇ ವಿಶ್ವವಿದ್ಯಾಲಯದಲ್ಲಿ ಲಲಿತ ಕಲೆಯನ್ನು ಅಭ್ಯಾಸ ಮಾಡಿದಳು. ನೇಹಾ ಚಿತ್ರಿಸಿದ ಚಿತ್ರಕಲೆಯ ಗಾತ್ರ 62.72 ಚದರ ಮೀಟರ್​ನಷ್ಟಿದೆ. ಚಿತ್ರದಲ್ಲಿ ‘ಮೋಕ್ಷ್ ಕಾ ವೃಕ್ಷ್’(ಮೋಕ್ಷದ ವೃಕ್ಷ)ವನ್ನು ಚಿತ್ರಿಸಿದ್ದಾಳೆ.

ಮಸಾಲೆ ಪದಾರ್ಥಗಳನ್ನು ಬಿಸಾಕುತ್ತಾರೆ. ಇದನ್ನು ಉಪಯೋಗಕ್ಕೆ ಬಳಸಿಕೊಳ್ಳಬೇಕು ಎಂಬ ದೃಷ್ಟಿಯಿಂದ ಚಿತ್ರಕಲೆಯಲ್ಲಿ ಬಣ್ಣಗಳಿಗಾಗಿ ನೇಹಾ ಬಳಸಿಕೊಂಡಿದ್ದಾಳೆ.

ಬಲಿಯಾ ಜಿಲ್ಲೆಯ ಜಿಲ್ಲಾಧಿಕಾರಿ ಶ್ರೀಹರಿ ಪ್ರತಾಪ್ ಶಾಹಿ, ನೇಹಾ ಸಿಂಗ್ ಅವರ ಸಾಧನೆಯನ್ನು ಗುರುತಿಸಿ ಗೌರವಾರ್ಪಣೆ  ಕಾರ್ಯಕ್ರಮವನ್ನು ಆಯೋಜಿಸಿದ್ದರು. ಈ ವೇಳೆ, ನೇಹಾ ಸಿಂಗ್ ನೈಸರ್ಗಿಕ ಬಣ್ಣಗಳನ್ನು ಬಳಸಿಕೊಂಡು ವಿಶ್ವದ ಅತಿದೊಡ್ಡ ವರ್ಣಚಿತ್ರವನ್ನು ಬಿಡಿಸಿದ್ದಾರೆ. ಚಿತ್ರಕಲೆ 62.72 ಚದರ ಮೀಟರ್​ ಗಾತ್ರದಲ್ಲಿದೆ. ಗಿನ್ನಿಸ್ ವಿಶ್ವ ದಾಖಲೆಯಲ್ಲಿ ಇವರ ಹೆಸರನ್ನು ಸೇರಿಸಲಾಗಿದೆ ಎಂದು ಹೇಳಿದ್ದಾರೆ.

ಕೇವಲ 58 ನಿಮಿಷದಲ್ಲಿ 46 ವಿಧದ ಭಕ್ಷ್ಯಗಳ ತಯಾರಿಸಿ, ವಿಶ್ವ ದಾಖಲೆ ಸೃಷ್ಟಿಸಿದ ತಮಿಳುನಾಡಿನ ಬಾಲಕಿ!

Published On - 6:06 pm, Mon, 21 December 20

ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ