AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ನಾಯಿಯನ್ನು ಬಿಟ್ಟು ಬರಲೊಲ್ಲೆ, ನಮ್ಮನ್ನು ಕೇಳುವವರೇ ಇಲ್ಲ; ಉಕ್ರೇನ್​​ನಿಂದ ವಿಡಿಯೋ ಮಾಡಿದ ವಿದ್ಯಾರ್ಥಿ

ಇಂದು ನಾನು ಫ್ಲೈಟ್​​ನಲ್ಲಿ ಭಾರತಕ್ಕೆ ಹೋಗಬೇಕಿತ್ತು. ಆದರೆ ಅಧಿಕಾರಿಗಳು ಏನೇನೋ ಸರ್ಟಿಫಿಕೇಟ್​ ಕೇಳುತ್ತಿದ್ದಾರೆ. ಇಲ್ಲಿ ಊಟ-ತಿಂಡಿಯೇ ಸಿಗದಂತಾದಾಗ ಸರ್ಟಿಫಿಕೇಟ್​ ಹೇಗೆ ತರಲಿ ಎಂದು ರಿಶಬ್​ ಕೌಶಿಕ್​ ಹೇಳಿದ್ದಾರೆ.

Video: ನಾಯಿಯನ್ನು ಬಿಟ್ಟು ಬರಲೊಲ್ಲೆ, ನಮ್ಮನ್ನು ಕೇಳುವವರೇ ಇಲ್ಲ; ಉಕ್ರೇನ್​​ನಿಂದ ವಿಡಿಯೋ ಮಾಡಿದ ವಿದ್ಯಾರ್ಥಿ
ಉಕ್ರೇನ್​ನಲ್ಲಿರುವ ವಿದ್ಯಾರ್ಥಿ
TV9 Web
| Edited By: |

Updated on:Feb 27, 2022 | 6:03 PM

Share

ಉಕ್ರೇನ್​​ನಲ್ಲಿ ರಷ್ಯಾ ಆಕ್ರಮಣ (Russia-Ukraine War) ತೀವ್ರವಾಗಿದ್ದು, ಅಲ್ಲಿರುವ ಭಾರತೀಯ ವಿದ್ಯಾರ್ಥಿಗಳನ್ನು ರಕ್ಷಣೆ ಮಾಡುವ ಕಾರ್ಯ ನಡೆಯುತ್ತಿದೆ.  ಈ ಮಧ್ಯೆ ಉಕ್ರೇನ್​​ನಲ್ಲಿ ಇಂಜಿನಿಯರಿಂಗ್​ ಮೂರನೇ ವರ್ಷದಲ್ಲಿ ಓದುತ್ತಿರುವ ಭಾರತದ ವಿದ್ಯಾರ್ಥಿಯೊಬ್ಬರು ತಮ್ಮ ನಾಯಿಯನ್ನು ಬಿಟ್ಟು ಬರೋದಿಲ್ಲ ಎಂದು ಪಟ್ಟುಹಿಡಿದಿದ್ದಾರೆ. ಇವರ ಹೆಸರು ರಿಷಬ್​ ಕೌಶಿಕ್​. ಪೂರ್ವ ಉಕ್ರೇನ್​​ನ ನಗರವಾದ ಕಾರ್ಖೀವ್​​ನ ನ್ಯಾಶನಲ್​ ಯೂನಿವರ್ಸಿಟಿ ಆಫ್​ ರೇಡಿಯೋ ಎಲೆಕ್ಟ್ರಾನಿಕ್ಸ್​​ನಲ್ಲಿ ಓದುತ್ತಿದ್ದಾರೆ.  ನನ್ನನ್ನು ಏರ್​​ಲಿಫ್ಟ್ ಮಾಡಿದಾಗ ನಾಯಿಯನ್ನೂ ನನ್ನೊಂದಿಗೆ ಕರೆದೊಯ್ಯಬೇಕು. ಇದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಸಿದ್ಧಮಾಡಿಟ್ಟುಕೊಳ್ಳಲು ಪ್ರಯತ್ನಿಸುತ್ತಲೇ ಇದ್ದೇನೆ. ಆದರೆ ಅಧಿಕಾರಿಗಳು ಒಂದಾದ ಮೇಲೆ ಒಂದರಂತೆ ದಾಖಲೆಗಳನ್ನು ಕೇಳುತ್ತಿರುವುದರಿಂದ ವಿಳಂಬವಾಗುತ್ತಿದೆ ಎಂದು ರಿಶಬ್​ ಹೇಳಿದ್ದಾರೆ.

ಫೆ.18ರಿಂದಲೂ ನಾನು ಭಾರತಕ್ಕೆ ವಾಪಸ್ ಬರಲು ಪ್ರಯತ್ನ ಮಾಡುತ್ತಿದ್ದೇನೆ. ನನ್ನ ಮತ್ತು ನಾನು ಸಾಕಿರುವ ನಾಯಿಯ ಪಾಸ್​ಪೋರ್ಟ್​ಗಳನ್ನು ಭಾರತದ ರಾಯಭಾರಿ ಕಚೇರಿಗೆ ಕಳಿಸಿದ್ದೇನೆ. ಆದರೆ ಅಧಿಕಾರಿಗಳು ಏರ್​ ಟಿಕೆಟ್​ ಇದೆಯಾ ಎಂದು ಪ್ರಶ್ನಿಸುತ್ತಿದ್ದಾರೆ. ಉಕ್ರೇನ್​​ನಲ್ಲಿ ವಾಯುಮಾರ್ಗವೆಲ್ಲ ಬಂದ್ ಆಗಿದೆ. ಹೀಗಿರುವಾಗ ಟಿಕೆಟ್​ ಎಲ್ಲಿಂದ ಸಿಗುತ್ತದೆ? ಇಲ್ಲಿ ಊಟ-ತಿಂಡಿ-ನೀರು ಏನೂ ಸಿಗುತ್ತಿಲ್ಲ. ಜನರು ಬಂಕರ್​ಗಳಲ್ಲಿ ಇದ್ದಾರೆ. ನಾನೂ ಕೂಡ ಕೀವ್​​ನ ಬಂಕರ್​​ನಲ್ಲಿದ್ದೆ. ಆದರೆ ತುಂಬ ಚಳಿ ಇದ್ದ ಕಾರಣ ನಾಯಿಯನ್ನು ಕರೆದುಕೊಂಡು, ಅಲ್ಲಿಂದ ಬರಬೇಕಾಯಿತು ಎಂದು ರಿಶಬ್​ ಹೇಳಿಕೊಂಡಿದ್ದಾರೆ. ಅಷ್ಟೇ ಅಲ್ಲ, ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರನ್ನೂ ಸಂಪರ್ಕಿಸಿದ್ದೆ. ಅವರೂ ಸಹ ಸರಿಯಾಗಿ ಮಾತನಾಡಲಿಲ್ಲ ಎಂದು ರಿಶಬ್​ ಆರೋಪಿಸಿದ್ದಾರೆ.

ಇಂದು ನಾನು ಫ್ಲೈಟ್​​ನಲ್ಲಿ ಭಾರತಕ್ಕೆ ಹೋಗಬೇಕಿತ್ತು. ಆದರೆ ಅಧಿಕಾರಿಗಳು ಏನೇನೋ ಸರ್ಟಿಫಿಕೇಟ್​ ಕೇಳುತ್ತಿದ್ದಾರೆ. ಇಲ್ಲಿ ಊಟ-ತಿಂಡಿಯೇ ಸಿಗದಂತಾದಾಗ ಸರ್ಟಿಫಿಕೇಟ್​ ಹೇಗೆ ತರಲಿ. ನನ್ನ ಬಳಿ ಇರುವುದು ನಾನು ಕಾರ್ಖೀವ್​​ನಲ್ಲಿ ರಕ್ಷಣೆ ಮಾಡಿದ ನಾಯಿ. ಈ ಪಪ್ಪಿ ಈಗಾಗಲೇ ಹೆದರಿಕೊಂಡಿದೆ. ಇಲ್ಲಿನ ಪರಿಸ್ಥಿತಿಯಿಂದಾಗಿ ಇಡೀದಿನ ಕೂಗುತ್ತಿರುತ್ತದೆ. ದಯವಿಟ್ಟು ಭಾರತ ಸರ್ಕಾರ ಈ ಬಗ್ಗೆ ಗಮನ ಹರಿಸಬೇಕು. ಹಲವು ರೀತಿಯ ಫೇಕ್​ನ್ಯೂಸ್​ಗಳು ಹರಿದಾಡುತ್ತಿವೆ. ನಮಗೆ ಮಾತ್ರ ಯಾರನ್ನೂ ಸಂಪರ್ಕಿಸಲು, ಏನು ಮಾಡಲೂ ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಕೊಲೆಗಡುಕರಿಗೆ ಶರಿಯತ್ ಕಾನೂನು ಪ್ರಕಾರ ಶಿಕ್ಷೆ ನೀಡಿ; ಉಡುಪಿಯಲ್ಲಿ ಶಾಸಕ ರಘುಪತಿ ಭಟ್ ಉಗ್ರ ಭಾಷಣ

Published On - 3:46 pm, Sun, 27 February 22

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ