AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬನಾರಸ್ ಹಿಂದೂ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ನಿರ್ಮಿಸಿದ ಗಿನ್ನಿಸ್​ ದಾಖಲೆ ಏನು ಗೊತ್ತಾ?

ಬನಾರಸ್ ಹಿಂದೂ ವಿಶ್ವವಿದ್ಯಾಲಯದ (BHU) ವಿದ್ಯಾರ್ಥಿನಿ ನೇಹಾ ಸಿಂಗ್ ನೈಸರ್ಗಿಕ ಬಣ್ಣಗಳನ್ನು ಮತ್ತು ಬಳಕೆ ಅವಧಿ ಮೀರಿದ ಮಸಾಲೆ ಪದಾರ್ಥಗಳನ್ನು ಬಳಸಿ ವಿಶ್ವದ ಅತಿದೊಡ್ಡ ವರ್ಣಚಿತ್ರವನ್ನು ರಚಿಸಿದ್ದಾರೆ.

ಬನಾರಸ್ ಹಿಂದೂ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ನಿರ್ಮಿಸಿದ ಗಿನ್ನಿಸ್​ ದಾಖಲೆ ಏನು ಗೊತ್ತಾ?
ನೇಹಾ ಸಿಂಗ್
shruti hegde
| Edited By: |

Updated on:Dec 21, 2020 | 6:07 PM

Share

ದೇಶದಲ್ಲಿ ಅನೇಕ ಪ್ರತಿಭಾವಂತರಿದ್ದಾರೆ. ಇತ್ತೀಚೆಗೆ ತಮಿಳುನಾಡಿನ ಬಾಲಕಿಯೊಬ್ಬಳು ಒಂದು ಗಂಟೆಯೊಳಗೆ 46 ಭಕ್ಷ್ಯಗಳನ್ನು ಮಾಡಿ ವಿಶ್ವ ದಾಖಲೆ ಮೆರೆದಿದ್ದಾಳೆ. ಅದೇ ರೀತಿ ಬನಾರಸ್​ ಹಿಂದೂ ವಿಶ್ವವಿದ್ಯಾಲಯದ (BHU) ವಿದ್ಯಾರ್ಥಿನಿ ನೇಹಾ ಸಿಂಗ್ ನೈಸರ್ಗಿಕ ಬಣ್ಣಗಳಿಂದ ಮತ್ತು ಬಳಕೆ ಅವಧಿ ಮುಗಿದ ಮಸಾಲೆ ಪದಾರ್ಥಗಳಿಂದ ವಿಶ್ವದಲ್ಲೇ ಅತಿ ದೊಡ್ಡ ಚಿತ್ರಕಲೆ ಬಿಡಿಸುವ ಮೂಲಕ  ಗಿನ್ನಿಸ್ ಬುಕ್ ಆಫ್ ವರ್ಲ್ಡ್​​ ರೆಕಾರ್ಡ್​ಗೆ ಪಾತ್ರಳಾಗಿದ್ದಾಳೆ.

ಉತ್ತರ ಪ್ರದೇಶದ ಬಲಿಯಾ ಜಿಲ್ಲೆಯ ಕೊತ್ವಾರಿ ಗ್ರಾಮದ ನೇಹಾ ಸಿಂಗ್ ಬನಾರಸ್ ಹಿಂದೂ ವಿಶ್ವವಿದ್ಯಾಲಯದ ವೈದಿಕ ವಿಜ್ಞಾನದ ವಿದ್ಯಾರ್ಥಿನಿ. ಅದೇ ವಿಶ್ವವಿದ್ಯಾಲಯದಲ್ಲಿ ಲಲಿತ ಕಲೆಯನ್ನು ಅಭ್ಯಾಸ ಮಾಡಿದಳು. ನೇಹಾ ಚಿತ್ರಿಸಿದ ಚಿತ್ರಕಲೆಯ ಗಾತ್ರ 62.72 ಚದರ ಮೀಟರ್​ನಷ್ಟಿದೆ. ಚಿತ್ರದಲ್ಲಿ ‘ಮೋಕ್ಷ್ ಕಾ ವೃಕ್ಷ್’(ಮೋಕ್ಷದ ವೃಕ್ಷ)ವನ್ನು ಚಿತ್ರಿಸಿದ್ದಾಳೆ.

ಮಸಾಲೆ ಪದಾರ್ಥಗಳನ್ನು ಬಿಸಾಕುತ್ತಾರೆ. ಇದನ್ನು ಉಪಯೋಗಕ್ಕೆ ಬಳಸಿಕೊಳ್ಳಬೇಕು ಎಂಬ ದೃಷ್ಟಿಯಿಂದ ಚಿತ್ರಕಲೆಯಲ್ಲಿ ಬಣ್ಣಗಳಿಗಾಗಿ ನೇಹಾ ಬಳಸಿಕೊಂಡಿದ್ದಾಳೆ.

ಬಲಿಯಾ ಜಿಲ್ಲೆಯ ಜಿಲ್ಲಾಧಿಕಾರಿ ಶ್ರೀಹರಿ ಪ್ರತಾಪ್ ಶಾಹಿ, ನೇಹಾ ಸಿಂಗ್ ಅವರ ಸಾಧನೆಯನ್ನು ಗುರುತಿಸಿ ಗೌರವಾರ್ಪಣೆ  ಕಾರ್ಯಕ್ರಮವನ್ನು ಆಯೋಜಿಸಿದ್ದರು. ಈ ವೇಳೆ, ನೇಹಾ ಸಿಂಗ್ ನೈಸರ್ಗಿಕ ಬಣ್ಣಗಳನ್ನು ಬಳಸಿಕೊಂಡು ವಿಶ್ವದ ಅತಿದೊಡ್ಡ ವರ್ಣಚಿತ್ರವನ್ನು ಬಿಡಿಸಿದ್ದಾರೆ. ಚಿತ್ರಕಲೆ 62.72 ಚದರ ಮೀಟರ್​ ಗಾತ್ರದಲ್ಲಿದೆ. ಗಿನ್ನಿಸ್ ವಿಶ್ವ ದಾಖಲೆಯಲ್ಲಿ ಇವರ ಹೆಸರನ್ನು ಸೇರಿಸಲಾಗಿದೆ ಎಂದು ಹೇಳಿದ್ದಾರೆ.

ಕೇವಲ 58 ನಿಮಿಷದಲ್ಲಿ 46 ವಿಧದ ಭಕ್ಷ್ಯಗಳ ತಯಾರಿಸಿ, ವಿಶ್ವ ದಾಖಲೆ ಸೃಷ್ಟಿಸಿದ ತಮಿಳುನಾಡಿನ ಬಾಲಕಿ!

Published On - 6:06 pm, Mon, 21 December 20

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ